30.7 C
ಪುತ್ತೂರು, ಬೆಳ್ತಂಗಡಿ
April 24, 2026
ಸಾಧಕರು

ಶ್ರೀ ಧಮ೯ಸ್ಥಳ ಭಜನಾ ಪರಿಷತ್ ಕಾಯ೯ದಶಿ೯ಯಾಗಿ ಸೇವೆ ಸಲ್ಲಿಸಿದ್ದ, ಜಯರಾಮ ನೆಲ್ಲಿತ್ತಾಯರಿಗೆ “ಸಮಾಜ ಭೂಷಣ”ಪ್ರಶಸ್ತಿ

ಬೆಳ್ತಂಗಡಿ: ಹತ್ತೊಂಬತ್ತು ವರ್ಷಗಳ ಕಾಲ ಶ್ರೀ ಧಮ೯ಸ್ಥಳ ಭಜನಾ ಪರಿಷತ್ ಕಾಯ೯ದಶಿ೯ಯಾಗಿ ಸೇವೆ ಸಲ್ಲಿಸಿದ್ದ,
ಇಡೀ ರಾಜ್ಯದಲ್ಲಿ ಮಹತ್ವದ ಭಕ್ತಿ ಸಂಸ್ಕೃತಿಯ ಸಂಚಲನ ಮೂಡಿಸಿದ್ದ,‌ ಬಿ. .ಜಯರಾಮ ನೆಲ್ಲಿತ್ತಾಯರಿಗೆ ಗ್ಲೋಬಲ್ ವಿಷ್ಣುಸಹಸ್ರನಾಮ ಸತ್ಸಂಗ ಫೆಡರೇಶನ್
“ಧಾರ್ಮಿಕ ಸಮಾಜ ಭೂಷಣ”ಪ್ರಶಸ್ತಿಯಿಂದ ನೀಡಿ ಗೌರವಿಸಿದೆ.
‌ಬೆಳ್ತಂಗಡಿಯ ಶಿಶಿಲ ಗ್ರಾಮದಲ್ಲಿ ಜನಿಸಿ, ಧರ್ಮಸ್ಥಳದ ಧಾರ್ಮಿಕ-ಸಾಂಸ್ಕೃತಿಕ ಕ್ಷೇತ್ರದಲ್ಲಿ ಪಲ್ಲವಿಸಿ, ಮೈಸೂರು ವಿಭಾಗದ ಸಾಮಾಜಿಕ ಸೇವೆಯ ಮಹಾಸಾಧಕರೆನಿಸಿರುವ ಬಿ.ಜಯರಾಮ ನೆಲ್ಲಿತ್ತಾಯರು, ನಿರಂತರವಾಗಿ ನಲವತ್ತು ವರ್ಷಗಳ ಕಾಲ ನಿಸ್ವಾರ್ಥ ಜನಸೇವೆಯಲ್ಲಿ ತಮ್ಮನ್ನು ಸಂಪೂರ್ಣ ತೊಡಗಿಸಿಕೊಂಡಿದ್ದಾರೆ.
ಭಜನಾ ಸಂಘಟನೆಗಳ ಸರದಾರರೆನಿಸಿಕೊಂಡು, ಸತತವಾಗಿ ತನ್ನ ಸೇವಾವಧಿಯಲ್ಲಿ ಹತ್ತೊಂಬತ್ತು ವರ್ಷಗಳ ಕಾಲ ಇಡೀ ರಾಜ್ಯದಲ್ಲಿ ಮಹತ್ವದ ಭಕ್ತಿ ಸಂಸ್ಕೃತಿಯ ಸಂಚಲನ ಮೂಡಿಸಿದ್ದಾರೆ.
ಸಮುದಾಯ ಅಭಿವೃದ್ಧಿ ಕಾರ್ಯಕ್ರಮ, ದೇವಾಲಯ ಜೀರ್ಣೋದ್ಧಾರ, ಬ್ರಹ್ಮಕಲಶದಂತಹ ನೂರಾರು, ಮಹತ್ವದ ಕಾರ್ಯಕ್ರಮಗಳ ರೂವಾರಿಯಾಗಿ, ಹಿರಿತನದ ಗಾಂಭೀರ್ಯ, ಮೌಲಿಕ ವಿಚಾರಧಾರೆ, ಹೃದಯವಂತಿಕೆ, ಸಮಾಜಮುಖಿ ಚಿಂತನೆಗಳಿಂದ ಲಕ್ಷ ಲಕ್ಷ ಜನರ ಆತ್ಮೀಯ ದಾರಿದೀವಿಗೆಯಾಗಿರುವ ಅವರನ್ನು. ಗುರುತಿಸಿ, ಗ್ಲೋಬಲ್ ವಿಷ್ಣುಸಹಸ್ರನಾಮ ಸತ್ಸಂಗ ಫೆಡರೇಶನ್ ಬಿ.ಜಯರಾಮ ನೆಲ್ಲಿತ್ತಾಯರಿಗೆ “‘ಧಾರ್ಮಿಕ ಸಮಾಜ ಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.

Related posts

ಮಂಗಳೂರು ವಿವಿ ಸ್ನಾತಕ ಪದವಿ ಪರೀಕ್ಷೆ ಫಲಿತಾಂಶ: ಎಂ.ಎಸ್.ಡಬ್ಲ್ಯೂನಲ್ಲಿ ಅಜಿರದ ಯಶಸ್ವಿನಿಗೆ ಪ್ರಥಮ ರ‍್ಯಾಂಕ್

Suddi Udaya

ತಾಲೂಕಿನ ನಾಲ್ವರು ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸರಸ್ವತಿ ಸಂಗೀತ ಶಾಲೆಗೆ ಶೇಕಡ 100 ಫಲಿತಾಂಶ

Suddi Udaya

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಘಟಕ : ಧಾರ್ಮಿಕ ಕ್ಷೇತ್ರದ ಸಾಧನೆಗಾಗಿ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಗೌರವ ಪುರಸ್ಕಾರ

Suddi Udaya
error: Content is protected !!