22.9 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ: ಮಿತ್ತಬಾಗಿಲು ನಿವಾಸಿ ಕಬೀರ್ ಬಂಧನ

ಬೆಳ್ತಂಗಡಿ: ಮಂಗಳೂರಿನಿಂದ ಚಿಕ್ಕಮಗಳೂರಿಗೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಕುಳಿತಿದ್ದ ವಿದ್ಯಾರ್ಥಿನಿಯೋರ್ವರ ಜೊತೆ ಅಸಭ್ಯವಾಗಿ ವರ್ತಿಸಿದ ಮಿತ್ತಬಾಗಿಲು ನಿವಾಸಿ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಜು.29ರಂದು ವರದಿಯಾಗಿದೆ.

ಮಿತ್ತಬಾಗಿಲು ನಿವಾಸಿ ಗ್ರಾ.ಪಂ ಸದಸ್ಯರ ಕಬೀರ್ ಬಂಧಿತ ಆರೋಪಿಯಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇಂದು ಮಂಗಳೂರಿನಿಂದ ಚಿಕ್ಕಮಗಳೂರಿಗೆ ಪ್ರಯಾಣಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಕೊಟ್ಟಿಗೆಹಾರ ಕಡೆಯ ವಿದ್ಯಾರ್ಥಿನಿಯೋರ್ವರು ಊರಿಗೆ ಹೋಗುವ ಸಲುವಾಗಿ ಬಸ್ಸಿನಲ್ಲಿ ಕುಳಿತ್ತಿದ್ದರು. ಅದೇ ಬಸ್ಸಿಗೆ ಮಂಗಳೂರಿನ ಜ್ಯೋತಿ ಬಳಿ ಹತ್ತಿದ ಆರೋಪಿ ವಿದ್ಯಾರ್ಥಿನಿ ಕುಳಿತುಕೊಂಡಿದ್ದ ಸೀಟ್‌ನಲ್ಲಿ ಕುಳಿತುಕೊಂಡಿದ್ದು, ಮಡಂತ್ಯಾರು ತಲುಪುತ್ತಿದ್ದಂತೆ ಆಕೆಯ ಜೊತೆ ಅಸಭ್ಯವಾಗಿ ವರ್ತಿಸಿದನೆಂದು ಆರೋಪಿಸಲಾಗಿದೆ.

ಈ ಸಂದರ್ಭ ವಿದ್ಯಾರ್ಥಿನಿ ಪ್ರತಿರೋಧ ವ್ಯಕ್ತಪಡಿಸಿ, ಈ ವಿಷಯವನ್ನು ತನ್ನ ಪರಿಚಯದವರಿಗೆ ಹಾಗೂ ಮನೆಯವರಿಗೆ ಪೋನ್ ಮೂಲಕ ತಿಳಿಸಿದ್ದು, ಬಸ್ಸು ಉಜಿರೆಗೆ ಬರುತ್ತಿದ್ದಂತೆ ಚಾಲಕ ಹಾಗೂ ನಿರ್ವಾಹಕರ ಸಹಕಾರದಲ್ಲಿ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಆರೋಪಿಯ ಮೇಲೆ ಬೆಳ್ತಂಗಡಿ ಪೊಲೀಸರು ಅಸಭ್ಯವಾಗಿ ವರ್ತಿಸಿದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯಿಂದ ನಗರ ಸಂಕೀರ್ತನೆ, ರಾಮತಾರಕ ಮಂತ್ರ

Suddi Udaya

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಇದರ ವಾರ್ಷಿಕ ಮಹಾಸಭೆ

Suddi Udaya

ಚಾರ್ಮಾಡಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಹೋಲಿ ರಿಡೀಮರ್ ವಿದ್ಯಾರ್ಥಿಗಳ ಸಾಧನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ‘ತರಗತಿ ಕೋಣೆ ನಿರ್ವಹಣೆ’ ಕಾರ್ಯಾಗಾರ

Suddi Udaya

ನಾರಾವಿಯಲ್ಲಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಮಾಲಕತ್ವದ ಉಮಾಮಹೇಶ್ವರ ಪೆಟ್ರೋಲ್ ಪಂಪ್ ಶುಭಾರಂಭ

Suddi Udaya
error: Content is protected !!