25.7 C
ಪುತ್ತೂರು, ಬೆಳ್ತಂಗಡಿ
March 7, 2026
ಸಾಧಕರು

ಶ್ರೀ ಧಮ೯ಸ್ಥಳ ಭಜನಾ ಪರಿಷತ್ ಕಾಯ೯ದಶಿ೯ಯಾಗಿ ಸೇವೆ ಸಲ್ಲಿಸಿದ್ದ, ಜಯರಾಮ ನೆಲ್ಲಿತ್ತಾಯರಿಗೆ “ಸಮಾಜ ಭೂಷಣ”ಪ್ರಶಸ್ತಿ

ಬೆಳ್ತಂಗಡಿ: ಹತ್ತೊಂಬತ್ತು ವರ್ಷಗಳ ಕಾಲ ಶ್ರೀ ಧಮ೯ಸ್ಥಳ ಭಜನಾ ಪರಿಷತ್ ಕಾಯ೯ದಶಿ೯ಯಾಗಿ ಸೇವೆ ಸಲ್ಲಿಸಿದ್ದ,
ಇಡೀ ರಾಜ್ಯದಲ್ಲಿ ಮಹತ್ವದ ಭಕ್ತಿ ಸಂಸ್ಕೃತಿಯ ಸಂಚಲನ ಮೂಡಿಸಿದ್ದ,‌ ಬಿ. .ಜಯರಾಮ ನೆಲ್ಲಿತ್ತಾಯರಿಗೆ ಗ್ಲೋಬಲ್ ವಿಷ್ಣುಸಹಸ್ರನಾಮ ಸತ್ಸಂಗ ಫೆಡರೇಶನ್
“ಧಾರ್ಮಿಕ ಸಮಾಜ ಭೂಷಣ”ಪ್ರಶಸ್ತಿಯಿಂದ ನೀಡಿ ಗೌರವಿಸಿದೆ.
‌ಬೆಳ್ತಂಗಡಿಯ ಶಿಶಿಲ ಗ್ರಾಮದಲ್ಲಿ ಜನಿಸಿ, ಧರ್ಮಸ್ಥಳದ ಧಾರ್ಮಿಕ-ಸಾಂಸ್ಕೃತಿಕ ಕ್ಷೇತ್ರದಲ್ಲಿ ಪಲ್ಲವಿಸಿ, ಮೈಸೂರು ವಿಭಾಗದ ಸಾಮಾಜಿಕ ಸೇವೆಯ ಮಹಾಸಾಧಕರೆನಿಸಿರುವ ಬಿ.ಜಯರಾಮ ನೆಲ್ಲಿತ್ತಾಯರು, ನಿರಂತರವಾಗಿ ನಲವತ್ತು ವರ್ಷಗಳ ಕಾಲ ನಿಸ್ವಾರ್ಥ ಜನಸೇವೆಯಲ್ಲಿ ತಮ್ಮನ್ನು ಸಂಪೂರ್ಣ ತೊಡಗಿಸಿಕೊಂಡಿದ್ದಾರೆ.
ಭಜನಾ ಸಂಘಟನೆಗಳ ಸರದಾರರೆನಿಸಿಕೊಂಡು, ಸತತವಾಗಿ ತನ್ನ ಸೇವಾವಧಿಯಲ್ಲಿ ಹತ್ತೊಂಬತ್ತು ವರ್ಷಗಳ ಕಾಲ ಇಡೀ ರಾಜ್ಯದಲ್ಲಿ ಮಹತ್ವದ ಭಕ್ತಿ ಸಂಸ್ಕೃತಿಯ ಸಂಚಲನ ಮೂಡಿಸಿದ್ದಾರೆ.
ಸಮುದಾಯ ಅಭಿವೃದ್ಧಿ ಕಾರ್ಯಕ್ರಮ, ದೇವಾಲಯ ಜೀರ್ಣೋದ್ಧಾರ, ಬ್ರಹ್ಮಕಲಶದಂತಹ ನೂರಾರು, ಮಹತ್ವದ ಕಾರ್ಯಕ್ರಮಗಳ ರೂವಾರಿಯಾಗಿ, ಹಿರಿತನದ ಗಾಂಭೀರ್ಯ, ಮೌಲಿಕ ವಿಚಾರಧಾರೆ, ಹೃದಯವಂತಿಕೆ, ಸಮಾಜಮುಖಿ ಚಿಂತನೆಗಳಿಂದ ಲಕ್ಷ ಲಕ್ಷ ಜನರ ಆತ್ಮೀಯ ದಾರಿದೀವಿಗೆಯಾಗಿರುವ ಅವರನ್ನು. ಗುರುತಿಸಿ, ಗ್ಲೋಬಲ್ ವಿಷ್ಣುಸಹಸ್ರನಾಮ ಸತ್ಸಂಗ ಫೆಡರೇಶನ್ ಬಿ.ಜಯರಾಮ ನೆಲ್ಲಿತ್ತಾಯರಿಗೆ “‘ಧಾರ್ಮಿಕ ಸಮಾಜ ಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.

Related posts

ಬೆಳ್ತಂಗಡಿ ಶ್ರೀ ಸೋಮನಾಥೇಶ್ವರ ಬಯಲಾಟ ಸೇವಾ ಸಮಿತಿ

Suddi Udaya

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

Suddi Udaya

ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಬರೋಡಾರವರಿಗೆ “ಬಂಟೆರ್ನ ರತ್ನ ಪ್ರಶಸ್ತಿ

Suddi Udaya

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Suddi Udaya

ಉಜಿರೆ: ಎಂ.ಜಿ.ಐ.ಆರ್.ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳು ಕುರಿತು ರಾಷ್ಟ್ರೀಯ ಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya
error: Content is protected !!