March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ: ಮಿತ್ತಬಾಗಿಲು ನಿವಾಸಿ ಕಬೀರ್ ಬಂಧನ

ಬೆಳ್ತಂಗಡಿ: ಮಂಗಳೂರಿನಿಂದ ಚಿಕ್ಕಮಗಳೂರಿಗೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಕುಳಿತಿದ್ದ ವಿದ್ಯಾರ್ಥಿನಿಯೋರ್ವರ ಜೊತೆ ಅಸಭ್ಯವಾಗಿ ವರ್ತಿಸಿದ ಮಿತ್ತಬಾಗಿಲು ನಿವಾಸಿ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಜು.29ರಂದು ವರದಿಯಾಗಿದೆ.

ಮಿತ್ತಬಾಗಿಲು ನಿವಾಸಿ ಗ್ರಾ.ಪಂ ಸದಸ್ಯರ ಕಬೀರ್ ಬಂಧಿತ ಆರೋಪಿಯಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇಂದು ಮಂಗಳೂರಿನಿಂದ ಚಿಕ್ಕಮಗಳೂರಿಗೆ ಪ್ರಯಾಣಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಕೊಟ್ಟಿಗೆಹಾರ ಕಡೆಯ ವಿದ್ಯಾರ್ಥಿನಿಯೋರ್ವರು ಊರಿಗೆ ಹೋಗುವ ಸಲುವಾಗಿ ಬಸ್ಸಿನಲ್ಲಿ ಕುಳಿತ್ತಿದ್ದರು. ಅದೇ ಬಸ್ಸಿಗೆ ಮಂಗಳೂರಿನ ಜ್ಯೋತಿ ಬಳಿ ಹತ್ತಿದ ಆರೋಪಿ ವಿದ್ಯಾರ್ಥಿನಿ ಕುಳಿತುಕೊಂಡಿದ್ದ ಸೀಟ್‌ನಲ್ಲಿ ಕುಳಿತುಕೊಂಡಿದ್ದು, ಮಡಂತ್ಯಾರು ತಲುಪುತ್ತಿದ್ದಂತೆ ಆಕೆಯ ಜೊತೆ ಅಸಭ್ಯವಾಗಿ ವರ್ತಿಸಿದನೆಂದು ಆರೋಪಿಸಲಾಗಿದೆ.

ಈ ಸಂದರ್ಭ ವಿದ್ಯಾರ್ಥಿನಿ ಪ್ರತಿರೋಧ ವ್ಯಕ್ತಪಡಿಸಿ, ಈ ವಿಷಯವನ್ನು ತನ್ನ ಪರಿಚಯದವರಿಗೆ ಹಾಗೂ ಮನೆಯವರಿಗೆ ಪೋನ್ ಮೂಲಕ ತಿಳಿಸಿದ್ದು, ಬಸ್ಸು ಉಜಿರೆಗೆ ಬರುತ್ತಿದ್ದಂತೆ ಚಾಲಕ ಹಾಗೂ ನಿರ್ವಾಹಕರ ಸಹಕಾರದಲ್ಲಿ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಆರೋಪಿಯ ಮೇಲೆ ಬೆಳ್ತಂಗಡಿ ಪೊಲೀಸರು ಅಸಭ್ಯವಾಗಿ ವರ್ತಿಸಿದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಪದ್ಮುಂಜ: 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್: ನೂತನ ನಗರ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ನಾಗೇಶ್ ಕುಮಾರ್ ಗೌಡ ನೇಮಕ

Suddi Udaya

ಕೊಕ್ಕಡದ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ತೋಟತ್ತಾಡಿ : ಡಿ. ಮಜಲು ನಿವಾಸಿ ಪುರಂದರ ಕೋಟ್ಯಾನ್ ಹೃದಯಾಘಾತದಿಂದ ನಿಧನ

Suddi Udaya

ರಕ್ತೇಶ್ವರಿಪದವು: ಭಜನಾ ವಾರ್ಷಿಕೋತ್ಸವ ವಿಶೇಷ ಭಜನೆ ಹಾಗೂ ವಿಶೇಷ ಪೂಜೆ ಮತ್ತು ಸನ್ಮಾನ

Suddi Udaya

ಕೊಕ್ಕಡ: ಮಜ್ದೂರ್ ಸಂಘದ ಕೊಕ್ಕಡ ವಲಯದ ನೂತನ ಕಛೇರಿಯ ಉದ್ಘಾಟನೆ

Suddi Udaya
error: Content is protected !!