July 23, 2026
ಸಾಧಕರು

ಶ್ರೀ ಧಮ೯ಸ್ಥಳ ಭಜನಾ ಪರಿಷತ್ ಕಾಯ೯ದಶಿ೯ಯಾಗಿ ಸೇವೆ ಸಲ್ಲಿಸಿದ್ದ, ಜಯರಾಮ ನೆಲ್ಲಿತ್ತಾಯರಿಗೆ “ಸಮಾಜ ಭೂಷಣ”ಪ್ರಶಸ್ತಿ

ಬೆಳ್ತಂಗಡಿ: ಹತ್ತೊಂಬತ್ತು ವರ್ಷಗಳ ಕಾಲ ಶ್ರೀ ಧಮ೯ಸ್ಥಳ ಭಜನಾ ಪರಿಷತ್ ಕಾಯ೯ದಶಿ೯ಯಾಗಿ ಸೇವೆ ಸಲ್ಲಿಸಿದ್ದ,
ಇಡೀ ರಾಜ್ಯದಲ್ಲಿ ಮಹತ್ವದ ಭಕ್ತಿ ಸಂಸ್ಕೃತಿಯ ಸಂಚಲನ ಮೂಡಿಸಿದ್ದ,‌ ಬಿ. .ಜಯರಾಮ ನೆಲ್ಲಿತ್ತಾಯರಿಗೆ ಗ್ಲೋಬಲ್ ವಿಷ್ಣುಸಹಸ್ರನಾಮ ಸತ್ಸಂಗ ಫೆಡರೇಶನ್
“ಧಾರ್ಮಿಕ ಸಮಾಜ ಭೂಷಣ”ಪ್ರಶಸ್ತಿಯಿಂದ ನೀಡಿ ಗೌರವಿಸಿದೆ.
‌ಬೆಳ್ತಂಗಡಿಯ ಶಿಶಿಲ ಗ್ರಾಮದಲ್ಲಿ ಜನಿಸಿ, ಧರ್ಮಸ್ಥಳದ ಧಾರ್ಮಿಕ-ಸಾಂಸ್ಕೃತಿಕ ಕ್ಷೇತ್ರದಲ್ಲಿ ಪಲ್ಲವಿಸಿ, ಮೈಸೂರು ವಿಭಾಗದ ಸಾಮಾಜಿಕ ಸೇವೆಯ ಮಹಾಸಾಧಕರೆನಿಸಿರುವ ಬಿ.ಜಯರಾಮ ನೆಲ್ಲಿತ್ತಾಯರು, ನಿರಂತರವಾಗಿ ನಲವತ್ತು ವರ್ಷಗಳ ಕಾಲ ನಿಸ್ವಾರ್ಥ ಜನಸೇವೆಯಲ್ಲಿ ತಮ್ಮನ್ನು ಸಂಪೂರ್ಣ ತೊಡಗಿಸಿಕೊಂಡಿದ್ದಾರೆ.
ಭಜನಾ ಸಂಘಟನೆಗಳ ಸರದಾರರೆನಿಸಿಕೊಂಡು, ಸತತವಾಗಿ ತನ್ನ ಸೇವಾವಧಿಯಲ್ಲಿ ಹತ್ತೊಂಬತ್ತು ವರ್ಷಗಳ ಕಾಲ ಇಡೀ ರಾಜ್ಯದಲ್ಲಿ ಮಹತ್ವದ ಭಕ್ತಿ ಸಂಸ್ಕೃತಿಯ ಸಂಚಲನ ಮೂಡಿಸಿದ್ದಾರೆ.
ಸಮುದಾಯ ಅಭಿವೃದ್ಧಿ ಕಾರ್ಯಕ್ರಮ, ದೇವಾಲಯ ಜೀರ್ಣೋದ್ಧಾರ, ಬ್ರಹ್ಮಕಲಶದಂತಹ ನೂರಾರು, ಮಹತ್ವದ ಕಾರ್ಯಕ್ರಮಗಳ ರೂವಾರಿಯಾಗಿ, ಹಿರಿತನದ ಗಾಂಭೀರ್ಯ, ಮೌಲಿಕ ವಿಚಾರಧಾರೆ, ಹೃದಯವಂತಿಕೆ, ಸಮಾಜಮುಖಿ ಚಿಂತನೆಗಳಿಂದ ಲಕ್ಷ ಲಕ್ಷ ಜನರ ಆತ್ಮೀಯ ದಾರಿದೀವಿಗೆಯಾಗಿರುವ ಅವರನ್ನು. ಗುರುತಿಸಿ, ಗ್ಲೋಬಲ್ ವಿಷ್ಣುಸಹಸ್ರನಾಮ ಸತ್ಸಂಗ ಫೆಡರೇಶನ್ ಬಿ.ಜಯರಾಮ ನೆಲ್ಲಿತ್ತಾಯರಿಗೆ “‘ಧಾರ್ಮಿಕ ಸಮಾಜ ಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.

Related posts

ಧರ್ಮಸ್ಥಳದಲ್ಲಿ ನವಜೀವನ ಸದಸ್ಯರ ಶತದಿನೋತ್ಸವ: ಕಾರ್ಯಕ್ರಮದ ಅಂಗವಾಗಿ ವ್ಯಸನಮುಕ್ತ ಸಾಧಕರ ಸಮಾವೇಶ

Suddi Udaya

ನ್ಯೂಸ್ 18 ವಾಹಿನಿಯ ವರ್ಷದ ಕನ್ನಡಿಗ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಕ್ಸೆಲ್ ನ ಸುಮಂತ್ ಕುಮಾರ್ ಜೈನ್

Suddi Udaya

ರಾಜಕೇಸರಿ ಸೇವಾ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಅಂಬೇಡ್ಕರ್ ಸೇವರತ್ನ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

Suddi Udaya

ಅತ್ಯುನ್ನತ ಸೇವೆಗಾಗಿ ಹೆಡ್ ಕಾನ್ ಸ್ಟೇಬಲ್ ಬಿ. ವಿಜಯ್ ಕುಮಾ‌ರ್ ರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ

Suddi Udaya

ಅಗ್ನಿವೀರ್ ಜಿಡಿ ಹುದ್ದೆಗೆ ಆಯ್ಕೆಯಾದ ಗುರುಕಿರಣ್ ರವರಿಗೆ ಶ್ರೀ ರಾಮ್ ಫ್ರೆಂಡ್ಸ್ ಬಾಜಾರು ವತಿಯಿಂದ ಸನ್ಮಾನ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಎಲ್ಲರ ಮೆಚ್ಚುಗೆ ಗಳಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ಅವರಿಗೆ ಗೌರವ ಸನ್ಮಾನ

Suddi Udaya
error: Content is protected !!