25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಮುಂಡಾಜೆ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು


ಮುಂಡಾಜೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಪರಶುರಾಮ ದೇವಸ್ಥಾನದ ಮುಂಭಾಗದಲ್ಲಿ ರಸ್ತೆಗೆ ಬೃಹತ್ ಗಾತ್ರದ ಮರ ಉರುಳಿ ಬಿದ್ದು ಸಂಚಾರ ವ್ಯತ್ಯಯ ಉಂಟಾದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.
ಮುಂಜಾನೆ 4.30ರ ಸುಮಾರಿಗೆ ಮರ ಉರುಳಿ ಬಿದ್ದು 6ಗಂಟೆ ತನಕ ಸಂಚಾರಕ್ಕೆ ಸಮಸ್ಯೆ ಉಂಟಾಯಿತು.
ಮರ ಬಿದ್ದ ರಸ್ತೆ ಬದಿಯಲ್ಲಿ ಪರಶುರಾಮ ದೇವಸ್ಥಾನದ ವಾಹನ ಪಾರ್ಕಿಂಗ್ ಸ್ಥಳ ಇದ್ದು ಸ್ಥಳೀಯರು ಅದರ ಮೂಲಕ ಲಘು ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟರು.ಬೆಳಿಗ್ಗೆ 8ಗಂಟೆ ಹೊತ್ತಿಗೆ ಮರ ತೆರವು ಕಾರ್ಯ ಪೂರ್ಣಗೊಂಡಿತು.
ಮರವನ್ನು ತೆರೆವುಗೊಳಿಸಲು ಮುಂಡಾಜೆ ಗ್ರಾಪಂ ಸದಸ್ಯ ಹಾಗೂ ಶೌರ್ಯ ವಿಪತ್ತು ತಂಡದ ಸದಸ್ಯ ಜಗದೀಶ್ ನಾಯ್ಕ್, ಗಣೇಶ ಬಂಗೇರ, ಸಚಿನ್ ಭಿಡೆ ಸ್ಥಳೀಯರಾದ ಶೇಖರ್, ಭರತ್, ಅಬೂಬಕ್ಕರ್, ರಶೀದ್, ಕೇಶವಗೊಲ್ಲ,ಅಶೋಕ್ ಮೆಹೆoದಳೆ,ಅಣ್ಣಯ್ಯ,ರಾಘವ, ಸಂಗಮ್ ಲತೀಫ್ , ಅರಣ್ಯ ಇಲಾಖೆಯ ಸಿಬ್ಬಂದಿಸಂತೋಷ್,ಸದಾನಂದ,ಮತ್ತಿತರರು ಸಹಕರಿಸಿದರು.

Related posts

ಇಂದಬೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ‌ ಹಾಜರಾದ ಬುರುಡೆ ಚಿನ್ನಯ್ಯ ವಾಪಸ್ ಶಿವಮೊಗ್ಗ ಜೈಲಿಗೆ ಭದ್ರತೆಯಲ್ಲಿ ಪ್ರಯಾಣ

Suddi Udaya

ಶಿಬಾಜೆಯಲ್ಲಿ ಸಿಮೆಂಟ್ ಶೀಟ್ ಕಟ್ಟಡ ಕೆಡವಿದ ಪ್ರಕರಣ: ಎಂಟು ಮಂದಿಯ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಕೇಸು ದಾಖಲು

Suddi Udaya

ಉಜಿರೆ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ನ.29 ರಂದು ರಬ್ಬರ್ ಬೆಳೆಗಾರರ ರಾಜ್ಯ ಸಮ್ಮೇಳನ: ಸುಮಾರು 7ಕ್ಕೂ ಹೆಚ್ಚು ಸಂಸ್ಥೆಗಳ ಸಹಕಾರ ನಾನಾ ಕ್ರಮ ಹಾಗೂ ಬೇಡಿಕೆಗಳು ಹಾಗೂ ಅಂಶಗಳನ್ನು ಬೆಳೆಗಾರರ ಪರವಾಗಿ ಸರಕಾರಗಳ ಮುಂದಿಟ್ಟು ಪರಿಹಾರಗಳನ್ನು ಕಂಡುಕೊಳ್ಳುವ ಉದ್ದೇಶ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಅವರ ಚುನಾವಣಾ ಕಚೇರಿ ಉದ್ಘಾಟನೆ

Suddi Udaya
error: Content is protected !!