30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಬೆಳಾಲು ಪ್ರೌಢಶಾಲೆಯ ಮಕ್ಕಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ:ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ ಜರಗಿತು. ಶಾಲೆಯ ಪೋಷಕರಾದ ಸುಲೈಮಾನ್ ಭೀಮಂಡೆಯವರ ಗದ್ದೆಯಲ್ಲಿ, ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಬೇಸಾಯದ ಪಾಠ ನಡೆಯಿತು.

ಆರಂಭದಲ್ಲಿ ಮಕ್ಕಳಿಂದ ನೇಜಿ ನಾಟಿ ಮಾಡುವ ಕಾರ್ಯ ಜರಗಿತು. ಅನಂತರ ಕಬಡ್ಡಿ, ಓಟ, ಹಾಳೆಯಲ್ಲಿ ಮಕ್ಕಳನ್ನು ಕುಳ್ಳಿರಿಸಿ ಎಳೆಯುವ ಓಟ, ತ್ರೋಬಾಲ್, ರಿಲೆ ಮುಂತಾದ ಕ್ರೀಡಾ ಚಟುವಟಿಕೆಗಳನ್ನು ವಿದ್ಯಾರ್ಥಿಗಳಿಗೆ ಆಯೋಜಿಸಲಾಯಿತು. ಈ ಮೂಲಕ ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿಗಳು ಬೇಸಾಯದ ಮತ್ತು ಕೆಸರಿನಲ್ಲಿ ಕ್ರೀಡಾ ಗಮ್ಮತ್ತಿನ ಸವಿಯನ್ನು ಸವಿದರು.

ಕಾರ್ಯಕ್ರಮದ ನೇತೃತ್ವವನ್ನು ಶಾಲೆಯ ಶಾರೀರಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದರವರು ವಹಿಸಿದ್ದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶೇಖರ್ ಗೌಡ ಕೊಲ್ಲಿಮಾರ್ ರವರು ಅತಿಥಿಯಾಗಿ ಜೊತೆಗಿದ್ದರು.

ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್, ಶಿಕ್ಷಕರಾದ ಜಗದೀಶ್, ಗಣೇಶ್ವರ್, ಸುಮನ್, ರವಿಚಂದ್ರ ಜೈನ್, ಸುಂದರ ಡಿ. ಕೋಕಿಲಾ, ರಾಜಶ್ರೀ, ಚಿತ್ರಾವತಿ ಮೊದಲಾದವರು ಹಾಜರಿದ್ದರು. ಸುಲೈಮಾನ್ ರವರು ವಿದ್ಯಾರ್ಥಿಗಳಿಗೆ ತಮ್ಮ ಮನೆಯಲ್ಲಿ ಪಾನೀಯದ ವ್ಯವಸ್ಥೆಯನ್ನು ಮಾಡಿದ್ದರು.

Related posts

ಚಾರ್ಮಾಡಿ ಘಾಟಿಯ 7ನೇ ತಿರುವಿನಲ್ಲಿ ವಾಹನ ಸವಾರರಲ್ಲಿ ಭೀತಿ ಹುಟ್ಟಿಸಿದ ಒಂಟಿ ಸಲಗ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವರಿಗೆ ಶ್ರೀಮತಿ ಸುಕನ್ಯಾ ಮತ್ತು ಡಿ. ಜಯರಾಮ ರಾವ್ ಮತ್ತು ಮಕ್ಕಳು ಸತ್ಯನಪಲ್ಕೆ ಕಲ್ಮಂಜ ಇವರಿಂದ ನೂತನ ಪುಷ್ಪರಥ ಸಮರ್ಪಣೆ ; ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ರಥಬೀದಿಯಿಂದ ಶ್ರೀ ಕ್ಷೇತ್ರ ಪಜಿರಡ್ಕಕ್ಕೆ ಭವ್ಯ ಶೋಭಾಯಾತ್ರೆ,

Suddi Udaya

ಉಜಿರೆ : ಶ್ರೀ ಧ. ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ಉಜಿರೆ: ಎಸ್.ಡಿ.ಎಂ. ಕಾಲೇಜಿನಲ್ಲಿ ಸಮಾಜಕಾರ್ಯ ಪದವೀಧರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಯೋಗದಲ್ಲಿ ಸಿನರ್ಜಿ ಎಚ್‌ಆರ್‌ಡಿ ಸರಣಿ ಕಾರ್ಯಕ್ರಮ

Suddi Udaya

ಬರೆಂಗಾಯ ಸ.ಉ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ- ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!