September 6, 2026
ತಾಲೂಕು ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ದೆಹಲಿಯಲ್ಲಿ ಕೇಂದ್ರ ಸರ್ಕಾರದಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ನೇಶನಲ್ ಅಕಾಡೆಮಿ ಆಫ್ ರುಡ್‌ಸೆಟಿ ಮಧ್ಯೆ ಒಪ್ಪಂದ ಪತ್ರಕ್ಕೆ ಸಹಿ

ಧಮ೯ಸ್ಥಳ : ನವದೆಹಲಿಯಲ್ಲಿ ಶುಕ್ರವಾರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ನೇಶನಲ್ ಅಕಾಡೆಮಿ ಆಫ್ ರುಡ್‌ಸೆಟಿ ಮಧ್ಯೆ ಮೂರು ವರ್ಷಗಳ ಅವಧಿಯ ಕರಾರು ಒಪ್ಪಂದ ಪತ್ರಕ್ಕೆ ಸಹಿ ಮಾಡಲಾಯಿತು.
೨೦೨೩ರ ಅಗೋಸ್ತು ಒಂದರಿಂದ ೨೦೨೬ರ ಜುಲೈ ೩೧ರ ವರೆಗೆ ಕರಾರುಪತ್ರ ಚಾಲ್ತಿಯಲ್ಲಿರುತ್ತದೆ.

ನೇಶನಲ್ ಅಕಾಡೆಮಿ ಆಫ್ ರುಡ್‌ಸೆಟಿ ಅಧ್ಯಕ್ಷರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಂಟಿ ಕಾರ್ಯದರ್ಶಿ ಕರ್ಮ ಝಿಂಪ ಭಾಟಿಯಾ ಕರಾರು ಪತ್ರಕ್ಕೆ ಸಹಿ ಹಾಕಿದರು.

ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ಶೈಲೇಶ್ ಕುಮಾರ್ ಸಿಂಗ್, ನೇಶನಲ್ ಅಕಾಡೆಮಿ ಆಫ್ ರುಡ್‌ಸೆಟಿ ಅಧ್ಯಕ್ಷರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಕೆ.ಎನ್. ಜನಾರ್ದನ್, ಜಂಟಿ ನಿರ್ದೇಶಕರು, ಉಪಆಯುಕ್ತರು, ಶಿವಸೋನಿ, ನವೀನ್ ಕುಮಾರ್, ವಿಶಾಲ್ ಗುಪ್ತಾ ಮತ್ತು ಕಾನೂನು ಸಲಹೆಗಾರ ಲೋಕೇಶ್ ಸುಖ್‌ವಾನಿ ಉಪಸ್ಥಿತರಿದ್ದರು.

Related posts

ಎ.14 ರವರೆಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಡೈಮಂಡ್ ಹಬ್ಬ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya

ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶ್ರೀ ಕೃಷ್ಣ ಭಜನಾ ಮಂದಿರ ನಿರ್ಮಾಣಕ್ಕೆ ರೂ.1 ಲಕ್ಷ ದೇಣಿಗೆ

Suddi Udaya

ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದರಿಗೆ ಮೊಹರೆ ಹನುಮಂತರಾಯ ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ಧೇಶ ಸಹಕಾರ ಸಂಘದ ಮಹಾಸಭೆ: ರೂ.3.84 ಕೋಟಿ ನಿವ್ವಳ ಲಾಭ – ಶೇ.15 ಡಿವಿಡೆಂಟ್ ಘೋಷಣೆ

Suddi Udaya
error: Content is protected !!