24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಬೆಳಾಲು ಪ್ರೌಢಶಾಲೆಯ ಮಕ್ಕಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ:ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ ಜರಗಿತು. ಶಾಲೆಯ ಪೋಷಕರಾದ ಸುಲೈಮಾನ್ ಭೀಮಂಡೆಯವರ ಗದ್ದೆಯಲ್ಲಿ, ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ ನಡೆಯಿತು.

ಆರಂಭದಲ್ಲಿ ಮಕ್ಕಳಿಂದ ನೇಜಿ ನಾಟಿ ಮಾಡುವ ಕಾರ್ಯ ಜರಗಿತು. ಅನಂತರ ಕಬಡ್ಡಿ, ಓಟ, ಹಾಳೆಯಲ್ಲಿ ಮಕ್ಕಳನ್ನು ಕುಳ್ಳಿರಿಸಿ ಎಳೆಯುವ ಓಟ, ತ್ರೋಬಾಲ್, ರಿಲೆ ಮುಂತಾದ ಕ್ರೀಡಾ ಚಟುವಟಿಕೆಗಳನ್ನು ವಿದ್ಯಾರ್ಥಿಗಳಿಗೆ ಆಯೋಜಿಸಲಾಯಿತು. ಈ ಮೂಲಕ ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿಗಳು ಬೇಸಾಯದ ಮತ್ತು ಕೆಸರಿನಲ್ಲಿ ಕ್ರೀಡಾ ಗಮ್ಮತ್ತಿನ ಸವಿಯನ್ನು ಸವಿದರು.

ಕಾರ್ಯಕ್ರಮದ ನೇತೃತ್ವವನ್ನು ಶಾಲೆಯ ಶಾರೀರಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದರವರು ವಹಿಸಿದ್ದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶೇಖರ್ ಗೌಡ ಕೊಲ್ಲಿಮಾರ್ ರವರು ಅತಿಥಿಯಾಗಿ ಜೊತೆಗಿದ್ದರು.

ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್, ಶಿಕ್ಷಕರಾದ ಜಗದೀಶ್, ಗಣೇಶ್ವರ್, ಸುಮನ್, ರವಿಚಂದ್ರ ಜೈನ್, ಸುಂದರ ಡಿ. ಕೋಕಿಲಾ, ರಾಜಶ್ರೀ, ಚಿತ್ರಾವತಿ ಮೊದಲಾದವರು ಹಾಜರಿದ್ದರು. ಸುಲೈಮಾನ್ ರವರು ವಿದ್ಯಾರ್ಥಿಗಳಿಗೆ ತಮ್ಮ ಮನೆಯಲ್ಲಿ ಪಾನೀಯದ ವ್ಯವಸ್ಥೆಯನ್ನು ಮಾಡಿದ್ದರು.

Related posts

ಎ.11: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ, ಒತ್ತು ಗೌಡರ ಸಮಾವೇಶ ಹಾಗೂ ಸನ್ಮಾನ ಸಮಾರಂಭ

Suddi Udaya

ಮಚ್ಚಿನದಲ್ಲಿ ಗ್ರಾಮಮಟ್ಟದ ಬಾಲ ಮೇಳ ಕಾರ್ಯಕ್ರಮ

Suddi Udaya

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯ ನವೀಕರಿಸಿದ ಶಾಲಾ ಕಟ್ಟಡ ಹಸ್ತಾಂತರ

Suddi Udaya

ಬಜಿರೆ ಪಾಲ್ದ್ಯಾರು ಮನೆಯ ಶ್ರೀಮತಿ ಚಿನ್ನಮ್ಮ ನಿಧನ

Suddi Udaya

ಭಾರೀ ಗಾಳಿ ಮಳೆ: ಪಡಂಗಡಿ ವ್ಯಾಪ್ತಿಯಲ್ಲಿ ಮನೆ ಮೇಲೆ ಹಾಗೂ ರಸ್ತೆಗೆ ಬಿದ್ದ ಮರ : ಅಪಾರ ಹಾನಿ

Suddi Udaya

ಇಳಂತಿಲದಲ್ಲಿ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Suddi Udaya
error: Content is protected !!