25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಮುಂಡಾಜೆ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು


ಮುಂಡಾಜೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಪರಶುರಾಮ ದೇವಸ್ಥಾನದ ಮುಂಭಾಗದಲ್ಲಿ ರಸ್ತೆಗೆ ಬೃಹತ್ ಗಾತ್ರದ ಮರ ಉರುಳಿ ಬಿದ್ದು ಸಂಚಾರ ವ್ಯತ್ಯಯ ಉಂಟಾದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.
ಮುಂಜಾನೆ 4.30ರ ಸುಮಾರಿಗೆ ಮರ ಉರುಳಿ ಬಿದ್ದು 6ಗಂಟೆ ತನಕ ಸಂಚಾರಕ್ಕೆ ಸಮಸ್ಯೆ ಉಂಟಾಯಿತು.
ಮರ ಬಿದ್ದ ರಸ್ತೆ ಬದಿಯಲ್ಲಿ ಪರಶುರಾಮ ದೇವಸ್ಥಾನದ ವಾಹನ ಪಾರ್ಕಿಂಗ್ ಸ್ಥಳ ಇದ್ದು ಸ್ಥಳೀಯರು ಅದರ ಮೂಲಕ ಲಘು ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟರು.ಬೆಳಿಗ್ಗೆ 8ಗಂಟೆ ಹೊತ್ತಿಗೆ ಮರ ತೆರವು ಕಾರ್ಯ ಪೂರ್ಣಗೊಂಡಿತು.
ಮರವನ್ನು ತೆರೆವುಗೊಳಿಸಲು ಮುಂಡಾಜೆ ಗ್ರಾಪಂ ಸದಸ್ಯ ಹಾಗೂ ಶೌರ್ಯ ವಿಪತ್ತು ತಂಡದ ಸದಸ್ಯ ಜಗದೀಶ್ ನಾಯ್ಕ್, ಗಣೇಶ ಬಂಗೇರ, ಸಚಿನ್ ಭಿಡೆ ಸ್ಥಳೀಯರಾದ ಶೇಖರ್, ಭರತ್, ಅಬೂಬಕ್ಕರ್, ರಶೀದ್, ಕೇಶವಗೊಲ್ಲ,ಅಶೋಕ್ ಮೆಹೆoದಳೆ,ಅಣ್ಣಯ್ಯ,ರಾಘವ, ಸಂಗಮ್ ಲತೀಫ್ , ಅರಣ್ಯ ಇಲಾಖೆಯ ಸಿಬ್ಬಂದಿಸಂತೋಷ್,ಸದಾನಂದ,ಮತ್ತಿತರರು ಸಹಕರಿಸಿದರು.

Related posts

ಬಜಿರೆ ಹೊಸಪಟ್ಣ ಪೇರಂದಡ್ಕ ನಿವಾಸಿ ಸುಂದರಿ ನಿಧನ

Suddi Udaya

ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆ ಶಿಕ್ಷಕ ಶಶಿಧರ ಡಿ. ಆಯ್ಕೆ

Suddi Udaya

ತಣ್ಣೀರುಪಂತ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಅಳದಂಗಡಿಯಲ್ಲಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಗೆ ಚಾಲನೆ

Suddi Udaya

ಬೆಳ್ತಂಗಡಿ ಪ.ಪಂ. ಆಡಳಿತಾಧಿಕಾರಿಯಾಗಿ ತಹಶೀಲ್ದಾರ ಟಿ. ಸುರೇಶ್‌ ಕುಮಾರ್ ಅಧಿಕಾರ ಸ್ವೀಕಾರ

Suddi Udaya

ಗುರುವಾಯನಕೆರೆ: ಖಾಸಗಿ ಬಸ್ಸು ಡಿಕ್ಕಿ ಹೊಡೆದು ಪಾದಚಾರಿ ಸಾವು

Suddi Udaya
error: Content is protected !!