September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿನಿಧನ

ವೇಣೂರು: ಕೋಮ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಶಿಲ್ಪ ಸಾವು: ಮನೆಯವರ ಪ್ರತಿಭಟನೆ

ವೇಣೂರು: ಹೆರಿಗೆ ನಂತರ ಕೋಮ ಸ್ಥಿತಿಗೆ ತಲುಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಣೂರು ನಿವಾಸಿ ಶಿಲ್ಪ ಆಸ್ಪತ್ರೆಯಲ್ಲಿ ಮೃತಪಟ್ಟ ಹಾಗೂ ಶಿಲ್ಪರ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮೃತರ ಮನೆಯವರು ಆಸ್ಪತ್ರೆಯಲ್ಲಿ ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ಜು.25 ರಂದು ನಡೆಯಿತು.

ಬೆಳ್ತಂಗಡಿಯ ವೇಣೂರು ನಿವಾಸಿ ಪ್ರದೀಪ್ ಅವರ ಪತ್ನಿ ಶಿಲ್ಪಾ ಮೃತ ದುರ್ದೈವಿ. ಎರಡನೇ ಡೆಲಿವರಿ ಇದಾಗಿದ್ದು, ಆಪರೇಷನ್ ಮೂಲಕ ಮಗುವನ್ನು ಹೊರ ತೆಗೆಯಲಾಗಿದ್ದು ,ಮಗು ಸುರಕ್ಷಿತವಾಗಿದೆ. ಆದರೆ ಹೆರಿಗೆ ಬಳಿಕ ತಾಯಿ ಒಂದು ತಿಂಗಳು ಕೋಮಾದಲ್ಲಿದ್ದು, ಸೋಮವಾರ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ವಿವರ: ಗಭಿ೯ಣಿಯಾಗಿದ್ದ ಶಿಲ್ಪಾ ಅವರು ಮನೆಯವರ ಜೊತೆಗೆ ತಿಂಗಳ ಹಿಂದೆ ಟೆಸ್ಟಿಗೆಂದು ಆಸ್ಪತ್ರೆಗೆ ತೆರಳಿದ್ದರು. ಅಲ್ಲಿ ವೈಧ್ಯರ ಸೂಚನೆಯಂತೆ ಅಡ್ಮಿಟ್ ಆಗಿದ್ದು, ಆಪರೇಷನ್ ಮಾಡಿ, ಮಗುವನ್ನು ಹೊರ ತೆಗೆಯಲಾಯಿತು. ಆದರೆ ಶಿಲ್ಪಾ ಅವರಿಗೆ ರಕ್ತಸ್ರಾವ ಹೆಚ್ಚಾಗ, ಗರ್ಭಕೋಶದಲ್ಲಿ ತೊಂದರೆ ಇದೆಯೆಂದು ಗರ್ಭಕೋಶವನ್ನು ತೆಗೆಯಲಾಯಿತ್ತೇನ್ನಲಾಗುತ್ತಿದೆ. ಅಷ್ಟರಲ್ಲಿ ಶಿಲ್ಪಾ ಅವರು ಕೋಮ ಸ್ಥಿತಿಗೆ ತಲುಪಿದ್ದರು.

ಸುಮಾರು 1 ತಿಂಗಳು ಕೋಮಾದಲ್ಲಿದ್ದ ಶಿಲ್ಪಾ ಅವರು ಜು.24 ರಂದು ಮೃತಪಟ್ಟಿದ್ದಾರೆ. ಶಿಲ್ಪರ ಈ ಸ್ಥಿತಿಗೆ
ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಮೃತರ ಮನೆಯವರು, ವಿಶ್ವಕರ್ಮ ಸಮಾಜದವರು ಹಾಗೂ ಸಂಘಟನೆ ಪ್ರಮುಖರು ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು. ವೈದ್ಯರ ನಿರ್ಲಕ್ಷ್ಯಕ್ಕೆ ಅಮಾಯಕರು ಬಲಿಯಾಗಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು

Related posts

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಟ

Suddi Udaya

ಕೋರ್ಟ್ ಆದೇಶ ಉಲ್ಲಂಘಿಸಿ ಯಾವುದೇ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿಯವರಿಗೆ ಎಚ್ಚರಿಕೆ: ಪ್ರತಿಬಂಧಕಾದೇಶ ಉಲ್ಲಂಘನೆ ಆಗದಂತೆ ನೋಡಿಕೊಳ್ಳಲು ಸರಕಾರ ಹಾಗೂ ಗೃಹ ಇಲಾಖೆಗೆ, ಉನ್ನತ ಪೊಲೀಸ್ ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣಮುಹೂರ್ತ, ಕ್ಷೇತ್ರಪಾಲ ಪ್ರತಿಷ್ಠೆ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣೆ, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಂದ ಮತದಾನ

Suddi Udaya

ಅಗ್ನಿವೀರ್ ಗೆ ಆಯ್ಕೆಯಾದ ಹತ್ಯಡ್ಕದ ಭರತ್‌ಗೆ ಕಪಿಲ ಕೇಸರಿ ಯುವಕ ಮಂಡಲದಿಂದ ಸನ್ಮಾನ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya
error: Content is protected !!