23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಡ ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರಕ್ಕೆ ಚಯರ್ ಕೊಡುಗೆ

ನಡ: ನಡ ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರದ ಸೇವಕಿ ಲೀನಾ ಹಾಗೂ ಆರೋಗ್ಯ ಸಹಾಯಕಿ ಸಾವಿತ್ರಿ ಇವರು ತಮ್ಮ ಸೇವಾ ಕೇಂದ್ರಕ್ಕೆ, ಆಗಮಿಸುವ ಜನರಿಗೆ ಕುಳಿತು ಕೊಳ್ಳಲು ಆಸನದ (ಕುರ್ಚಿ ) ಬೇಡಿಕೆಯನ್ನು ನಡ ಗ್ರಾಮ ಪಂಚಾಯತ್ ಗೆ ನೀಡಿದಾಗ, ಪಂಚಾಯತ್ ವತಿಯಿಂದ, ಸ್ನೇಹ ಸೇವಾ ಟ್ರಸ್ಟ್ ಉಜಿರೆ ಸುರೇಶ್ ಹೆಬ್ಬಾರ್ ಹಾಗೂ ಗಜಾನನ ಗೋಗಟೆ, ಇವರಲ್ಲಿ ಸಹಾಯಹಸ್ತ ಕೇಳಿದಾಗ ಕೂಡಲೇ ಸ್ಪಂದಿಸಿದ ಅವರು ಕುರ್ಚಿಯನ್ನು ದೇಣಿಗೆ ನೀಡಿರುತ್ತಾರೆ.

ಈ ಮೊದಲು ನಮ್ಮ ನಡ ಕನ್ಯಾಡಿ ಗ್ರಾಮದ 8 ಅಂಗನವಾಡಿ ಶಾಲೆಗಳಿಗೆ ಫಿಲ್ಟರ್ ನೀಡಿರುತ್ತಾರೆ. ಅದಲ್ಲದೆ ನಡ ಕನ್ಯಾಡಿ ಗ್ರಾಮಗಳ 5 ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಪುಸ್ತಕ ವಿತರಣೆ ಒದಗಿಸಿರುತ್ತಾರೆ.

ಈ ಸಂದರ್ಭದಲ್ಲಿ ನಡ ಗ್ರಾ.ಪಂ. ಅಧ್ಯಕ್ಷ ವಿಜಯ ಗೌಡ, ಉಜಿರೆ ಸ್ನೇಹ ಸೇವಾ ಟ್ರಸ್ಟ್ ನ ಸುರೇಶ್ ಹೆಬ್ಬಾರ್ ಹಾಗೂ ಗಜಾನನ ಗೋಗಟೆ, ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರದ ಲೀನಾ, ಸಾವಿತ್ರಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Related posts

ನಿಡ್ಲೆ: ಸರಕಾರಿ ಬಸ್ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Suddi Udaya

ತೆಕ್ಕಾರು : ಸರಳಿಕಟ್ಟೆ ನದಿ ಬಳಿ ಕಾಡಾನೆ ಪ್ರತ್ಯಕ್ಷ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ

Suddi Udaya

ಅರಸಿನಮಕ್ಕಿ ಶಿವಳ್ಳಿ ಸಮಾಜದ ಸಭೆ

Suddi Udaya

ಮುಂಡಾಜೆಯ ರಸ್ತೆ ಬದಿ ಕಾಡಾನೆ ಪ್ರತ್ಯಕ್ಷ

Suddi Udaya

ಕಲ್ಮಂಜ : ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆ

Suddi Udaya
error: Content is protected !!