23.7 C
ಪುತ್ತೂರು, ಬೆಳ್ತಂಗಡಿ
April 24, 2026
ಸಾಧಕರು

ಶ್ರೀ ಧಮ೯ಸ್ಥಳ ಭಜನಾ ಪರಿಷತ್ ಕಾಯ೯ದಶಿ೯ಯಾಗಿ ಸೇವೆ ಸಲ್ಲಿಸಿದ್ದ, ಜಯರಾಮ ನೆಲ್ಲಿತ್ತಾಯರಿಗೆ “ಸಮಾಜ ಭೂಷಣ”ಪ್ರಶಸ್ತಿ

ಬೆಳ್ತಂಗಡಿ: ಹತ್ತೊಂಬತ್ತು ವರ್ಷಗಳ ಕಾಲ ಶ್ರೀ ಧಮ೯ಸ್ಥಳ ಭಜನಾ ಪರಿಷತ್ ಕಾಯ೯ದಶಿ೯ಯಾಗಿ ಸೇವೆ ಸಲ್ಲಿಸಿದ್ದ,
ಇಡೀ ರಾಜ್ಯದಲ್ಲಿ ಮಹತ್ವದ ಭಕ್ತಿ ಸಂಸ್ಕೃತಿಯ ಸಂಚಲನ ಮೂಡಿಸಿದ್ದ,‌ ಬಿ. .ಜಯರಾಮ ನೆಲ್ಲಿತ್ತಾಯರಿಗೆ ಗ್ಲೋಬಲ್ ವಿಷ್ಣುಸಹಸ್ರನಾಮ ಸತ್ಸಂಗ ಫೆಡರೇಶನ್
“ಧಾರ್ಮಿಕ ಸಮಾಜ ಭೂಷಣ”ಪ್ರಶಸ್ತಿಯಿಂದ ನೀಡಿ ಗೌರವಿಸಿದೆ.
‌ಬೆಳ್ತಂಗಡಿಯ ಶಿಶಿಲ ಗ್ರಾಮದಲ್ಲಿ ಜನಿಸಿ, ಧರ್ಮಸ್ಥಳದ ಧಾರ್ಮಿಕ-ಸಾಂಸ್ಕೃತಿಕ ಕ್ಷೇತ್ರದಲ್ಲಿ ಪಲ್ಲವಿಸಿ, ಮೈಸೂರು ವಿಭಾಗದ ಸಾಮಾಜಿಕ ಸೇವೆಯ ಮಹಾಸಾಧಕರೆನಿಸಿರುವ ಬಿ.ಜಯರಾಮ ನೆಲ್ಲಿತ್ತಾಯರು, ನಿರಂತರವಾಗಿ ನಲವತ್ತು ವರ್ಷಗಳ ಕಾಲ ನಿಸ್ವಾರ್ಥ ಜನಸೇವೆಯಲ್ಲಿ ತಮ್ಮನ್ನು ಸಂಪೂರ್ಣ ತೊಡಗಿಸಿಕೊಂಡಿದ್ದಾರೆ.
ಭಜನಾ ಸಂಘಟನೆಗಳ ಸರದಾರರೆನಿಸಿಕೊಂಡು, ಸತತವಾಗಿ ತನ್ನ ಸೇವಾವಧಿಯಲ್ಲಿ ಹತ್ತೊಂಬತ್ತು ವರ್ಷಗಳ ಕಾಲ ಇಡೀ ರಾಜ್ಯದಲ್ಲಿ ಮಹತ್ವದ ಭಕ್ತಿ ಸಂಸ್ಕೃತಿಯ ಸಂಚಲನ ಮೂಡಿಸಿದ್ದಾರೆ.
ಸಮುದಾಯ ಅಭಿವೃದ್ಧಿ ಕಾರ್ಯಕ್ರಮ, ದೇವಾಲಯ ಜೀರ್ಣೋದ್ಧಾರ, ಬ್ರಹ್ಮಕಲಶದಂತಹ ನೂರಾರು, ಮಹತ್ವದ ಕಾರ್ಯಕ್ರಮಗಳ ರೂವಾರಿಯಾಗಿ, ಹಿರಿತನದ ಗಾಂಭೀರ್ಯ, ಮೌಲಿಕ ವಿಚಾರಧಾರೆ, ಹೃದಯವಂತಿಕೆ, ಸಮಾಜಮುಖಿ ಚಿಂತನೆಗಳಿಂದ ಲಕ್ಷ ಲಕ್ಷ ಜನರ ಆತ್ಮೀಯ ದಾರಿದೀವಿಗೆಯಾಗಿರುವ ಅವರನ್ನು. ಗುರುತಿಸಿ, ಗ್ಲೋಬಲ್ ವಿಷ್ಣುಸಹಸ್ರನಾಮ ಸತ್ಸಂಗ ಫೆಡರೇಶನ್ ಬಿ.ಜಯರಾಮ ನೆಲ್ಲಿತ್ತಾಯರಿಗೆ “‘ಧಾರ್ಮಿಕ ಸಮಾಜ ಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.

Related posts

ಡಾ.ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್

Suddi Udaya

ಅಧ್ಯಾಪಕ ಶಂಕರ ತಾಮನ್ಕರ್ ಇವರ 4ನೇ ಕವನ ಸಂಕಲನ ‘ಚಂದ್ರನಿಗೊಂದಂಗಿ’ಗೆ ಪ್ರಥಮ ಬಹುಮಾನ ಮತ್ತು ನಗದು ಪುರಸ್ಕಾರ

Suddi Udaya

ಭಾರತೀಯ ಭೂ ಸೇನೆಯಲ್ಲಿ 32 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಕರ್ನಲ್ ನಿತಿನ್ ಆರ್. ಭಿಡೆಯವರಿಗೆ ವಿವಿಧ ಸಂಘ-ಸಂಸ್ಥೆಗಳಿಂದ ಅಭಿನಂದನೆ

Suddi Udaya

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯ ಹಳೆ ವಿದ್ಯಾರ್ಥಿನಿ ಡಾ| ಶಿವಾನಿ ಎಂ.ಡಿ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya

ಸುಳ್ಯ ಕೆರ್ಪಳ ಪಯಸ್ಸಿನಿ ಯುವಕ ಮಂಡಲ ವತಿಯಿಂದ ಲಕ್ಷ್ಮಿನಾರಾಯಣರವರಿಗೆ ಪಯಸ್ಸಿನಿ ಗೌರವ

Suddi Udaya

ಜೆಇಇ ಅಡ್ವಾನ್ಸ್ ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ, ರಾಷ್ಟ್ರ ಮಟ್ಟದಲ್ಲಿ 45 ನೆಯ ರ‍್ಯಾಂಕ್ ಪಡೆದ ವೀರಭದ್ರೇಶ್ ಕಟಗೇರಿ: ಗಗನ ಕುಸುಮವೆನಿಸಿದ ಐಐಟಿ ಪ್ರವೇಶಾತಿ ಎಕ್ಸೆಲ್ ನಿಂದ ಸುಲಭ ಸಾಧ್ಯ : ರಾಷ್ಟ್ರದ ಅತ್ಯಂತ ಕಠಿಣ ಪರೀಕ್ಷೆ ಎಕ್ಸೆಲ್ ವಿದ್ಯಾರ್ಥಿಗಳಿಗೆ ಸಲೀಸು

Suddi Udaya
error: Content is protected !!