22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿ

ರಾಜ್ಯದಲ್ಲಿ ಕಾಂಗ್ರೇಸ್‌ ಸರಕಾರ ಬಂದ ಮೇಲೆ ಎಗ್ಗಿಲ್ಲದೆ ನಡೆಯುತ್ತಿರುವ ತುಷ್ಟೀಕರಣ ನೀತಿ: ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ರಾಜ್ಯದಲ್ಲಿ ಕಾಂಗ್ರೇಸ್‌ ಸರಕಾರ ಬಂದ ಮೇಲೆ ತುಷ್ಟೀಕರಣ ನೀತಿ ಎಗ್ಗಿಲ್ಲದೆ ನಡೆಯುತ್ತಿದ್ದು ಕಾನೂನು ಸುವ್ಯವಸ್ಥೆ ಹದೆಗೆಡಲು ಕಾರಣವಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಆರೋಪಿಸಿದ್ದಾರೆ.
ಅವರು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿ, ಸಿದ್ಧರಾಮಯ್ಯ ಸರಕಾರವು ಅನುಸರಿಸುತ್ತಿರುವ ನೀತಿಯನ್ನು ಖಂಡಿಸಿದ್ದಾರೆ.
ಕೆಲ ವರ್ಷಗಳ ಹಿಂದೆ ಡಿ.ಜೆ.ಹಳ್ಳಿ ಮತ್ತು ಕೆ.ಜಿ. ಹಳ್ಳಿಯಲ್ಲಿ ಗಲಭೆಯಾಗಿ ಅಲ್ಲಿನ ಪೋಲಿಸ್‌ ಠಾಣೆಯ ಮೇಲೆ ದಾಳಿಯಾದಾಗ ಹಾಗೂ ಕಾಂಗ್ರೇಸಿನ ದಲಿತ ಶಾಸಕನ ಮನೆಗೆ ಬೆಂಕಿ ಹಚ್ಚಿದಾಗ ಪೋಲಿಸರು ಕಿಡಿಗೇಡಿಗಳನ್ನು ಸಾಕ್ಷಾಧಾರಗಳ ಸಮೇತ ಬಂಧಿಸಿ ಪ್ರಕರಣದ ದಾಖಲಿಸಿಕೊಂಡಿದ್ದರು. ಇದೀಗ ಕಾಂಗ್ರೇಸ್‌ ಶಾಸಕ ತನ್ವೀರ್‌ ಸೇಠ ಬರೆದ ಪತ್ರಕ್ಕೆ ಸ್ಪಂದಿಸಿದ ಗೃಹಸಚಿವ ಡಾ| ಜಿ. ಪರಮೇಶ್ವರ ಅವರು ಗಲಭೆ ನಡೆಸಿದವರ ಮೇಲಿನ ಪ್ರಕರಣಗಳನ್ನು ಹಿಂದಕ್ಕೆ ಪಡೆಯುವ ಚಿಂತನೆ ನಡೆಸುತ್ತಿದ್ದಾರೆ. ಈಚೆಗೆ ಬಂಧಿಸಲ್ಪಟ್ಟ ೫ ಮಂದಿಯನ್ನು ಸಾಕಷ್ಟು ಸಾಕ್ಷಾಧಾರಗಳಿದ್ದರೂ ಭಯೋತ್ಪಾದಕರು ಎಂದು ಘೋಷಿಸಲು ಮೀನ-ಮೇಷ ಎಣಿಸುತ್ತಿದ್ದಾರೆ. ಉಡುಪಿಯಲ್ಲಿ ಶೌಚಾಲಯದಲ್ಲಿ ಮೊಬೈಲ್‌ ಚಿತ್ರೀಕರಣದ ಘಟನೆಯ ಬಗ್ಗೆ ಆರೋಪಿಗಳ ವಿರುದ್ಧ ಎಫ್.ಐ.ಆರ್‌. ದಾಖಲಿಸಲು ಒಂದು ವಾರ ವಿಳಂಬ ಮಾಡಿದ್ದು ಮತ್ತು ಅದು ಸಣ್ಣ ವಿಷಯವೆಂದು ಕಡೆಗಣಿಸಲು ನೋಡುತ್ತಿರುವುದು ಇವೆಲ್ಲವೂ ತುಷ್ಟೀಕರಣದ ರಾಜಕಾರಣವಾಗಿದೆ.
ಕಲ್ಲೂ ತೂರುವವರು, ಬೆಂಕಿ ಹಚ್ಚುವವರು, ಬಾಂಬ್‌ ಸ್ಪೋಟಿಸುವವರು, ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡುವವರು, ದೇಶದ್ರೋಹದ ಕೃತ್ಯ ಎಸಗುವವರು, ಪಾಕಿಸ್ತಾನ ಜಿಂದಾಬಾದ್‌ ಎಂದು ಘೊಷಣೆ ಕೂಗುವವರು ಇಂತಹವರೆಲ್ಲ ಕಾಂಗ್ರೇಸಿಗರಿಗೆ ಬ್ರದರ್ಸ್‌ ಮತ್ತು ಅಮಾಯಕರಾಗಿರುವುದು ದುರಂತ ಮತ್ತು ಖಂಡನೀಯ. ಸಮಾಜಘಾತುಕ ಶಕ್ತಿಗಳು ಮಾಡುವ ಕೃತ್ಯಗಳು ಅವರಿಗೆ ಮಕ್ಕಳಾಟವೆಂದು ಕಾಣುವುದು ತಲೆತಗ್ಗಿಸುವಂತಹ ವಿಚಾರ. ಸಾರ್ವಜನಿಕ ಹಣದಲ್ಲಿ ಇವರನ್ನು ಪೋಷಿಸಲು ಸರಕಾರದ ವಿಶೇಷ ಯೋಜನೆಗಳು ಇರುವುದು ಇನ್ನೂ ಕಳವಳಕಾರಿಯಾಗಿದೆ ಮತ್ತು ಇವು ರಾಜ್ಯದಲಿ ಕಾನೂನು ಸುವ್ಯವಸ್ಥೆ ಹಾಳಾಗಲು ಕಾರಣವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಶಾಸಕರ ಮುತುವರ್ಜಿಯಿಂದ ಪದವು–ಬೊಳ್ಮನಾರ್ ಮುಖ್ಯರಸ್ತೆಗೆ ತುರ್ತು ದುರಸ್ತಿ; ಮಳೆಗಾಲದ ಬಳಿಕ ರೂ.30 ಲಕ್ಷ ವೆಚ್ಚದಲ್ಲಿ ಮರುಡಾಮರೀಕರಣ

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಎ.29-30: ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನಕ್ಕೆ ಹಾಗೂ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀಮಜ್ಜಗದ್ಗುರುಗಳಾದ ಶಂಕರಾಚಾರ್ಯ ಶ್ರೀ ಭಾರತೀತೀರ್ಥಮಹಾಸ್ವಾಮಿ ಹಾಗೂ ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ

Suddi Udaya

ಬಳಂಜ: ತಾರಿದೊಟ್ಟುವಿನಲ್ಲಿ ಚಿಪ್ಪುಹಂದಿ ಪ್ರತ್ಯಕ್ಷ: ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟ ಅರಣ್ಯಾಧಿಕಾರಿಗಳು

Suddi Udaya

ಗ್ರಾಮೀಣ ಮಹಿಳೆಯರ ಆರೋಗ್ಯ ರಕ್ಷಣೆಗಾಗಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

Suddi Udaya

ಸುಲ್ಕೇರಿ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!