22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 73ರ ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕದ ಕಿ.ಮೀ 40ರಿಂದ 75ರವರೆಗಿನ ರಸ್ತೆಯನ್ನು ಅಗಲೀಕರಣಗೊಳಿಸುವ ನಿಟ್ಟಿನಲ್ಲಿ 26.57295 ಹೆಕ್ಟೇರ್ ಜಾಗವನ್ನು ಭೂಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಸಾರ್ವಜನಿಕ ಪ್ರಕಟಣೆ ಹೊರಬಿದ್ದಿದೆ.

ರಸ್ತೆಗೆ ಭೂ ಸ್ವಾಧೀನವಾಗಲಿರುವ ಜಾಗದ ಭೂಮಾಲಕರು ಅಥವಾ ಯಾವುದೇ ರೀತಿಯ ಹಿತಾಸಕ್ತಿ ಉಳ್ಳವರು 21 ದಿನಗಳ ಒಳಗಾಗಿ ಆಕ್ಷೇಪಣೆಗಳನ್ನು ಭೂಸ್ವಾಧೀನ ಅಧಿಕಾರಿಗಳಿಗೆ ಲಿಖಿತವಾಗಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಕುಕ್ಕುಳ ಗ್ರಾಮದಲ್ಲಿ ಒಟ್ಟು 35 ಸರ್ವೆ ನಂಬ್ರಗಳು, ಪಾರೆಂಕಿ ಗ್ರಾಮದಲ್ಲಿ ಒಟ್ಟು 20 ಸರ್ವೆನಂಬ್ರಗಳು, ಮಾಲಾಡಿ ಗ್ರಾಮದಲ್ಲಿ ಒಟ್ಟು 35 ಸರ್ವೆನಂಬ್ರಗಳು, ಸೋಣಂದೂರು ಗ್ರಾಮದಲ್ಲಿ ಒಟ್ಟು 61 ಸರ್ವೆ ನಂಬ್ರಗಳು, ಕುವೆಟ್ಟು ಗ್ರಾಮದಲ್ಲಿ ಒಟ್ಟು 78 ಸರ್ವೆ ನಂಬ್ರಗಳು, ಬೆಳ್ತಂಗಡಿ ಕಸಬಾದಲ್ಲಿ ಒಟ್ಟು 144 ಸರ್ವೆನಂಬ್ರಗಳು, ಲಾಯಿಲ ಗ್ರಾಮದಲ್ಲಿ ಒಟ್ಟು 93 ಸರ್ವೆ ನಂಬ್ರಗಳು, ಉಜಿರೆ ಗ್ರಾಮದಲ್ಲಿ ಒಟ್ಟು 68 ಸರ್ವೆನಂಬ್ರಗಳು, ಕಲ್ಮಂಜ ಗ್ರಾಮದಲ್ಲಿ ಒಟ್ಟು20 ಸರ್ವೆ ನಂಬ್ರಗಳು, ಮುಂಡಾಜೆ ಗ್ರಾಮದಲ್ಲಿ ಒಟ್ಟು 61 ಸರ್ವೆ ನಂಬ್ರಗಳು, ಚಿಬಿದ್ರೆ ಗ್ರಾಮದಲ್ಲಿ ಒಟ್ಟು 41 ಸರ್ವೆ ನಂಬ್ರಗಳು, ಚಾರ್ಮಾಡಿಯಲ್ಲಿ ಒಟ್ಟು 88 ಸರ್ವೆ ನಂಬ್ರಗಳು ಈ ಸರ್ವೆ ನಂಬ್ರಗಳಲ್ಲಿ ರಸ್ತೆ ಹಾದು ಹೋಗುತ್ತಿದ್ದು, ರಸ್ತೆ ಅಗಲೀಕರಣ ಕಾಮಗಾರಿ ನಡೆಯಲಿದೆ. ಇದಕ್ಕಾಗಿ ಭೂ ಸ್ವಾಧೀನ ನಡೆಯಲಿದೆ.

Related posts

ನಡ ಸರಕಾರಿ ಪ್ರೌಢಶಾಲೆಗೆ ಶೇ. 97.82 ಫಲಿತಾಂಶ

Suddi Udaya

ಮಾ.30-ಎ.2: ಪಿಲ್ಯ ಬರಯ-ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನ ಬಾಡಿಗೆದಾರರಿಂದ ಸಹಾಯಧನ ಹಸ್ತಾಂತರ

Suddi Udaya

ಲಾಯಿಲ ಗುರಿಂಗಾನದಲ್ಲಿ ಗುಡ್ಡದಲ್ಲಿ ಭಾರಿ ಬೆಂಕಿ ಅನಾಹುತ:

Suddi Udaya

ಇಳಂತಿಲ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಎಸ್‌ಡಿಪಿಐ ಮನವಿ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಹಾಯಧನ ವಿತರಣೆ

Suddi Udaya
error: Content is protected !!