27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಬೆಳಾಲು ಪ್ರೌಢಶಾಲೆಯ ಮಕ್ಕಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ:ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ ಜರಗಿತು. ಶಾಲೆಯ ಪೋಷಕರಾದ ಸುಲೈಮಾನ್ ಭೀಮಂಡೆಯವರ ಗದ್ದೆಯಲ್ಲಿ, ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ ನಡೆಯಿತು.

ಆರಂಭದಲ್ಲಿ ಮಕ್ಕಳಿಂದ ನೇಜಿ ನಾಟಿ ಮಾಡುವ ಕಾರ್ಯ ಜರಗಿತು. ಅನಂತರ ಕಬಡ್ಡಿ, ಓಟ, ಹಾಳೆಯಲ್ಲಿ ಮಕ್ಕಳನ್ನು ಕುಳ್ಳಿರಿಸಿ ಎಳೆಯುವ ಓಟ, ತ್ರೋಬಾಲ್, ರಿಲೆ ಮುಂತಾದ ಕ್ರೀಡಾ ಚಟುವಟಿಕೆಗಳನ್ನು ವಿದ್ಯಾರ್ಥಿಗಳಿಗೆ ಆಯೋಜಿಸಲಾಯಿತು. ಈ ಮೂಲಕ ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿಗಳು ಬೇಸಾಯದ ಮತ್ತು ಕೆಸರಿನಲ್ಲಿ ಕ್ರೀಡಾ ಗಮ್ಮತ್ತಿನ ಸವಿಯನ್ನು ಸವಿದರು.

ಕಾರ್ಯಕ್ರಮದ ನೇತೃತ್ವವನ್ನು ಶಾಲೆಯ ಶಾರೀರಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದರವರು ವಹಿಸಿದ್ದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶೇಖರ್ ಗೌಡ ಕೊಲ್ಲಿಮಾರ್ ರವರು ಅತಿಥಿಯಾಗಿ ಜೊತೆಗಿದ್ದರು.

ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್, ಶಿಕ್ಷಕರಾದ ಜಗದೀಶ್, ಗಣೇಶ್ವರ್, ಸುಮನ್, ರವಿಚಂದ್ರ ಜೈನ್, ಸುಂದರ ಡಿ. ಕೋಕಿಲಾ, ರಾಜಶ್ರೀ, ಚಿತ್ರಾವತಿ ಮೊದಲಾದವರು ಹಾಜರಿದ್ದರು. ಸುಲೈಮಾನ್ ರವರು ವಿದ್ಯಾರ್ಥಿಗಳಿಗೆ ತಮ್ಮ ಮನೆಯಲ್ಲಿ ಪಾನೀಯದ ವ್ಯವಸ್ಥೆಯನ್ನು ಮಾಡಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಲ್ಲಿ ವರ್ಷ ಕಾಮತ್ ರಿಂದ ಟೆಮ್ ದಿ ಟೈಮ್ ತರಬೇತಿ ಕಾರ್ಯಾಗಾರ

Suddi Udaya

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ: ತೀರ್ಥೇಶ್ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ವತಿಯಿಂದ ಮಕರ ಸಂಕ್ರಾಂತಿ ಆಚರಣೆ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಸ್ಪಂದನ ಪಾಲಿಕ್ಲಿನಿಕ್ ವತಿಯಿಂದ ಮನೆ ಬಾಗಿಲಿಗೆ ಬಂದು ರಕ್ತದ ಸ್ಯಾಂಪಲ್ ಸಂಗ್ರಹಿಸುವ ವ್ಯವಸ್ಥೆ

Suddi Udaya

ಕುವೆಟ್ಟು ಗ್ರಾ.ಪಂ.ನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಅಗ್ರಿಲೀಫ್ ಮುಕುಟಕ್ಕೆ ಮತ್ತೊಂದು ಗರಿ : ರಾಷ್ಟ್ರ ಮಟ್ಟದ ಸ್ಪರ್ಧೆ -10ಲಕ್ಷ ನಗದು ಪ್ರಶಸ್ತಿ

Suddi Udaya
error: Content is protected !!