September 6, 2026
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿನಾಚರಣೆ

ಉಜಿರೆ: ‘ ಯುದ್ದವೆಂದರೆ ರೋಚಕವಾದದ್ದು ಅದರಲ್ಲೂ ಕಾರ್ಗಿಲ್ ಯುದ್ಧ ಹಾಗೂ ವಿಜಯವು ಅತಿರೋಚಕ . ಕಾರ್ಗಿಲ್ ಪ್ರದೇಶವು ಯಾವಾಗಲೂ ಹಿಮದಿಂದ ಆವೃತವಾಗಿರುವ ದುರ್ಗಮ ಪ್ರದೇಶ ಹಾಗೆಯೇ ಹಿಮದಿಂದ ಅನೇಕ ಖಾಯಿಲೆಗಳಿಗೆ ಆಸ್ಪದವಿರುವ ಪ್ರದೇಶವೂ ಆಗಿದೆ. ಇಲ್ಲಿ ಪಾಕಿಸ್ತಾನ ಆಕ್ರಮಣ ಮಾಡಿದಾಗ ನಮ್ಮ ಭಾರತೀಯ ಸೇನೆಯ ಯೋಧರು ಹೋರಾಡಿ ವಿಜಯ ಸಂಪಾದಿಸಿದ್ದು ಅವಿಸ್ಮರಣೀಯ ‘ ಎಂದು ಭಾರತೀಯ ಸೇನೆಯ ಮಾಜಿ ಯೋಧರಾದ ಉಜಿರೆ ಬಡೆಕೊಟ್ಟುವಿನ ವಿಕ್ಟರ್ ಕ್ರಾಸ್ತಾ ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಉಜಿರೆಯ ಸಿದ್ದವನದಲ್ಲಿ ನಡೆದ ಕಾರ್ಗಿಲ್ ವಿಜಯ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಇವರು ವಿದ್ಯಾರ್ಥಿಗಳಿಗೆ ಸೇನೆಗೆ ಸೇರುವ ಬಗ್ಗೆ ಮಾಹಿತಿ ನೀಡಿದರು. ಸೇನೆಯಲ್ಲಿ ಇದ್ದರೂ ಬೆಲೆ ಇದೆ ಸತ್ತರೂ ಬೆಲೆ ಇದೆ ಎಂಬುದಾಗಿ ಈ ಸಂದರ್ಭದಲ್ಲಿ ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಹ ಪ್ರಾಚಾರ್ಯ ಡಾ. ರಾಜೇಶ್ ಬಿ ಅವರು ‘ ಯುವಕರಲ್ಲಿ ದೇಶ ಪ್ರೇಮ ಹೆಚ್ಚಾಗಬೇಕಾದರೆ ಹಾಗೂ ಸೈನಿಕರಿಗೆ ಗೌರವ ಸಲ್ಲಿಸಲು ಕಾರ್ಗಿಲ್ ದಿನದಂತಹ ಕಾರ್ಯಕ್ರಮ ಅಗತ್ಯ ‘ ಎಂದು ನುಡಿದರು.

ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ವಿದ್ಯಾರ್ಥಿ ಬೋರೇಶ್ ಅವರು ಕಾರ್ಗಿಲ್ ವಿಜಯ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಸಿದ್ದವನ ಗುರುಕುಲದ ಪಾಲಕರಾದ ಮಾಚಾರು ಕೇಶವ ನಾಯ್ಕ್ ಉಪಸ್ಥಿತರಿದ್ದು ಶುಭ ಹಾರೈಸಿದರು.

ರಾ.ಸೇ ಯೋಜನೆಯ ನಾಯಕ ಸುದರ್ಶನ ನಾಯಕ್ ಸ್ವಾಗತಿಸಿ , ಆದಿತ್ಯ ವಂದಿಸಿದರು. ದಿವಿನ್ ನಿರೂಪಿಸಿದರು.

Related posts

ಶಿರ್ಲಾಲು: ಸುನಿಲ್ ಕುಮಾರ್ ಜೈನ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಕೆಸರ್ದ ಕಂಡೊಂಡು ಕುಸಲ್ದ ಗೊಬ್ಬುಲು ಕಾರ್ಯಕ್ರಮದ ಉದ್ಘಾಟನೆ

Suddi Udaya

ಮುಂಡಾಜೆ ಅಗರಿಯಲ್ಲಿ ಪ್ರಾಣಕ್ಕೆ ಕಂಟಕ ವಾಗಿರುವ ವಿದ್ಯುತ್ ತಂತಿ.

Suddi Udaya

ಶಿಲಾ೯ಲು ಗ್ರಾಮ ಸಭೆಯಲ್ಲಿ ಹೊಡೆದಾಟ: ಇತ್ತಂಡಗಳಿಂದ ವೇಣೂರು ಪೊಲೀಸರಿಗೆ ದೂರು – ಪ್ರಕರಣ ದಾಖಲು

Suddi Udaya

ವಿದ್ವತ್ ಪ.ಪೂ. ಕಾಲೇಜಿನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ವೇಣೂರು: ಸರಕಾರಿ ಪದವಿ ಪೂರ್ವ ಕಾಲೇಜಿನ ಹಳೆ ವಿದ್ಯಾರ್ಥಿಗಳ ಅಪೂರ್ವ ಸಮಾಗಮ “ಸ್ನೇಹ ಸಮ್ಮಿಲನ”

Suddi Udaya
error: Content is protected !!