September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ: ಮಿತ್ತಬಾಗಿಲು ನಿವಾಸಿ ಕಬೀರ್ ಬಂಧನ

ಬೆಳ್ತಂಗಡಿ: ಮಂಗಳೂರಿನಿಂದ ಚಿಕ್ಕಮಗಳೂರಿಗೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಕುಳಿತಿದ್ದ ವಿದ್ಯಾರ್ಥಿನಿಯೋರ್ವರ ಜೊತೆ ಅಸಭ್ಯವಾಗಿ ವರ್ತಿಸಿದ ಮಿತ್ತಬಾಗಿಲು ನಿವಾಸಿ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಜು.29ರಂದು ವರದಿಯಾಗಿದೆ.

ಮಿತ್ತಬಾಗಿಲು ನಿವಾಸಿ ಗ್ರಾ.ಪಂ ಸದಸ್ಯರ ಕಬೀರ್ ಬಂಧಿತ ಆರೋಪಿಯಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇಂದು ಮಂಗಳೂರಿನಿಂದ ಚಿಕ್ಕಮಗಳೂರಿಗೆ ಪ್ರಯಾಣಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಕೊಟ್ಟಿಗೆಹಾರ ಕಡೆಯ ವಿದ್ಯಾರ್ಥಿನಿಯೋರ್ವರು ಊರಿಗೆ ಹೋಗುವ ಸಲುವಾಗಿ ಬಸ್ಸಿನಲ್ಲಿ ಕುಳಿತ್ತಿದ್ದರು. ಅದೇ ಬಸ್ಸಿಗೆ ಮಂಗಳೂರಿನ ಜ್ಯೋತಿ ಬಳಿ ಹತ್ತಿದ ಆರೋಪಿ ವಿದ್ಯಾರ್ಥಿನಿ ಕುಳಿತುಕೊಂಡಿದ್ದ ಸೀಟ್‌ನಲ್ಲಿ ಕುಳಿತುಕೊಂಡಿದ್ದು, ಮಡಂತ್ಯಾರು ತಲುಪುತ್ತಿದ್ದಂತೆ ಆಕೆಯ ಜೊತೆ ಅಸಭ್ಯವಾಗಿ ವರ್ತಿಸಿದನೆಂದು ಆರೋಪಿಸಲಾಗಿದೆ.

ಈ ಸಂದರ್ಭ ವಿದ್ಯಾರ್ಥಿನಿ ಪ್ರತಿರೋಧ ವ್ಯಕ್ತಪಡಿಸಿ, ಈ ವಿಷಯವನ್ನು ತನ್ನ ಪರಿಚಯದವರಿಗೆ ಹಾಗೂ ಮನೆಯವರಿಗೆ ಪೋನ್ ಮೂಲಕ ತಿಳಿಸಿದ್ದು, ಬಸ್ಸು ಉಜಿರೆಗೆ ಬರುತ್ತಿದ್ದಂತೆ ಚಾಲಕ ಹಾಗೂ ನಿರ್ವಾಹಕರ ಸಹಕಾರದಲ್ಲಿ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಆರೋಪಿಯ ಮೇಲೆ ಬೆಳ್ತಂಗಡಿ ಪೊಲೀಸರು ಅಸಭ್ಯವಾಗಿ ವರ್ತಿಸಿದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಸೆ.5: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನ ಸ್ಥಾಪಕ ಪ್ರಾಚಾರ್ಯ ಪ್ರೊ.ಎಸ್.ಪ್ರಭಾಕರ್ ಅವರಿಗೆ ನುಡಿನಮನ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ : ಶಾಸಕ ಹರೀಶ್ ಪೂಂಜರಿಂದ ರಾಜ್ಯ ಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ಧ. ಮಂ.ಆಂ.ಮಾ. ಶಾಲೆಯಲ್ಲಿ ಆಟಿದ ಕೂಟ

Suddi Udaya

ಜಾಗತಿಕ ಹಾದಿಯಲ್ಲಿ ಅಗ್ರಿಲೀಫ್‌ಗೆ ಭಾರೀ ಬಲ: ರೂ.10 ಕೋಟಿ ನಿಧಿ ಸಂಗ್ರಹ — ಭಾರತ ಮತ್ತು ಯುರೋಪ್–ಯುಕೆ ವಿಸ್ತರಣೆಗೆ ವೇಗ

Suddi Udaya

ಸಚಿವ ಮಧು ಬಂಗಾರಪ್ಪರವರನ್ನು ಭೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya
error: Content is protected !!