23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 73ರ ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕದ ಕಿ.ಮೀ 40ರಿಂದ 75ರವರೆಗಿನ ರಸ್ತೆಯನ್ನು ಅಗಲೀಕರಣಗೊಳಿಸುವ ನಿಟ್ಟಿನಲ್ಲಿ 26.57295 ಹೆಕ್ಟೇರ್ ಜಾಗವನ್ನು ಭೂಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಸಾರ್ವಜನಿಕ ಪ್ರಕಟಣೆ ಹೊರಬಿದ್ದಿದೆ.

ರಸ್ತೆಗೆ ಭೂ ಸ್ವಾಧೀನವಾಗಲಿರುವ ಜಾಗದ ಭೂಮಾಲಕರು ಅಥವಾ ಯಾವುದೇ ರೀತಿಯ ಹಿತಾಸಕ್ತಿ ಉಳ್ಳವರು 21 ದಿನಗಳ ಒಳಗಾಗಿ ಆಕ್ಷೇಪಣೆಗಳನ್ನು ಭೂಸ್ವಾಧೀನ ಅಧಿಕಾರಿಗಳಿಗೆ ಲಿಖಿತವಾಗಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಕುಕ್ಕುಳ ಗ್ರಾಮದಲ್ಲಿ ಒಟ್ಟು 35 ಸರ್ವೆ ನಂಬ್ರಗಳು, ಪಾರೆಂಕಿ ಗ್ರಾಮದಲ್ಲಿ ಒಟ್ಟು 20 ಸರ್ವೆನಂಬ್ರಗಳು, ಮಾಲಾಡಿ ಗ್ರಾಮದಲ್ಲಿ ಒಟ್ಟು 35 ಸರ್ವೆನಂಬ್ರಗಳು, ಸೋಣಂದೂರು ಗ್ರಾಮದಲ್ಲಿ ಒಟ್ಟು 61 ಸರ್ವೆ ನಂಬ್ರಗಳು, ಕುವೆಟ್ಟು ಗ್ರಾಮದಲ್ಲಿ ಒಟ್ಟು 78 ಸರ್ವೆ ನಂಬ್ರಗಳು, ಬೆಳ್ತಂಗಡಿ ಕಸಬಾದಲ್ಲಿ ಒಟ್ಟು 144 ಸರ್ವೆನಂಬ್ರಗಳು, ಲಾಯಿಲ ಗ್ರಾಮದಲ್ಲಿ ಒಟ್ಟು 93 ಸರ್ವೆ ನಂಬ್ರಗಳು, ಉಜಿರೆ ಗ್ರಾಮದಲ್ಲಿ ಒಟ್ಟು 68 ಸರ್ವೆನಂಬ್ರಗಳು, ಕಲ್ಮಂಜ ಗ್ರಾಮದಲ್ಲಿ ಒಟ್ಟು20 ಸರ್ವೆ ನಂಬ್ರಗಳು, ಮುಂಡಾಜೆ ಗ್ರಾಮದಲ್ಲಿ ಒಟ್ಟು 61 ಸರ್ವೆ ನಂಬ್ರಗಳು, ಚಿಬಿದ್ರೆ ಗ್ರಾಮದಲ್ಲಿ ಒಟ್ಟು 41 ಸರ್ವೆ ನಂಬ್ರಗಳು, ಚಾರ್ಮಾಡಿಯಲ್ಲಿ ಒಟ್ಟು 88 ಸರ್ವೆ ನಂಬ್ರಗಳು ಈ ಸರ್ವೆ ನಂಬ್ರಗಳಲ್ಲಿ ರಸ್ತೆ ಹಾದು ಹೋಗುತ್ತಿದ್ದು, ರಸ್ತೆ ಅಗಲೀಕರಣ ಕಾಮಗಾರಿ ನಡೆಯಲಿದೆ. ಇದಕ್ಕಾಗಿ ಭೂ ಸ್ವಾಧೀನ ನಡೆಯಲಿದೆ.

Related posts

ಪಟ್ರಮೆ ಕಲ್ಲರಿಗೆ ನಿವಾಸಿ ಸದಾಶಿವ ದಾಸ್ ನಿಧನ

Suddi Udaya

ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕುಣಿತಾ ಭಜನಾ ಉದ್ಘಾಟನೆ

Suddi Udaya

ವೇಣೂರು ಸೊಸೈಟಿಯ ಮಾಜಿ ನಿರ್ದೇಶಕ ರಾಜೇಂದ್ರ ರಾವ್ ನಿಧನ

Suddi Udaya

ಮುಂಡಾಜೆ ಪ್ರೌಢಶಾಲೆಯ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

Suddi Udaya

ಕಾಂಗ್ರೆಸ್‌ ಕಾರ್ಯಕರ್ತರಾದ ಜೋಜಿ ಕಳೆಂಜ ಹಾಗೂ ಗಂಡಿಬಾಗಿಲಿನ ಅಜಿತ್ ಪಿ.ಎಮ್ ರವರು ಬಿಜೆಪಿ ಸೇರ್ಪಡೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!