22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಲಾಯಿಲ : ಸವಣಾಲು ಆಯಿಲ ರಸ್ತೆಯ ಕತ್ಪಾಜೆಯಲ್ಲಿ ಗುಡ್ಡ ಕುಸಿತ: ಲಾಯಿಲ ಗ್ರಾ.ಪಂ. ವತಿಯಿಂದ ಎಚ್ಚರಿಕೆ ಫಲಕ ಅಳವಡಿಕೆ: ಘನ ವಾಹನಗಳ ಸಂಚಾರ ನಿರ್ಬಂಧ

ಬೆಳ್ತಂಗಡಿ:ಜಿಲ್ಲೆಯಾದ್ಯಂತ ಕಳೆದ ಒಂದು ವಾರಗಳಿಂದ ಭಾರೀ ಮಳೆಯಾಗುತ್ತಿದ್ದು ಬೆಳ್ತಂಗಡಿ ತಾಲೂಕಿನಲ್ಲೂ ಭಾರೀ ಪ್ರಮಾಣದ ಮಳೆಯಾಗುತ್ತಿದೆ. ತಾಲೂಕಿನ ಹಲವೆಡೆ ಗುಡ್ಡ ಕುಸಿತ ಸೇರಿದಂತೆ ಹಲವಾರು ಮನೆಗಳಿಗೆ ಹಾನಿ ಸಂಭವಿಸಿದೆ.

ಬೆಳ್ತಂಗಡಿ ತಾಲೂಕಿನ ನಗರಕ್ಕೆ ತಾಗಿಕೊಂಡಿರುವ ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣಾಲು ಆಯಿಲ ರಸ್ತೆಯ ಕತ್ಪಾಜೆ ಎಂಬಲ್ಲಿ ಗುಡ್ಡವೊಂದು ಕುಸಿದು ರಸ್ತೆ ಸಂಚಾರ ಅಪಾಯಕಾರಿಯಾಗಿದೆ. ಈ ರಸ್ತೆಯು 28 ಪರಿಶಿಷ್ಟ  ಪಂಗಡದ ಮನೆ  ಸೇರಿದಂತೆ ಸುಮಾರು 50 ಕ್ಕಿಂತಲೂ ಅಧಿಕ ಮನೆಗಳಿಗೆ ಸಂಪರ್ಕ ರಸ್ತೆಯಾಗಿದ್ದು. ಕುಸಿತದಿಂದಾಗ ರಸ್ತೆ ಸಂಪರ್ಕ ಕಡಿತಗೊಳ್ಳುವ ಆತಂಕದಲ್ಲಿ ಸ್ಥಳೀಯರಿದ್ದಾರೆ. ಕುಸಿತಗೊಂಡ ರಸ್ತೆಯಲ್ಲಿ ವಾಹನ ಸಂಚಾರ ಅಪಾಯಕಾರಿಯಾಗಿದೆ. ಈಗಾಗಲೇ ಲಾಯಿಲ ಗ್ರಾಮ ಪಂಚಾಯತ್ ವತಿಯಿಂದ ಎಚ್ಚರಿಕೆ ಫಲಕವನ್ನು ಅಳವಡಿಸಿ ಘನ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಕುಸಿದಿರುವ ರಸ್ತೆ ಬದಿಗೆ ವಾಹನ ಸೇರಿದಂತೆ ಯಾರೂ ಕೂಡ ಹೋಗದಂತೆ ಎಚ್ಚರಿಕೆ ಫಲಕ ಹಾಕಲಾಗಿದೆ. ಸ್ಥಳಕ್ಕೆ ಪಂಚಾಯತ್ ಅಧ್ಯಕ್ಷೆ ಆಶಾ ಸಲ್ದಾನ, ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ,ಹೇಮಚಂದ್ರ, ,ಲಾಯಿಲ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಡಿ.ಪಿ, ಲೆಕ್ಕ ಸಹಾಯಕಿ ಸುಪ್ರಿತಾ ಸೇರಿದಂತೆ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿಯನ್ನು ಮೇಲಾಧಿಕಾರಿಗಳಿಗೆ ರವಾನಿಸಿದ್ದಾರೆ.

Related posts

ಮುಂಡ್ರುಪ್ಪಾಡಿ: ಶಾಲೆತಡ್ಕ ರಾಮಣ್ಣ ಗೌಡರ ಮನೆ ಹಾಗೂ ಕೊಟ್ಟಿಗೆಗೆ ಬಿದ್ದ ಮರ: ಅಪಾರ ಹಾನಿ

Suddi Udaya

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ತಾಲೂಕು ಆಸ್ಪತ್ರೆಯ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲು

Suddi Udaya

ಗರ್ಡಾಡಿ: ಸತ್ಯ ಶೋಧಕ ವೇದಿಕೆಯಿಂದ ಹಚ್ಚಾಡಿ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳ: ಶ್ರೀ. ಮಂ.ಸ್ವಾ. ಅ. ಹಿ. ಪ್ರಾ. ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya

ಧರ್ಮಸ್ಥಳದಲ್ಲಿ 51ನೇ ವರ್ಷದ ಸಾಮೂಹಿಕ ವಿವಾಹ 201 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ನಿಂದ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya
error: Content is protected !!