25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಮುಂಡಾಜೆ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು


ಮುಂಡಾಜೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಪರಶುರಾಮ ದೇವಸ್ಥಾನದ ಮುಂಭಾಗದಲ್ಲಿ ರಸ್ತೆಗೆ ಬೃಹತ್ ಗಾತ್ರದ ಮರ ಉರುಳಿ ಬಿದ್ದು ಸಂಚಾರ ವ್ಯತ್ಯಯ ಉಂಟಾದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.
ಮುಂಜಾನೆ 4.30ರ ಸುಮಾರಿಗೆ ಮರ ಉರುಳಿ ಬಿದ್ದು 6ಗಂಟೆ ತನಕ ಸಂಚಾರಕ್ಕೆ ಸಮಸ್ಯೆ ಉಂಟಾಯಿತು.
ಮರ ಬಿದ್ದ ರಸ್ತೆ ಬದಿಯಲ್ಲಿ ಪರಶುರಾಮ ದೇವಸ್ಥಾನದ ವಾಹನ ಪಾರ್ಕಿಂಗ್ ಸ್ಥಳ ಇದ್ದು ಸ್ಥಳೀಯರು ಅದರ ಮೂಲಕ ಲಘು ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟರು.ಬೆಳಿಗ್ಗೆ 8ಗಂಟೆ ಹೊತ್ತಿಗೆ ಮರ ತೆರವು ಕಾರ್ಯ ಪೂರ್ಣಗೊಂಡಿತು.
ಮರವನ್ನು ತೆರೆವುಗೊಳಿಸಲು ಮುಂಡಾಜೆ ಗ್ರಾಪಂ ಸದಸ್ಯ ಹಾಗೂ ಶೌರ್ಯ ವಿಪತ್ತು ತಂಡದ ಸದಸ್ಯ ಜಗದೀಶ್ ನಾಯ್ಕ್, ಗಣೇಶ ಬಂಗೇರ, ಸಚಿನ್ ಭಿಡೆ ಸ್ಥಳೀಯರಾದ ಶೇಖರ್, ಭರತ್, ಅಬೂಬಕ್ಕರ್, ರಶೀದ್, ಕೇಶವಗೊಲ್ಲ,ಅಶೋಕ್ ಮೆಹೆoದಳೆ,ಅಣ್ಣಯ್ಯ,ರಾಘವ, ಸಂಗಮ್ ಲತೀಫ್ , ಅರಣ್ಯ ಇಲಾಖೆಯ ಸಿಬ್ಬಂದಿಸಂತೋಷ್,ಸದಾನಂದ,ಮತ್ತಿತರರು ಸಹಕರಿಸಿದರು.

Related posts

ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಕ್ಯಾಲೆಂಡರ್ ಬಿಡುಗಡೆ

Suddi Udaya

ಕೊಕ್ಕಡ : ಅಸೌಖ್ಯದಿಂದ ವಿದ್ಯಾರ್ಥಿನಿ ಸಾವು

Suddi Udaya

ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷರಾಗಿ ವಿನಯಚಂದ್ರ , ಉಪಾಧ್ಯಕ್ಷರಾಗಿ ವಿಜಯಲಕ್ಷ್ಮೀ ಕೆ. ಆಯ್ಕೆ

Suddi Udaya

ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

Suddi Udaya

ನಾವೂರು 26ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ : ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!