25.4 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿ

ಬೆಳಾಲು ಪ್ರೌಢಶಾಲೆಯ ಮಕ್ಕಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ:ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ ಜರಗಿತು. ಶಾಲೆಯ ಪೋಷಕರಾದ ಸುಲೈಮಾನ್ ಭೀಮಂಡೆಯವರ ಗದ್ದೆಯಲ್ಲಿ, ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ ನಡೆಯಿತು.

ಆರಂಭದಲ್ಲಿ ಮಕ್ಕಳಿಂದ ನೇಜಿ ನಾಟಿ ಮಾಡುವ ಕಾರ್ಯ ಜರಗಿತು. ಅನಂತರ ಕಬಡ್ಡಿ, ಓಟ, ಹಾಳೆಯಲ್ಲಿ ಮಕ್ಕಳನ್ನು ಕುಳ್ಳಿರಿಸಿ ಎಳೆಯುವ ಓಟ, ತ್ರೋಬಾಲ್, ರಿಲೆ ಮುಂತಾದ ಕ್ರೀಡಾ ಚಟುವಟಿಕೆಗಳನ್ನು ವಿದ್ಯಾರ್ಥಿಗಳಿಗೆ ಆಯೋಜಿಸಲಾಯಿತು. ಈ ಮೂಲಕ ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿಗಳು ಬೇಸಾಯದ ಮತ್ತು ಕೆಸರಿನಲ್ಲಿ ಕ್ರೀಡಾ ಗಮ್ಮತ್ತಿನ ಸವಿಯನ್ನು ಸವಿದರು.

ಕಾರ್ಯಕ್ರಮದ ನೇತೃತ್ವವನ್ನು ಶಾಲೆಯ ಶಾರೀರಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದರವರು ವಹಿಸಿದ್ದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶೇಖರ್ ಗೌಡ ಕೊಲ್ಲಿಮಾರ್ ರವರು ಅತಿಥಿಯಾಗಿ ಜೊತೆಗಿದ್ದರು.

ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್, ಶಿಕ್ಷಕರಾದ ಜಗದೀಶ್, ಗಣೇಶ್ವರ್, ಸುಮನ್, ರವಿಚಂದ್ರ ಜೈನ್, ಸುಂದರ ಡಿ. ಕೋಕಿಲಾ, ರಾಜಶ್ರೀ, ಚಿತ್ರಾವತಿ ಮೊದಲಾದವರು ಹಾಜರಿದ್ದರು. ಸುಲೈಮಾನ್ ರವರು ವಿದ್ಯಾರ್ಥಿಗಳಿಗೆ ತಮ್ಮ ಮನೆಯಲ್ಲಿ ಪಾನೀಯದ ವ್ಯವಸ್ಥೆಯನ್ನು ಮಾಡಿದ್ದರು.

Related posts

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಪಾದಯಾತ್ರಿಗಳಿಗೆ ಸನ್ಮಾನ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲಾ ಪ್ರಶಸ್ತಿ

Suddi Udaya

ದ.ಕ. ಸಹಕಾರಿ ಹಾಲು ಒಕ್ಕೂಟದಿಂದ ನಂದಿನಿ ಪ್ರಿಮಿಯಮ್ ಪ್ರೊಬಯಾಟಿಕ್ ಮೊಸರು ಬಿಡುಗಡೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ರತ್ನ ಮಾನಸ ಜೀವನ-ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಉಜಿರೆ ಓಡಲ ಕೆದ್ಲ ಸುಬ್ರಹ್ಮಣ್ಯ ನಗರ ನಾಗ ಬನದಲ್ಲಿ ಹಾಲಭಿಷೇಕ, ತಂಬಿಲ ವಿಶೇಷ ಪೂಜೆ

Suddi Udaya
error: Content is protected !!