24.4 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ. ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಯಾಂತ್ರಿಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಆಯೋಜಿಸಲ್ಪಟ್ಟ ಯಾಂತ್ರಿಕೃತ ಭತ್ತ ನಾಟಿಯ ಪ್ರಾತ್ಯಕ್ಷಿಕೆಯನ್ನು ಶ್ರೀಮತಿ ಸೋನಿಯಾ ವರ್ಮಾ ನಿನಾದ ಚಿಲುಮೆ ಇವರು ನಾಟಿ ಯಂತ್ರಕ್ಕೆ ಸಸಿಮಡಿಯನ್ನು ನೀಡುವ ಮೂಲಕ ಚಾಲನೆಯನ್ನು ನೀಡಿದರು.


ನೀನಾದ ಚಿಲುಮೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಸತಿ ಪದವಿಪೂರ್ವ ಕಾಲೇಜು ಉಜಿರೆಯ ವಿದ್ಯಾರ್ಥಿಗಳಿಗೆ ಯಾಂತ್ರಿಕೃತ ಭತ್ತ ನಾಟಿಯ ಬಗ್ಗೆ ಪ್ರಾತೇಕ್ಷಿಕಯ ಮೂಲಕ ಮಾಹಿತಿಯನ್ನು ನೀಡಲಾಯಿತು

ವಿದ್ಯಾರ್ಥಿಗಳಿಗೆ ಭತ್ತವನ್ನು ಉಳಿಸಿ ಮುಂದಿನ ಪೀಳಿಗೆಗೆ ವರ್ಗಾಯಿಸಿ ಎನ್ನುವ ಸಂದೇಶದೊಂದಿಗೆ, ಊಟದ ಅನ್ನದ ಒಂದು ಅನ್ನದ ಅಗಳಿನ ಮಹತ್ವತೆಯನ್ನು ನಾವು ಅರ್ಥ ಮಾಡಿಕೊಂಡು ಅನ್ನದ ಅಗಳನ್ನು ಬಿಸಾಡಬಾರದು, ಮಳೆ ಗಾಳಿ ಬಿಸಿಲಿನಲ್ಲಿ ಭತ್ತದ ಸಸಿಯು ಹಂತ ಹಂತದಲ್ಲಿಯೂ ಕೂಡ ಬೆಳೆದು ನಮಗೆ ಅನ್ನವನ್ನು ನೀಡುತ್ತದೆ. ಹಿಂದಿನ ಕಾಲದ ಸಾಂಪ್ರದಾಯಿಕ ಪದ್ಧತಿಯಲ್ಲಿ ಭತ್ತ ಕೃಷಿಯನ್ನು ಮಾಡಿದಾಗ ಸಮಯವು ಹೆಚ್ಚು ವ್ಯರ್ಥವಾಗಿ ಕೂಲಿಯಾಳುಗಳ ಹೆಚ್ಚಿನ ಬಳಕೆಯನ್ನು ಮಾಡಿ ಖರ್ಚು ಕೂಡ ಹೆಚ್ಚಾಗುತ್ತಿತ್ತು, ಇಂದು ಕೂಲಿಯಾಳುಗಳ ಸಮಸ್ಯೆಯನ್ನು ನಿವಾರಿಸಿ ಕಡಿಮೆ ಖರ್ಚಿನಲ್ಲಿ ಯಾಂತ್ರಿಕೃತ ಭತ್ತ ಬೇಸಾಯವನ್ನು ಮಾಡಬಹುದಾಗಿದೆ ಎನ್ನುವ ಮಾತಿನೊಂದಿಗೆ ಮಕ್ಕಳಿಗೆ ನಾವು ಯಾವುದೇ ಶಿಕ್ಷಣ ಅಥವಾ ಪದವಿ ಉದ್ಯೋಗವನ್ನು ಮಾಡಿದರು ಕೂಡ ಭತ್ತ ಕೃಷಿಯನ್ನು ಉಳಿಸಬೇಕಾಗಿದೆ ಈ ನಿಟ್ಟಿನಲ್ಲಿ ಕೃಷಿಗೆ ಹೆಚ್ಚಿನ ಪ್ರಾಧಾನ್ಯತೆಯನ್ನು ನೀಡಬೇಕಾಗಿದೆ ಎಂದು ತಿಳಿಸಿದರು.

ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್,
ಯುವರಾಜ್ ಪೂವಣಿ, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಸುರೇಂದ್ರ ಕುಮಾರ್, ಯೋಜನಾಧಿಕಾರಿಗಳು ಬೆಳ್ತಂಗಡಿ ತಾಲೂಕು. ಸುನಿಲ್ ಪಂಡಿತ್ ಪ್ರಾಂಶುಪಾಲರು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಸತಿ ಪದವಿಪೂರ್ವ ಕಾಲೇಜು ಉಜಿರೆ, ತೃಪ್ತ ಜೈನ್ ಎಸ್ ಡಿ ಎಂ ಉಜಿರೆ, ಯತೀಶ್ ಕೆ ಬಳೆಂಜ ಪಾಲಕರು ರತ್ನಮಾನಸ,
ರಾಮ್ ಕುಮಾರ್ ಕೃಷಿ ಮೇಲ್ವಿಚಾರಕರು ಬೆಳ್ತಂಗಡಿ ಮತ್ತು ಸಿ ಎಚ್ ಎಸ್ ಸಿ ಪ್ರಬಂಧಕರಾದ ಸಚಿನ್,
ಇಕೋ ಕ್ಲಬ್ ನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಪದಗ್ರಹಣ ಸಮಾರಂಭದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯರಿಗೆ ಸನ್ಮಾನ

Suddi Udaya

ಸಂಸದ ಬ್ರಿಜೇಶ್ ಚೌಟ, ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉದ್ಯಮಿ, ಸಾಧಕರಾದ ಮೋಹನ್ ಕುಮಾರ್ ರವರಿಗೆ ಮಡಂತ್ಯಾರು ಜೇಸಿ ವರ್ಷದ ಅತ್ಯುತ್ತಮ ಪ್ರಶಸ್ತಿ

Suddi Udaya

ಧರ್ಮಸ್ಥಳ : ಶ್ರೀ ಮಂ. ಸ್ವಾ. ಅ.ಹಿ. ಪ್ರಾ. ಶಾಲೆಯಲ್ಲಿ ಶಿಕ್ಷಕಿ ಶ್ರೀಮತಿ ಗಿರಿಜಾ ಕುಮಾರಿ ಡಿ. ಎ ರವರಿಗೆ ಬೀಳ್ಕೊಡುಗೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

Suddi Udaya

ದ.ಕ. ಜಿಲ್ಲೆಯಲ್ಲಿ ಅಡಿಕೆ ಕೋಕೋ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮವಹಿಸದೆ ಇರುವುದರ ಕುರಿತು ಮುಖ್ಯಮಂತ್ರಿಗಳ ಹಾಗೂ ತೋಟಗಾರಿಕ ಸಚಿವರ ಗಮನ ಸೆಳೆದ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!