July 23, 2026
ಸಾಧಕರು

ಶ್ರೀ ಧಮ೯ಸ್ಥಳ ಭಜನಾ ಪರಿಷತ್ ಕಾಯ೯ದಶಿ೯ಯಾಗಿ ಸೇವೆ ಸಲ್ಲಿಸಿದ್ದ, ಜಯರಾಮ ನೆಲ್ಲಿತ್ತಾಯರಿಗೆ “ಸಮಾಜ ಭೂಷಣ”ಪ್ರಶಸ್ತಿ

ಬೆಳ್ತಂಗಡಿ: ಹತ್ತೊಂಬತ್ತು ವರ್ಷಗಳ ಕಾಲ ಶ್ರೀ ಧಮ೯ಸ್ಥಳ ಭಜನಾ ಪರಿಷತ್ ಕಾಯ೯ದಶಿ೯ಯಾಗಿ ಸೇವೆ ಸಲ್ಲಿಸಿದ್ದ,
ಇಡೀ ರಾಜ್ಯದಲ್ಲಿ ಮಹತ್ವದ ಭಕ್ತಿ ಸಂಸ್ಕೃತಿಯ ಸಂಚಲನ ಮೂಡಿಸಿದ್ದ,‌ ಬಿ. .ಜಯರಾಮ ನೆಲ್ಲಿತ್ತಾಯರಿಗೆ ಗ್ಲೋಬಲ್ ವಿಷ್ಣುಸಹಸ್ರನಾಮ ಸತ್ಸಂಗ ಫೆಡರೇಶನ್
“ಧಾರ್ಮಿಕ ಸಮಾಜ ಭೂಷಣ”ಪ್ರಶಸ್ತಿಯಿಂದ ನೀಡಿ ಗೌರವಿಸಿದೆ.
‌ಬೆಳ್ತಂಗಡಿಯ ಶಿಶಿಲ ಗ್ರಾಮದಲ್ಲಿ ಜನಿಸಿ, ಧರ್ಮಸ್ಥಳದ ಧಾರ್ಮಿಕ-ಸಾಂಸ್ಕೃತಿಕ ಕ್ಷೇತ್ರದಲ್ಲಿ ಪಲ್ಲವಿಸಿ, ಮೈಸೂರು ವಿಭಾಗದ ಸಾಮಾಜಿಕ ಸೇವೆಯ ಮಹಾಸಾಧಕರೆನಿಸಿರುವ ಬಿ.ಜಯರಾಮ ನೆಲ್ಲಿತ್ತಾಯರು, ನಿರಂತರವಾಗಿ ನಲವತ್ತು ವರ್ಷಗಳ ಕಾಲ ನಿಸ್ವಾರ್ಥ ಜನಸೇವೆಯಲ್ಲಿ ತಮ್ಮನ್ನು ಸಂಪೂರ್ಣ ತೊಡಗಿಸಿಕೊಂಡಿದ್ದಾರೆ.
ಭಜನಾ ಸಂಘಟನೆಗಳ ಸರದಾರರೆನಿಸಿಕೊಂಡು, ಸತತವಾಗಿ ತನ್ನ ಸೇವಾವಧಿಯಲ್ಲಿ ಹತ್ತೊಂಬತ್ತು ವರ್ಷಗಳ ಕಾಲ ಇಡೀ ರಾಜ್ಯದಲ್ಲಿ ಮಹತ್ವದ ಭಕ್ತಿ ಸಂಸ್ಕೃತಿಯ ಸಂಚಲನ ಮೂಡಿಸಿದ್ದಾರೆ.
ಸಮುದಾಯ ಅಭಿವೃದ್ಧಿ ಕಾರ್ಯಕ್ರಮ, ದೇವಾಲಯ ಜೀರ್ಣೋದ್ಧಾರ, ಬ್ರಹ್ಮಕಲಶದಂತಹ ನೂರಾರು, ಮಹತ್ವದ ಕಾರ್ಯಕ್ರಮಗಳ ರೂವಾರಿಯಾಗಿ, ಹಿರಿತನದ ಗಾಂಭೀರ್ಯ, ಮೌಲಿಕ ವಿಚಾರಧಾರೆ, ಹೃದಯವಂತಿಕೆ, ಸಮಾಜಮುಖಿ ಚಿಂತನೆಗಳಿಂದ ಲಕ್ಷ ಲಕ್ಷ ಜನರ ಆತ್ಮೀಯ ದಾರಿದೀವಿಗೆಯಾಗಿರುವ ಅವರನ್ನು. ಗುರುತಿಸಿ, ಗ್ಲೋಬಲ್ ವಿಷ್ಣುಸಹಸ್ರನಾಮ ಸತ್ಸಂಗ ಫೆಡರೇಶನ್ ಬಿ.ಜಯರಾಮ ನೆಲ್ಲಿತ್ತಾಯರಿಗೆ “‘ಧಾರ್ಮಿಕ ಸಮಾಜ ಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.

Related posts

ಬಂದಾರು ಗ್ರಾ.ಪಂ. ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪ್ರಶಸ್ತಿ ಸ್ವೀಕಾರ

Suddi Udaya

ಎಂಜಿನಿಯರಿಂಗ್ ನಲ್ಲಿ ಅಳದಂಗಡಿಯ ಶ್ರೀಪ್ರಿಯಾಗೆ 7ನೆ ರ‌್ಯಾಂಕ್

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ಶ0ಕರ ತಾಮನ್ಕರ್ ಇವರ 4ನೇ ಕವನ ಸಂಕಲನ ‘ಚಂದ್ರನಿಗೊಂದಂಗಿ’ಗೆ ಪ್ರಥಮ ಬಹುಮಾನ ಮತ್ತು ನಗದು ಪುರಸ್ಕಾರ .

Suddi Udaya

ಭುಜಬಲಿ ಧರ್ಮಸ್ಥಳ ರವರಿಗೆ “ಶ್ರೀ ಯಕ್ಷಾಂಜನೆಯ ಪ್ರಶಸ್ತಿ” ಪ್ರದಾನ

Suddi Udaya

ಎಕ್ಸೆಲ್ ಗುರುವಾಯನಕೆರೆ: ಸಿ.ಇ.ಟಿ.ಯಲ್ಲಿ ಎಂದಿನಂತೆ ರ‍್ಯಾಂಕ್ ಗಳ ಸುರಿಮಳೆ : ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya
error: Content is protected !!