38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಸಹಯೋಗದಲ್ಲಿ ವೃತ್ತಿ ಜೀವನದ ಪ್ರಯಾಣ ಎನ್ನುವ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.


ಕಾಲೇಜಿನ ಹಿರಿಯ ವಿದ್ಯಾರ್ಥಿನಿ , ಮಂಗಳೂರಿನ ಯೂನಿವರ್ಸಿಟಿ ಕನೆಕ್ಷನ್ ಸಂಸ್ಥೆಯ ಆಪ್ತ ಸಮಾಲೋಚಕಿ , ರಾಷ್ಟ್ರೀಯ ಮಟ್ಟದ ವೈಟ್ ಲಿಫ್ಟರ್ ಶ್ರದ್ಧಾ ಎಸ್ ನಾಯ್ಕ್ ಅವರು ವೃತ್ತಿ ಮಾರ್ಗದರ್ಶನ ನಡೆಸಿದರು.
ವಿವಿಧ ಕೋರ್ಸ್ ಗಳ ಮಾಹಿತಿ ಹಾಗೂ ವೃತ್ತಿಗಳ ಆಯ್ಕೆ ಬಗ್ಗೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಗ್ರಂಥಪಾಲಕ ಮನೋಹರ್ ಶೆಟ್ಟಿ ಅವರು ಶ್ರದ್ಧಾರವನ್ನು ಸನ್ಮಾನಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಅಭಿನಂದನಾ ನುಡಿಗಳನ್ನಾಡಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಸ್ಮರಣಿಕೆ ನೀಡಿ ಗೌರವಿಸಿದರು. ರಾ. ಸೇ ಯೋಜನೆಯ ನಾಯಕ ಸುದರ್ಶನ ನಾಯಕ್ ಉಪಸ್ಥಿತರಿದ್ದರು.

ಸರಣ್ಯಾ ಸ್ವಾಗತಿಸಿ , ಪಲ್ಲವಿ ಪರಿಚಯಿಸಿದರು. ಪ್ರಥಮ್ ಜೈನ್ ನಿರೂಪಿಸಿ , ಚಾರಿತ್ರ್ಯ ವಂದಿಸಿದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಕಾಶಿಪಟ್ಣ: ಬೈಕ್ ಗಳ ನಡುವೆ ಅಪಘಾತ: ಸವಾರರಿಗೆ ಗಾಯ

Suddi Udaya

ಕಾಯರ್ತಡ್ಕ: ಗೌಡರ ಯಾನೆ ಒಕ್ಕಲಿಗರ ಯುವ ಸೇವಾ ಸಂಘದಿಂದ ಸಹಾಯಧನ

Suddi Udaya

ಶುಭ -ವಿವಾಹ
ಚಿ || ಸುದಿನ ಕುಮಾರ – ಚಿ || ಸೌ || ಪೂವಿ೯

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ನಾವೂರು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ತೆಂಕಕಾರಂದೂರು : ಗಿಂಡಾಡಿ ಎಂಬಲ್ಲಿ ಚಿರತೆ ಪ್ರತ್ಯಕ್ಷ

Suddi Udaya
error: Content is protected !!