30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಡ ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರಕ್ಕೆ ಚಯರ್ ಕೊಡುಗೆ

ನಡ: ನಡ ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರದ ಸೇವಕಿ ಲೀನಾ ಹಾಗೂ ಆರೋಗ್ಯ ಸಹಾಯಕಿ ಸಾವಿತ್ರಿ ಇವರು ತಮ್ಮ ಸೇವಾ ಕೇಂದ್ರಕ್ಕೆ, ಆಗಮಿಸುವ ಜನರಿಗೆ ಕುಳಿತು ಕೊಳ್ಳಲು ಆಸನದ (ಕುರ್ಚಿ ) ಬೇಡಿಕೆಯನ್ನು ನಡ ಗ್ರಾಮ ಪಂಚಾಯತ್ ಗೆ ನೀಡಿದಾಗ, ಪಂಚಾಯತ್ ವತಿಯಿಂದ, ಸ್ನೇಹ ಸೇವಾ ಟ್ರಸ್ಟ್ ಉಜಿರೆ ಸುರೇಶ್ ಹೆಬ್ಬಾರ್ ಹಾಗೂ ಗಜಾನನ ಗೋಗಟೆ, ಇವರಲ್ಲಿ ಸಹಾಯಹಸ್ತ ಕೇಳಿದಾಗ ಕೂಡಲೇ ಸ್ಪಂದಿಸಿದ ಅವರು ಕುರ್ಚಿಯನ್ನು ದೇಣಿಗೆ ನೀಡಿರುತ್ತಾರೆ.

ಈ ಮೊದಲು ನಮ್ಮ ನಡ ಕನ್ಯಾಡಿ ಗ್ರಾಮದ 8 ಅಂಗನವಾಡಿ ಶಾಲೆಗಳಿಗೆ ಫಿಲ್ಟರ್ ನೀಡಿರುತ್ತಾರೆ. ಅದಲ್ಲದೆ ನಡ ಕನ್ಯಾಡಿ ಗ್ರಾಮಗಳ 5 ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಪುಸ್ತಕ ವಿತರಣೆ ಒದಗಿಸಿರುತ್ತಾರೆ.

ಈ ಸಂದರ್ಭದಲ್ಲಿ ನಡ ಗ್ರಾ.ಪಂ. ಅಧ್ಯಕ್ಷ ವಿಜಯ ಗೌಡ, ಉಜಿರೆ ಸ್ನೇಹ ಸೇವಾ ಟ್ರಸ್ಟ್ ನ ಸುರೇಶ್ ಹೆಬ್ಬಾರ್ ಹಾಗೂ ಗಜಾನನ ಗೋಗಟೆ, ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರದ ಲೀನಾ, ಸಾವಿತ್ರಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Related posts

ಆನ್ ಲೈನ್ ಜಾಬ್ ಆಫರ್ ನೀಡಿ ಮಹಿಳೆಗೆ ರೂ. 4.25 ಲಕ್ಷ ವಂಚನೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಸೀತಾರಾಮ ಆಯ್ಕೆ

Suddi Udaya

ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ “ಅನುಭವವನ್ನು ಅನುಭವಿಸಿ” ವಿನೂತನ ಕಾರ್ಯಕ್ರಮ

Suddi Udaya

ಕನ್ನಡ ಪ್ರಬಂಧ ಸ್ಪರ್ಧೆ: ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಗಗನ್ಯ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ವತಿಯಿಂದ ಶೈಕ್ಷಣಿಕ ಸಾಧಕರಿಗೆ ಸನ್ಮಾನ

Suddi Udaya

ಜ.24-30: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya
error: Content is protected !!