ಉಜಿರೆ ಬೆನಕ ಆಸ್ಪತ್ರೆಗೆ ವಿಧಾನಸಭೆಯ ಸ್ಪೀಕರ್ ಯು. ಟಿ ಖಾದರ್ ಭೇಟಿ

Suddi Udaya

ಉಜಿರೆ: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು. ಟಿ ಖಾದರ್ ರವರು ಉಜಿರೆ ಬೆನಕ ಆಸ್ಪತ್ರೆಗೆ ಇಂದು ಭೇಟಿ ನೀಡಿದರು.

ಧರ್ಮಸ್ಥಳದಿಂದ ವಾಪಾಸ್ ಮಂಗಳೂರು ಕಡೆಗೆ ತೆರಳುವ ಸಂದರ್ಭ ಬೆನಕ ಆಸ್ಪತ್ರೆಗೆ ಭೇಟಿ ನೀಡಿದ ಸ್ಪೀಕರ್, ಆಸ್ಪತ್ರೆಯ ಸ್ಥಿತಿಗತಿ, ಇರುವ ಸೌಲಭ್ಯಗಳ ಬಗ್ಗೆ ತಿಳಿದುಕೊಂಡರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ಎಂ.ಡಿ. ಡಾ. ಗೋಪಾಲಕೃಷ್ಣ ಹಾಗೂ ಭಾರತಿ ಗೋಪಾಲಕೃಷ್ಣರವರು ಯು. ಟಿ ಖಾದರ್ ರವರನ್ನು ಸನ್ಮಾನಿಸಿ ಗೌರವಿಸಿದರು.

ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಎಸ್ ಜಿ ಭಟ್, ಕಾಂಗ್ರೆಸ್ ಮುಖಂಡರುಗಳಾದ ಧರಣೇಂದ್ರ ಕುಮಾರ್, ಹನೀಫ್, ಆಸ್ಪತ್ರೆಯ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

Leave a Comment

error: Content is protected !!