23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಲ್ಪಾ ಆಚಾರ್ಯ ಮನೆಗೆ ಭೇಟಿ ನೀಡಿದ ಡಿವೈಎಫ್ಐ ನಿಯೋಗ

ಬೆಳ್ತಂಗಡಿ: ಇತೀಚೆಗೆ ಎ.ಜೆ ಆಸ್ಪತ್ರೆಗೆ ಹೆರಿಗೆಗಾಗಿ ದಾಖಲಾಗಿ ವೈದ್ಯರ ನಿರ್ಲಕ್ಷ್ಯದ ಆರೋಪಕ್ಕೆ ಜೀವವನ್ನೇ ಕಳೆದುಕೊಂಡ ವೇಣೂರಿನ ಶಿಲ್ಪಾ ಆಚಾರ್ಯ ಮನೆಗೆ ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ನಿಯೋಗ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನವನ್ನು ವ್ಯಕ್ತಪಡಿಸಿದೆ.

ಶಿಲ್ಪಾ ಆಚಾರ್ಯಳ ಹೆರಿಗೆಗಾಗಿ ನಡೆದ ಶಸ್ತ್ರಚಿಕಿತ್ಸೆಯ ವೇಳೆ ಎಡವಟ್ಟಾಗಿ ಗರ್ಭಕೋಶವನ್ನು ಕಳೆದುಕೊಂಡಿದ್ದಲ್ಲದೆ ಮೆದುಳು ನಿಷ್ಕ್ರಿಯಗೊಂಡು ಕೋಮಕ್ಕೆ ತೆರಳಿ ಪ್ರಾಣವನ್ನು ಕಳೆದುಕೊಳ್ಳುವಂತಹ ಸ್ಥಿತಿಗೆ ಕಾರಣರಾದ ವೈದ್ಯರ ಹಾಗೂ ಎಜೆ ಆಸ್ಪತ್ರೆಯ ವಿರುದ್ಧ ಜಿಲ್ಲಾಡಳಿತ ಕಠಿಣ ಕಾನೂನು ಕ್ರಮಕೈಗೊಳ್ಳಲು ಹಾಗೂ ಸಾವಿಗೆ ನ್ಯಾಯಯುತ ಪರಿಹಾರವನ್ನು ಒದಗಿಸಿಕೊಡುವವರೆಗೂ ಕುಟುಂಬ ನಡೆಸುವ ಹೋರಾಟದ ಜೊತೆ ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಸಂಪೂರ್ಣವಾಗಿ ಬೆಂಬಲ ವ್ಯಕ್ತಪಡಿಸಲು ನಿರ್ಧರಿಸಿದೆ ಹಾಗೂ ಹೋರಾಟವನ್ನು ಇನ್ನಷ್ಟು ತೀವೃಗೊಳಿಸಲು ಎಲ್ಲಾ ಸಹಕಾರವನ್ನು ನೀಡಲಿದೆ ಎಂದು ನಿಯೋಗದಲ್ಲಿ ಇದ್ದವರು ‌ಹೇಳಿದರು.

ನಿಯೋಗದಲ್ಲಿ ಡಿವೈಎಫ್ಐ ದ.ಕ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್, ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ , ಡಿವೈಎಫ್ಐ ಜಿಲ್ಲಾ ಮುಖಂಡರಾದ ಯುವ ವಕೀಲ ಮನೋಜ್ ವಾಮಂಜೂರು, ಶ್ರೀನಾಥ್ ಕಾಟಿಪಳ್ಳ, ಮಿಥುನ್ ಕುತ್ತಾರ್, ಸಿಪಿಐಎಂ ಗುರುಪುರ ವಲಯ ಸಮಿತಿ ಕಾರ್ಯದರ್ಶಿ ಸದಾಶಿವದಾಸ್ , ಸಿಪಿಐಎಂ ಜಿಲ್ಲಾ ಮುಖಂಡರಾದ ವಸಂತಿ ಕುಪ್ಪೆಪದವು, ಕುಸುಮ ಆಚಾರಿ, ನೋಣಯ್ಯ ಗೌಡ, ಸಾಮಾಜಿಕ ಕಾರ್ಯಕರ್ತರಾದ ಬಾವಾ ಪದರಂಗಿ ಮುಂತಾದವರು ಉಪಸ್ಥಿತರಿದ್ದರು.

Related posts

ಅಳದಂಗಡಿಯಲ್ಲಿ ನೊಚ್ಚ ಹಾರ್ಡ್‌ವೇರ್ ಮತ್ತು ಸ್ಯಾನಿಟರಿ ಶುಭಾರಂಭ

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ: ಸ್ವಚ್ಛತಾ ಕಾರ್ಯಕ್ರಮ

Suddi Udaya

ಹರೀಶ್ ಪೂಂಜರವರ ಗೆಲುವಿಗಾಗಿ ಅಭಿಮಾನಿಗಳಿಂದ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆಯ ಸಂಕಲ್ಪ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಅಧಿಕಾರಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ವೇಣೂರು ಸ. ಪ.ಪೂ. ಕಾಲೇಜು ಪ್ರೌಢ, ಶಾಲಾ ವಿಭಾಗದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ

Suddi Udaya
error: Content is protected !!