September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಲಾಯಿಲ : ಸವಣಾಲು ಆಯಿಲ ರಸ್ತೆಯ ಕತ್ಪಾಜೆಯಲ್ಲಿ ಗುಡ್ಡ ಕುಸಿತ: ಲಾಯಿಲ ಗ್ರಾ.ಪಂ. ವತಿಯಿಂದ ಎಚ್ಚರಿಕೆ ಫಲಕ ಅಳವಡಿಕೆ: ಘನ ವಾಹನಗಳ ಸಂಚಾರ ನಿರ್ಬಂಧ

ಬೆಳ್ತಂಗಡಿ:ಜಿಲ್ಲೆಯಾದ್ಯಂತ ಕಳೆದ ಒಂದು ವಾರಗಳಿಂದ ಭಾರೀ ಮಳೆಯಾಗುತ್ತಿದ್ದು ಬೆಳ್ತಂಗಡಿ ತಾಲೂಕಿನಲ್ಲೂ ಭಾರೀ ಪ್ರಮಾಣದ ಮಳೆಯಾಗುತ್ತಿದೆ. ತಾಲೂಕಿನ ಹಲವೆಡೆ ಗುಡ್ಡ ಕುಸಿತ ಸೇರಿದಂತೆ ಹಲವಾರು ಮನೆಗಳಿಗೆ ಹಾನಿ ಸಂಭವಿಸಿದೆ.

ಬೆಳ್ತಂಗಡಿ ತಾಲೂಕಿನ ನಗರಕ್ಕೆ ತಾಗಿಕೊಂಡಿರುವ ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣಾಲು ಆಯಿಲ ರಸ್ತೆಯ ಕತ್ಪಾಜೆ ಎಂಬಲ್ಲಿ ಗುಡ್ಡವೊಂದು ಕುಸಿದು ರಸ್ತೆ ಸಂಚಾರ ಅಪಾಯಕಾರಿಯಾಗಿದೆ. ಈ ರಸ್ತೆಯು 28 ಪರಿಶಿಷ್ಟ  ಪಂಗಡದ ಮನೆ  ಸೇರಿದಂತೆ ಸುಮಾರು 50 ಕ್ಕಿಂತಲೂ ಅಧಿಕ ಮನೆಗಳಿಗೆ ಸಂಪರ್ಕ ರಸ್ತೆಯಾಗಿದ್ದು. ಕುಸಿತದಿಂದಾಗ ರಸ್ತೆ ಸಂಪರ್ಕ ಕಡಿತಗೊಳ್ಳುವ ಆತಂಕದಲ್ಲಿ ಸ್ಥಳೀಯರಿದ್ದಾರೆ. ಕುಸಿತಗೊಂಡ ರಸ್ತೆಯಲ್ಲಿ ವಾಹನ ಸಂಚಾರ ಅಪಾಯಕಾರಿಯಾಗಿದೆ. ಈಗಾಗಲೇ ಲಾಯಿಲ ಗ್ರಾಮ ಪಂಚಾಯತ್ ವತಿಯಿಂದ ಎಚ್ಚರಿಕೆ ಫಲಕವನ್ನು ಅಳವಡಿಸಿ ಘನ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಕುಸಿದಿರುವ ರಸ್ತೆ ಬದಿಗೆ ವಾಹನ ಸೇರಿದಂತೆ ಯಾರೂ ಕೂಡ ಹೋಗದಂತೆ ಎಚ್ಚರಿಕೆ ಫಲಕ ಹಾಕಲಾಗಿದೆ. ಸ್ಥಳಕ್ಕೆ ಪಂಚಾಯತ್ ಅಧ್ಯಕ್ಷೆ ಆಶಾ ಸಲ್ದಾನ, ಸದಸ್ಯ ಪ್ರಸಾದ್ ಶೆಟ್ಟಿ ಎಣಿಂಜೆ, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ,ಹೇಮಚಂದ್ರ, ,ಲಾಯಿಲ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಡಿ.ಪಿ, ಲೆಕ್ಕ ಸಹಾಯಕಿ ಸುಪ್ರಿತಾ ಸೇರಿದಂತೆ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿಯನ್ನು ಮೇಲಾಧಿಕಾರಿಗಳಿಗೆ ರವಾನಿಸಿದ್ದಾರೆ.

Related posts

ಕುಂಟಿನಿ ಅಲ್-ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ನೆರಿಯ: ಕಡವೆ ಬೇಟೆ, ಬಂದೂಕು ಸಹಿತ ಆರೋಪಿ ವಶಕ್ಕೆ

Suddi Udaya

ಬೆಳ್ತಂಗಡಿ ಜೆ.ಎಫ್.ಡಿ ಶಂಕರ್ ರಾವ್ ರವರಿಗೆ ಪ್ರೇರಣಾ ಪುರಸ್ಕಾರ-2025

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನಸಭಾ ಕ್ಷೇತ್ರ ಸಮಿತಿ ನೂತನ ಅಧ್ಯಕ್ಷೆಯಾಗಿ ಶಮಾ ಆಯ್ಕೆ

Suddi Udaya

ಫೆ.8: ಉಜಿರೆ-ಬೆಳ್ತಂಗಡಿ ಟಿಬಿ ಕ್ರಾಸ್‌ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya

ಕಳಿಯ ಗ್ರಾ.ಪಂ.ನಲ್ಲಿ ಕಾವಲು ಸಮಿತಿ ಸಭೆ

Suddi Udaya
error: Content is protected !!