22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿನಿಧನ

ವೇಣೂರು: ಕೋಮ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಶಿಲ್ಪ ಸಾವು: ಮನೆಯವರ ಪ್ರತಿಭಟನೆ

ವೇಣೂರು: ಹೆರಿಗೆ ನಂತರ ಕೋಮ ಸ್ಥಿತಿಗೆ ತಲುಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಣೂರು ನಿವಾಸಿ ಶಿಲ್ಪ ಆಸ್ಪತ್ರೆಯಲ್ಲಿ ಮೃತಪಟ್ಟ ಹಾಗೂ ಶಿಲ್ಪರ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮೃತರ ಮನೆಯವರು ಆಸ್ಪತ್ರೆಯಲ್ಲಿ ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ಜು.25 ರಂದು ನಡೆಯಿತು.

ಬೆಳ್ತಂಗಡಿಯ ವೇಣೂರು ನಿವಾಸಿ ಪ್ರದೀಪ್ ಅವರ ಪತ್ನಿ ಶಿಲ್ಪಾ ಮೃತ ದುರ್ದೈವಿ. ಎರಡನೇ ಡೆಲಿವರಿ ಇದಾಗಿದ್ದು, ಆಪರೇಷನ್ ಮೂಲಕ ಮಗುವನ್ನು ಹೊರ ತೆಗೆಯಲಾಗಿದ್ದು ,ಮಗು ಸುರಕ್ಷಿತವಾಗಿದೆ. ಆದರೆ ಹೆರಿಗೆ ಬಳಿಕ ತಾಯಿ ಒಂದು ತಿಂಗಳು ಕೋಮಾದಲ್ಲಿದ್ದು, ಸೋಮವಾರ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ವಿವರ: ಗಭಿ೯ಣಿಯಾಗಿದ್ದ ಶಿಲ್ಪಾ ಅವರು ಮನೆಯವರ ಜೊತೆಗೆ ತಿಂಗಳ ಹಿಂದೆ ಟೆಸ್ಟಿಗೆಂದು ಆಸ್ಪತ್ರೆಗೆ ತೆರಳಿದ್ದರು. ಅಲ್ಲಿ ವೈಧ್ಯರ ಸೂಚನೆಯಂತೆ ಅಡ್ಮಿಟ್ ಆಗಿದ್ದು, ಆಪರೇಷನ್ ಮಾಡಿ, ಮಗುವನ್ನು ಹೊರ ತೆಗೆಯಲಾಯಿತು. ಆದರೆ ಶಿಲ್ಪಾ ಅವರಿಗೆ ರಕ್ತಸ್ರಾವ ಹೆಚ್ಚಾಗ, ಗರ್ಭಕೋಶದಲ್ಲಿ ತೊಂದರೆ ಇದೆಯೆಂದು ಗರ್ಭಕೋಶವನ್ನು ತೆಗೆಯಲಾಯಿತ್ತೇನ್ನಲಾಗುತ್ತಿದೆ. ಅಷ್ಟರಲ್ಲಿ ಶಿಲ್ಪಾ ಅವರು ಕೋಮ ಸ್ಥಿತಿಗೆ ತಲುಪಿದ್ದರು.

ಸುಮಾರು 1 ತಿಂಗಳು ಕೋಮಾದಲ್ಲಿದ್ದ ಶಿಲ್ಪಾ ಅವರು ಜು.24 ರಂದು ಮೃತಪಟ್ಟಿದ್ದಾರೆ. ಶಿಲ್ಪರ ಈ ಸ್ಥಿತಿಗೆ
ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಮೃತರ ಮನೆಯವರು, ವಿಶ್ವಕರ್ಮ ಸಮಾಜದವರು ಹಾಗೂ ಸಂಘಟನೆ ಪ್ರಮುಖರು ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು. ವೈದ್ಯರ ನಿರ್ಲಕ್ಷ್ಯಕ್ಕೆ ಅಮಾಯಕರು ಬಲಿಯಾಗಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು

Related posts

ಜೆಸಿಐ ಭಾರತದ ವಲಯ 15ರ ಉಪಾಧ್ಯಕ್ಷರಾಗಿ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ಆಯ್ಕೆ

Suddi Udaya

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ ಮಾಡಿದ ಜಯಂತ್ ಟಿ ವಿರುದ್ಧ ಪ್ರಕರಣ ದಾಖಲು

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಬೆಳ್ತಂಗಡಿ: ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಕಾಂಗ್ರೇಸ್ ಸೇರ್ಪಡೆ

Suddi Udaya

ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ: ರಂಗ ಮಂಟಪ ಲೋಕಾರ್ಪಣೆ, ನವದುರ್ಗೆಯರ ಮೂರ್ತಿ ಪ್ರತಿಷ್ಠೆ, ದೇವರ ಪ್ರಭಾವಳಿ ಸಮರ್ಪಣೆ: ಇಂದು (ಫೆ.5) ನವ ಗುಳಿಗಗಳ ವಿಶೇಷ ಗಗ್ಗರ ಸೇವೆ

Suddi Udaya

ಉಜಿರೆ ಶ್ರೀ ಧ.ಮಂ.ಕಾಲೇಜಿನಲ್ಲಿ “MS Excel with Power BI” ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮ

Suddi Udaya
error: Content is protected !!