23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಮುಂಡಾಜೆ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು


ಮುಂಡಾಜೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಪರಶುರಾಮ ದೇವಸ್ಥಾನದ ಮುಂಭಾಗದಲ್ಲಿ ರಸ್ತೆಗೆ ಬೃಹತ್ ಗಾತ್ರದ ಮರ ಉರುಳಿ ಬಿದ್ದು ಸಂಚಾರ ವ್ಯತ್ಯಯ ಉಂಟಾದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.
ಮುಂಜಾನೆ 4.30ರ ಸುಮಾರಿಗೆ ಮರ ಉರುಳಿ ಬಿದ್ದು 6ಗಂಟೆ ತನಕ ಸಂಚಾರಕ್ಕೆ ಸಮಸ್ಯೆ ಉಂಟಾಯಿತು.
ಮರ ಬಿದ್ದ ರಸ್ತೆ ಬದಿಯಲ್ಲಿ ಪರಶುರಾಮ ದೇವಸ್ಥಾನದ ವಾಹನ ಪಾರ್ಕಿಂಗ್ ಸ್ಥಳ ಇದ್ದು ಸ್ಥಳೀಯರು ಅದರ ಮೂಲಕ ಲಘು ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟರು.ಬೆಳಿಗ್ಗೆ 8ಗಂಟೆ ಹೊತ್ತಿಗೆ ಮರ ತೆರವು ಕಾರ್ಯ ಪೂರ್ಣಗೊಂಡಿತು.
ಮರವನ್ನು ತೆರೆವುಗೊಳಿಸಲು ಮುಂಡಾಜೆ ಗ್ರಾಪಂ ಸದಸ್ಯ ಹಾಗೂ ಶೌರ್ಯ ವಿಪತ್ತು ತಂಡದ ಸದಸ್ಯ ಜಗದೀಶ್ ನಾಯ್ಕ್, ಗಣೇಶ ಬಂಗೇರ, ಸಚಿನ್ ಭಿಡೆ ಸ್ಥಳೀಯರಾದ ಶೇಖರ್, ಭರತ್, ಅಬೂಬಕ್ಕರ್, ರಶೀದ್, ಕೇಶವಗೊಲ್ಲ,ಅಶೋಕ್ ಮೆಹೆoದಳೆ,ಅಣ್ಣಯ್ಯ,ರಾಘವ, ಸಂಗಮ್ ಲತೀಫ್ , ಅರಣ್ಯ ಇಲಾಖೆಯ ಸಿಬ್ಬಂದಿಸಂತೋಷ್,ಸದಾನಂದ,ಮತ್ತಿತರರು ಸಹಕರಿಸಿದರು.

Related posts

ಬಂದಾರು: ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರುನಲ್ಲಿ ಒಂಟಿ ಸಲಗ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya

ನವಕಾರ್ ಮಹಾಮಂತ್ರ ದಿವಸ್ : ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya

ಕಳೆಂಜ: ಶಿಬರಾಜೆಯಲ್ಲಿ ಒಂಟಿಸಲಗ ದಾಳಿ : ಅಪಾರ ಕೃಷಿ ನಾಶ

Suddi Udaya

ಬಂದಾರು: ಬೈಹುಲ್ಲು ಸಾಗಾಟದ ಲಾರಿಗೆ ಬೆಂಕಿ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ-ಕಣಿಯೂರು ವಲಯ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಮದ್ದಡ್ಕ ಕಿನ್ನಿಗೋಳಿ ವರಕಬೆಯ ಬಳಿ ಹೂತು ಹೋದ ರಾಜ್ಯ ಹೆದ್ದಾರಿ ರಸ್ತೆ

Suddi Udaya
error: Content is protected !!