April 2, 2025
ಸಾಧಕರು

ಶ್ರೀ ಧಮ೯ಸ್ಥಳ ಭಜನಾ ಪರಿಷತ್ ಕಾಯ೯ದಶಿ೯ಯಾಗಿ ಸೇವೆ ಸಲ್ಲಿಸಿದ್ದ, ಜಯರಾಮ ನೆಲ್ಲಿತ್ತಾಯರಿಗೆ “ಸಮಾಜ ಭೂಷಣ”ಪ್ರಶಸ್ತಿ

ಬೆಳ್ತಂಗಡಿ: ಹತ್ತೊಂಬತ್ತು ವರ್ಷಗಳ ಕಾಲ ಶ್ರೀ ಧಮ೯ಸ್ಥಳ ಭಜನಾ ಪರಿಷತ್ ಕಾಯ೯ದಶಿ೯ಯಾಗಿ ಸೇವೆ ಸಲ್ಲಿಸಿದ್ದ,
ಇಡೀ ರಾಜ್ಯದಲ್ಲಿ ಮಹತ್ವದ ಭಕ್ತಿ ಸಂಸ್ಕೃತಿಯ ಸಂಚಲನ ಮೂಡಿಸಿದ್ದ,‌ ಬಿ. .ಜಯರಾಮ ನೆಲ್ಲಿತ್ತಾಯರಿಗೆ ಗ್ಲೋಬಲ್ ವಿಷ್ಣುಸಹಸ್ರನಾಮ ಸತ್ಸಂಗ ಫೆಡರೇಶನ್
“ಧಾರ್ಮಿಕ ಸಮಾಜ ಭೂಷಣ”ಪ್ರಶಸ್ತಿಯಿಂದ ನೀಡಿ ಗೌರವಿಸಿದೆ.
‌ಬೆಳ್ತಂಗಡಿಯ ಶಿಶಿಲ ಗ್ರಾಮದಲ್ಲಿ ಜನಿಸಿ, ಧರ್ಮಸ್ಥಳದ ಧಾರ್ಮಿಕ-ಸಾಂಸ್ಕೃತಿಕ ಕ್ಷೇತ್ರದಲ್ಲಿ ಪಲ್ಲವಿಸಿ, ಮೈಸೂರು ವಿಭಾಗದ ಸಾಮಾಜಿಕ ಸೇವೆಯ ಮಹಾಸಾಧಕರೆನಿಸಿರುವ ಬಿ.ಜಯರಾಮ ನೆಲ್ಲಿತ್ತಾಯರು, ನಿರಂತರವಾಗಿ ನಲವತ್ತು ವರ್ಷಗಳ ಕಾಲ ನಿಸ್ವಾರ್ಥ ಜನಸೇವೆಯಲ್ಲಿ ತಮ್ಮನ್ನು ಸಂಪೂರ್ಣ ತೊಡಗಿಸಿಕೊಂಡಿದ್ದಾರೆ.
ಭಜನಾ ಸಂಘಟನೆಗಳ ಸರದಾರರೆನಿಸಿಕೊಂಡು, ಸತತವಾಗಿ ತನ್ನ ಸೇವಾವಧಿಯಲ್ಲಿ ಹತ್ತೊಂಬತ್ತು ವರ್ಷಗಳ ಕಾಲ ಇಡೀ ರಾಜ್ಯದಲ್ಲಿ ಮಹತ್ವದ ಭಕ್ತಿ ಸಂಸ್ಕೃತಿಯ ಸಂಚಲನ ಮೂಡಿಸಿದ್ದಾರೆ.
ಸಮುದಾಯ ಅಭಿವೃದ್ಧಿ ಕಾರ್ಯಕ್ರಮ, ದೇವಾಲಯ ಜೀರ್ಣೋದ್ಧಾರ, ಬ್ರಹ್ಮಕಲಶದಂತಹ ನೂರಾರು, ಮಹತ್ವದ ಕಾರ್ಯಕ್ರಮಗಳ ರೂವಾರಿಯಾಗಿ, ಹಿರಿತನದ ಗಾಂಭೀರ್ಯ, ಮೌಲಿಕ ವಿಚಾರಧಾರೆ, ಹೃದಯವಂತಿಕೆ, ಸಮಾಜಮುಖಿ ಚಿಂತನೆಗಳಿಂದ ಲಕ್ಷ ಲಕ್ಷ ಜನರ ಆತ್ಮೀಯ ದಾರಿದೀವಿಗೆಯಾಗಿರುವ ಅವರನ್ನು. ಗುರುತಿಸಿ, ಗ್ಲೋಬಲ್ ವಿಷ್ಣುಸಹಸ್ರನಾಮ ಸತ್ಸಂಗ ಫೆಡರೇಶನ್ ಬಿ.ಜಯರಾಮ ನೆಲ್ಲಿತ್ತಾಯರಿಗೆ “‘ಧಾರ್ಮಿಕ ಸಮಾಜ ಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.

Related posts

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya

ಭಾರತೀಯ ಭೂ ಸೇನೆಯಲ್ಲಿ 32 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಕರ್ನಲ್ ನಿತಿನ್ ಆರ್. ಭಿಡೆಯವರಿಗೆ ವಿವಿಧ ಸಂಘ-ಸಂಸ್ಥೆಗಳಿಂದ ಅಭಿನಂದನೆ

Suddi Udaya

ಎಕ್ಸೆಲ್ ನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ಗೇರುಕಟ್ಟೆಯ ರಾಮಪ್ರಕಾಶ ಕಲ್ಲೂರಾಯರಿಗೆ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ.

Suddi Udaya

ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ,ಸಾಧಕರಿಗೆ ಸನ್ಮಾನ, ವಾಹನ ಜಾಥ, ಸಂಭ್ರಮ-2024

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿ ಕೆಲಸ ಕಾರ್ಯಗಳಿಗೊಳಿದ ಪ್ರತಿಷ್ಠಿತ `ಗಾಂಧಿ ಗ್ರಾಮ’ ಪುರಸ್ಕಾರ

Suddi Udaya
error: Content is protected !!