July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಮಾನ್ಸೂನ್ ಮೇನಿಯ 2023”

ಮಂಜೊಟ್ಟಿ : ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ “ಮಾನ್ಸೂನ್ ಮೇನಿಯ -2023″ಎಂಬ ವಿಶಿಷ್ಟ ಆಚರಣೆಯು ನಡೆಯಿತು.

ಇಂದಿನ ಪೀಳಿಗೆಯ ಮಕ್ಕಳಿಗೆ ಕೃಷಿ ಕ್ಷೇತ್ರದ ಚಟುವಟಿಕೆಗಳು ಹಾಗೂ ಮಳೆಗಾಲದಲ್ಲಿ ಮಾಡುವ ವಿವಿಧ ತಿಂಡಿ ತಿನಿಸುಗಳನ್ನು ತಯಾರಿಸಿ ಪರಿಚಯಿಸುವ ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಟ್ರಸ್ಟಿನ ಕಾರ್ಯದರ್ಶಿಯಾದ ಸೈಯದ್ ಅಯ್ಯುಬ್ ವಹಿಸಿಕೊಂಡಿದ್ದರು. ಅತಿಥಿಗಳಾಗಿ ರಝ ಫ್ರೆಂಡ್ಸ್ ಮಂಜೊಟ್ಟಿ ಇದರ ಅಧ್ಯಕ್ಷರಾದ ಮೊಹಮ್ಮದ್ ಸಲೀಂ,ಆಡಳಿತ ಟ್ರಸ್ಟಿನ ಕೋಶಾಧಿಕಾರಿಯಾದ ಸೈಯದ್ ಇರ್ಫಾನ್ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜಾಕಿನ್ ಬಿನ್ ಉಪಸ್ಥಿತರಿದ್ದರು.

ಪ್ರಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯರು ” ಮಕ್ಕಳು ಪಠ್ಯ ಶಿಕ್ಷಣದ ಜೊತೆಗೆ ಕೃಷಿ ಚಟುವಟಿಕೆಗಳ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದರು. ಅಧ್ಯಕ್ಷ ನೆಲೆಯಿಂದ ಮಾತನಾಡಿದ ಸೈಯದ್ ಆಯುಬ್ ” ವಿದ್ಯಾರ್ಥಿಗಳಿಗೆ ಕೃಷಿ ಚಟುವಟಿಕೆಗಳ ಬಗ್ಗೆ ಶಿಕ್ಷಣವನ್ನು ನೀಡುವ ಈ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಹಾರೈಸಿದರು.

ಕೃಷಿ ಚಟುವಟಿಕೆಗಳಲ್ಲಿ ಒಂದಾದ ಭತ್ತದ ಕೃಷಿ, ಪರಿಕರಗಳು, ಹಿಂದಿನ ಕಾಲದಲ್ಲಿ ಉಪಯೋಗಿಸುತ್ತಿದ್ದ ಅಳತೆಯ ಕಳಸೆ, ಅಕ್ಕಿ ಮುಡಿ ಕಟ್ಟುವುದು ನೇಗಿಲು ನೊಗ ಹಾಗೂ ಕೃಷಿ ಕೆಲಸ ಮಾಡುವಾಗ ಬಳಸುತ್ತಿದ್ದ ವಸ್ತುಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಶಾಲಾ ಶಿಕ್ಷಕರು ತಯಾರಿಸಿದ್ದ ವಿವಿಧ ರೀತಿಯ ಮಳೆಗಾಲದ ಖಾದ್ಯಗಳ ಪ್ರದರ್ಶನ ಹಾಗೂ ಅವುಗಳನ್ನು ತಯಾರಿಸುವ ವಿಧಾನವನ್ನು ಮಕ್ಕಳಿಗೆ ವಿವರಿಸಿ ಕೊಟ್ಟರು. ಶಾಲೆಯ ಮೈದಾನದಲ್ಲಿ ತಯಾರಿಸಿದ ಗದ್ದೆಯಲ್ಲಿ ಮಕ್ಕಳಿಗೆ ವಿವಿಧ ಆಟೋಟಗಳನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಕೊನೆಯಲ್ಲಿ ಶಿಕ್ಷಕರುಗಳು ನೇಜಿ ನೆಡುವ ಪ್ರಾತ್ಯಕ್ಷತೆಯನ್ನು ವಿದ್ಯಾರ್ಥಿಗಳು ವೀಕ್ಷಿಸಿದರು.

ಗದ್ದೆಯಲ್ಲಿ ಬೀಜ ಬಿತ್ತನೆಯನ್ನು ಮಾಡುವುದರ ಮೂಲಕ ಭತ್ತದ ಕೃಷಿಯನ್ನು ಪ್ರಾರಂಭಿಸಲಾಯಿತು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಶ್ರೀಯುತ ಸುಂದರ್ ನಾಯ್ಕ್ ಇವರು ಕಾರ್ಯಕ್ರಮವನ್ನು ನಿರೂಪಿಸಿದರು. ಸಹ ಶಿಕ್ಷಕಿ ಶ್ರೀಮತಿ ನುಸೈಬ ಇವರು ಧನ್ಯವಾದ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

Related posts

ಉಜಿರೆ ಎಸ್.ಡಿ.ಎಂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಿಸರ್ಗದ ಮಡಿಲಲ್ಲಿ ಪರಿಸರ ಪಾಠ

Suddi Udaya

ಮಾಲಾಡಿ : ಕಸ ಎಸೆದವರಿಂದಲೇ ಹೆಕ್ಕಿಸಿ ರೂ.5 ಸಾವಿರ ದಂಡ ವಿಧಿಸಿದ ಮಾಲಾಡಿ ಗ್ರಾಮ ಪಂಚಾಯತ್

Suddi Udaya

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ: ಸಂಗಮ ಆಗಲು 2 ಮೆಟ್ಟಿಲು ಬಾಕಿ; ನಿರೀಕ್ಷೆಯಲ್ಲಿ ಭಕ್ತರು

Suddi Udaya

ಚಾರ್ಮಾಡಿಯಲ್ಲಿ ವಿಳಂಬವಾಗುತ್ತಿರುವ ಮತದಾನ, ಕಾದು ಕಾದು ಸುಸ್ತಾದ ಮತದಾರರು.

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya

ಸಿಬಿಎಸ್ಇ ಫಲಿತಾಂಶ: ವೇಣೂರಿನ ಆಯಿಶಾ ನೀಮಾ ರವರು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya
error: Content is protected !!