23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಲಾಯಿಲ : ಸವಣಾಲು ಆಯಿಲ ರಸ್ತೆಯ ಕತ್ಪಾಜೆಯಲ್ಲಿ ಗುಡ್ಡ ಕುಸಿತ: ಲಾಯಿಲ ಗ್ರಾ.ಪಂ. ವತಿಯಿಂದ ಎಚ್ಚರಿಕೆ ಫಲಕ ಅಳವಡಿಕೆ: ಘನ ವಾಹನಗಳ ಸಂಚಾರ ನಿರ್ಬಂಧ

ಬೆಳ್ತಂಗಡಿ:ಜಿಲ್ಲೆಯಾದ್ಯಂತ ಕಳೆದ ಒಂದು ವಾರಗಳಿಂದ ಭಾರೀ ಮಳೆಯಾಗುತ್ತಿದ್ದು ಬೆಳ್ತಂಗಡಿ ತಾಲೂಕಿನಲ್ಲೂ ಭಾರೀ ಪ್ರಮಾಣದ ಮಳೆಯಾಗುತ್ತಿದೆ. ತಾಲೂಕಿನ ಹಲವೆಡೆ ಗುಡ್ಡ ಕುಸಿತ ಸೇರಿದಂತೆ ಹಲವಾರು ಮನೆಗಳಿಗೆ ಹಾನಿ ಸಂಭವಿಸಿದೆ.

ಬೆಳ್ತಂಗಡಿ ತಾಲೂಕಿನ ನಗರಕ್ಕೆ ತಾಗಿಕೊಂಡಿರುವ ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣಾಲು ಆಯಿಲ ರಸ್ತೆಯ ಕತ್ಪಾಜೆ ಎಂಬಲ್ಲಿ ಗುಡ್ಡವೊಂದು ಕುಸಿದು ರಸ್ತೆ ಸಂಚಾರ ಅಪಾಯಕಾರಿಯಾಗಿದೆ. ಈ ರಸ್ತೆಯು 28 ಪರಿಶಿಷ್ಟ  ಪಂಗಡದ ಮನೆ  ಸೇರಿದಂತೆ ಸುಮಾರು 50 ಕ್ಕಿಂತಲೂ ಅಧಿಕ ಮನೆಗಳಿಗೆ ಸಂಪರ್ಕ ರಸ್ತೆಯಾಗಿದ್ದು. ಕುಸಿತದಿಂದಾಗ ರಸ್ತೆ ಸಂಪರ್ಕ ಕಡಿತಗೊಳ್ಳುವ ಆತಂಕದಲ್ಲಿ ಸ್ಥಳೀಯರಿದ್ದಾರೆ. ಕುಸಿತಗೊಂಡ ರಸ್ತೆಯಲ್ಲಿ ವಾಹನ ಸಂಚಾರ ಅಪಾಯಕಾರಿಯಾಗಿದೆ. ಈಗಾಗಲೇ ಲಾಯಿಲ ಗ್ರಾಮ ಪಂಚಾಯತ್ ವತಿಯಿಂದ ಎಚ್ಚರಿಕೆ ಫಲಕವನ್ನು ಅಳವಡಿಸಿ ಘನ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಕುಸಿದಿರುವ ರಸ್ತೆ ಬದಿಗೆ ವಾಹನ ಸೇರಿದಂತೆ ಯಾರೂ ಕೂಡ ಹೋಗದಂತೆ ಎಚ್ಚರಿಕೆ ಫಲಕ ಹಾಕಲಾಗಿದೆ. ಸ್ಥಳಕ್ಕೆ ಪಂಚಾಯತ್ ಅಧ್ಯಕ್ಷೆ ಆಶಾ ಸಲ್ದಾನ, ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ,ಹೇಮಚಂದ್ರ, ,ಲಾಯಿಲ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಡಿ.ಪಿ, ಲೆಕ್ಕ ಸಹಾಯಕಿ ಸುಪ್ರಿತಾ ಸೇರಿದಂತೆ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿಯನ್ನು ಮೇಲಾಧಿಕಾರಿಗಳಿಗೆ ರವಾನಿಸಿದ್ದಾರೆ.

Related posts

ಎಕ್ಸೆಲ್ ನ ಸ್ಟೇಟ್ ಟಾಪರ್ ಅನುಪ್ರಿಯರಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

Suddi Udaya

ದುರ್ಗಾ ಫ್ರೆಂಡ್ಸ್ ಕಲ್ಲಡ್ಕ : ಬೃಹತ್ ರಕ್ತದಾನ ಮತ್ತು ಉಚಿತ ಕಣ್ಣು ಹಾಗೂ ದಂತ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಗೈಡ್ಸ್ ನಿಂದ ವೀರಯೋಧ ಸ್ಕೌಟ್ ಕ್ಯಾಪ್ಟನ್ ಎಂ ವಿ ಪ್ರಾಂಜಲ್ ಗೆ ಶ್ರದ್ಧಾಂಜಲಿ

Suddi Udaya

ಗೇರುಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ

Suddi Udaya

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕೊಕ್ಕಡ: 9/11 ಆದೇಶ ವಿರೋಧಿಸಿ ಪಂಚಾಯತ್ ಮಟ್ಟದಲ್ಲಿ ಅಥವಾ ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ಅನುಮೋದನೆ ನೀಡುವಂತೆ ನಿರ್ಣಯ

Suddi Udaya
error: Content is protected !!