September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ: ಮಿತ್ತಬಾಗಿಲು ನಿವಾಸಿ ಕಬೀರ್ ಬಂಧನ

ಬೆಳ್ತಂಗಡಿ: ಮಂಗಳೂರಿನಿಂದ ಚಿಕ್ಕಮಗಳೂರಿಗೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಕುಳಿತಿದ್ದ ವಿದ್ಯಾರ್ಥಿನಿಯೋರ್ವರ ಜೊತೆ ಅಸಭ್ಯವಾಗಿ ವರ್ತಿಸಿದ ಮಿತ್ತಬಾಗಿಲು ನಿವಾಸಿ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಜು.29ರಂದು ವರದಿಯಾಗಿದೆ.

ಮಿತ್ತಬಾಗಿಲು ನಿವಾಸಿ ಗ್ರಾ.ಪಂ ಸದಸ್ಯರ ಕಬೀರ್ ಬಂಧಿತ ಆರೋಪಿಯಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇಂದು ಮಂಗಳೂರಿನಿಂದ ಚಿಕ್ಕಮಗಳೂರಿಗೆ ಪ್ರಯಾಣಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಕೊಟ್ಟಿಗೆಹಾರ ಕಡೆಯ ವಿದ್ಯಾರ್ಥಿನಿಯೋರ್ವರು ಊರಿಗೆ ಹೋಗುವ ಸಲುವಾಗಿ ಬಸ್ಸಿನಲ್ಲಿ ಕುಳಿತ್ತಿದ್ದರು. ಅದೇ ಬಸ್ಸಿಗೆ ಮಂಗಳೂರಿನ ಜ್ಯೋತಿ ಬಳಿ ಹತ್ತಿದ ಆರೋಪಿ ವಿದ್ಯಾರ್ಥಿನಿ ಕುಳಿತುಕೊಂಡಿದ್ದ ಸೀಟ್‌ನಲ್ಲಿ ಕುಳಿತುಕೊಂಡಿದ್ದು, ಮಡಂತ್ಯಾರು ತಲುಪುತ್ತಿದ್ದಂತೆ ಆಕೆಯ ಜೊತೆ ಅಸಭ್ಯವಾಗಿ ವರ್ತಿಸಿದನೆಂದು ಆರೋಪಿಸಲಾಗಿದೆ.

ಈ ಸಂದರ್ಭ ವಿದ್ಯಾರ್ಥಿನಿ ಪ್ರತಿರೋಧ ವ್ಯಕ್ತಪಡಿಸಿ, ಈ ವಿಷಯವನ್ನು ತನ್ನ ಪರಿಚಯದವರಿಗೆ ಹಾಗೂ ಮನೆಯವರಿಗೆ ಪೋನ್ ಮೂಲಕ ತಿಳಿಸಿದ್ದು, ಬಸ್ಸು ಉಜಿರೆಗೆ ಬರುತ್ತಿದ್ದಂತೆ ಚಾಲಕ ಹಾಗೂ ನಿರ್ವಾಹಕರ ಸಹಕಾರದಲ್ಲಿ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಆರೋಪಿಯ ಮೇಲೆ ಬೆಳ್ತಂಗಡಿ ಪೊಲೀಸರು ಅಸಭ್ಯವಾಗಿ ವರ್ತಿಸಿದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಗೆ ಅಮೆರಿಕದ ಪೆನ್ಸಿಲ್ವೇನಿಯ ವಿಶ್ವವಿದ್ಯಾಲಯದ ಅಧ್ಯಯನ ತಂಡ ಭೇಟಿ

Suddi Udaya

ಉಜಿರೆ ಶ್ರೀಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಎ. 5-6 : ಮದ್ದಡ್ಕದಲ್ಲಿ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಎಂಪಿಎಲ್ ಸೀಸನ್ 6

Suddi Udaya

ಸುಲ್ಕೇರಿಯಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ

Suddi Udaya

ಹಿರಿಯ ಯಕ್ಷಗಾನ ಭಾಗವತ ಧರ್ಣಪ್ಪ ಆಚಾರ್ಯ ಅಳದಂಗಡಿ ನಿಧನ

Suddi Udaya

ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಕಥೆಗಳಲ್ಲಿ ಜೀವನ ಮೌಲ್ಯ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!