25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

ಉಜಿರೆ: ದೇಶದ ಆಂತರಿಕ ಸಮಸ್ಯೆಗಳನ್ನು ಹೋಗಲಾಡಿಸಲು ಪ್ರಯತ್ನಿಸುವ ಮೂಲಕ ದೇಶವಾಸಿಗಳು ಕಾರ್ಗಿಲ್ ವಿಜಯ ದಿವಸವನ್ನು ಅರ್ಥಪೂರ್ಣವಾಗಿ ಆಚರಿಸಲು ಸಾಧ್ಯ ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಅಭಿಪ್ರಾಯಪಟ್ಟರು.

ಕಾಲೇಜಿನಲ್ಲಿ ಇಂದು (ಜು.26) ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್) ಘಟಕಗಳು ಹಾಗೂ ಎನ್.ಸಿ.ಸಿ. ಘಟಕಗಳ ಸಹಯೋಗದಲ್ಲಿ ಆಯೋಜಿಸಲಾದ ಕಾರ್ಗಿಲ್ ವಿಜಯ ದಿವಸ ಆಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶ್ರೀರಾಮಚಂದ್ರನ ಮಾತಿನಂತೆ ತಾಯಿ ಮತ್ತು ಮಾತೃಭೂಮಿ ಸ್ವರ್ಗಕ್ಕಿಂತಲೂ ಮಿಗಿಲು. ಮಾತೃಭೂಮಿಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಬಹುದು. ಆದರೆ ದೇಶದ ಗಡಿಯನ್ನು ಸೈನಿಕರು ರಕ್ಷಿಸುತ್ತಿದ್ದು, ಆಂತರಿಕ ರಕ್ಷಣೆಯನ್ನು ದೇಶವಾಸಿಗಳು ಮಾಡಬೇಕಾದ ಅಗತ್ಯವಿದೆ ಎಂದು ಅವರು ಹೇಳಿದರು.

ಎನ್ನೆಸ್ಸೆಸ್ ಯೋಜನಾಧಿಕಾರಿ ಡಾ. ಮಹೇಶ್ ಕುಮಾರ್ ಶೆಟ್ಟಿ ಎಚ್. ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ಮುಂದಿನ ವರ್ಷ ಕಾರ್ಗಿಲ್ ವಿಜಯ ದಿವಸಕ್ಕೆ ಇಪ್ಪತ್ತೈದು ವರ್ಷಗಳು ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ಕಾಲೇಜಿನ ಎನ್ನೆಸ್ಸೆಸ್ ಘಟಕದ ವತಿಯಿಂದ ಇಪ್ಪತ್ತೈದು ಮಹತ್ವಪೂರ್ಣ ಕಾರ್ಯಕ್ರಮಗಳನ್ನು ಪ್ರಸಕ್ತ ವರ್ಷದಿಂದ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಕಾರ್ಗಿಲ್ ವಿಜಯ ದಿವಸ ಕುರಿತಂತೆ ಎನ್.ಸಿ.ಸಿ. ಘಟಕದ ವತಿಯಿಂದ ರಚಿಸಲಾದ ಭಿತ್ತಿಪತ್ರಿಕೆಯನ್ನು ಪ್ರಾಂಶುಪಾಲರು ಅನಾವರಣಗೊಳಿಸಿದರು. ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

ಕಾಲೇಜಿನ ಕುಲಸಚಿವ (ಆಡಳಿತ) ಪ್ರೊ. ಶಶಿಶೇಖರ ಎನ್. ಕಾಕತ್ಕರ್, ಕಲಾ ನಿಕಾಯದ ಡೀನ್ ಡಾ. ಶಲೀಪ್ ಕುಮಾರಿ, ಎನ್.ಸಿ.ಸಿ. ಅಧಿಕಾರಿಗಳಾದ ಲೆಫ್ಟಿನೆಂಟ್ ಕಮಾಂಡರ್ ಡಾ. ಶ್ರೀಧರ ಭಟ್, ಲೆಫ್ಟಿನೆಂಟ್ ಭಾನುಪ್ರಕಾಶ್ ಬಿ.ಇ. ಹಾಗೂ ಲೆಫ್ಟಿನೆಂಟ್ ಶುಭಾರಾಣಿ ಪಿ.ಎಸ್., ಎನ್ನೆಸ್ಸೆಸ್ ಯೋಜನಾಧಿಕಾರಿ ಪ್ರೊ. ದೀಪಾ ಆರ್.ಪಿ., ಎನ್.ಸಿ.ಸಿ. ಕೆಡೆಟ್ ಗಳು ಹಾಗೂ ಎನ್ನೆಸ್ಸೆಸ್ ಸ್ವಯಂಸೇವಕರು ಉಪಸ್ಥಿತರಿದ್ದರು.  

ವಿದ್ಯಾರ್ಥಿನಿ ಸಿಂಚನಾ ಕಾರ್ಯಕ್ರಮ ನಿರ್ವಹಿಸಿದರು.

Related posts

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ
ಮಕ್ಕಳ ಶಿಕ್ಷಣಕ್ಕಾಗಿ ರೂ. 2೦ ಸಾವಿರ ನೆರವು

Suddi Udaya

ಶಿಶಿಲ: ಪೇರಿಕೆ ನಿವಾಸಿ ಸುಪ್ರೀತಾ ಅನಾರೋಗ್ಯದಿಂದ ನಿಧನ

Suddi Udaya

ಸಮಾಜ ಸೇವಾಟ್ರಸ್ಟ್ ನ ಸಂಸ್ಥಾಪಕ ರವಿ ಕಕ್ಕೆಪದವು ರವರ ಮಾಗದರ್ಶನದಲ್ಲಿ ಕುಮಾರಧಾರದಿಂದ ಕಾಶಿಕಟ್ಟೆಯವರೆಗೆ ಸ್ವಚ್ಛತಾ ಕಾರ್ಯ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸರಕಾರಕ್ಕೆ ಮನವಿ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ಗಣೇಶ್ ಗೌಡ ನೆಲ್ಲಿಪಲ್ಕೆ ಬೆಂಬಲ

Suddi Udaya

ಉಜಿರೆ ಮಾಚಾರು ಜಾತಿ ನಿಂದನೆ ಮಾಡಿ ಹಲ್ಲೆ ಆರೋಪ: ಯುವಕ ಆಸ್ಪತ್ರೆಗೆ ದಾಖಲು

Suddi Udaya
error: Content is protected !!