22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಲ್ಪಾ ಆಚಾರ್ಯ ಮನೆಗೆ ಭೇಟಿ ನೀಡಿದ ಡಿವೈಎಫ್ಐ ನಿಯೋಗ

ಬೆಳ್ತಂಗಡಿ: ಇತೀಚೆಗೆ ಎ.ಜೆ ಆಸ್ಪತ್ರೆಗೆ ಹೆರಿಗೆಗಾಗಿ ದಾಖಲಾಗಿ ವೈದ್ಯರ ನಿರ್ಲಕ್ಷ್ಯದ ಆರೋಪಕ್ಕೆ ಜೀವವನ್ನೇ ಕಳೆದುಕೊಂಡ ವೇಣೂರಿನ ಶಿಲ್ಪಾ ಆಚಾರ್ಯ ಮನೆಗೆ ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ನಿಯೋಗ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನವನ್ನು ವ್ಯಕ್ತಪಡಿಸಿದೆ.

ಶಿಲ್ಪಾ ಆಚಾರ್ಯಳ ಹೆರಿಗೆಗಾಗಿ ನಡೆದ ಶಸ್ತ್ರಚಿಕಿತ್ಸೆಯ ವೇಳೆ ಎಡವಟ್ಟಾಗಿ ಗರ್ಭಕೋಶವನ್ನು ಕಳೆದುಕೊಂಡಿದ್ದಲ್ಲದೆ ಮೆದುಳು ನಿಷ್ಕ್ರಿಯಗೊಂಡು ಕೋಮಕ್ಕೆ ತೆರಳಿ ಪ್ರಾಣವನ್ನು ಕಳೆದುಕೊಳ್ಳುವಂತಹ ಸ್ಥಿತಿಗೆ ಕಾರಣರಾದ ವೈದ್ಯರ ಹಾಗೂ ಎಜೆ ಆಸ್ಪತ್ರೆಯ ವಿರುದ್ಧ ಜಿಲ್ಲಾಡಳಿತ ಕಠಿಣ ಕಾನೂನು ಕ್ರಮಕೈಗೊಳ್ಳಲು ಹಾಗೂ ಸಾವಿಗೆ ನ್ಯಾಯಯುತ ಪರಿಹಾರವನ್ನು ಒದಗಿಸಿಕೊಡುವವರೆಗೂ ಕುಟುಂಬ ನಡೆಸುವ ಹೋರಾಟದ ಜೊತೆ ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಸಂಪೂರ್ಣವಾಗಿ ಬೆಂಬಲ ವ್ಯಕ್ತಪಡಿಸಲು ನಿರ್ಧರಿಸಿದೆ ಹಾಗೂ ಹೋರಾಟವನ್ನು ಇನ್ನಷ್ಟು ತೀವೃಗೊಳಿಸಲು ಎಲ್ಲಾ ಸಹಕಾರವನ್ನು ನೀಡಲಿದೆ ಎಂದು ನಿಯೋಗದಲ್ಲಿ ಇದ್ದವರು ‌ಹೇಳಿದರು.

ನಿಯೋಗದಲ್ಲಿ ಡಿವೈಎಫ್ಐ ದ.ಕ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್, ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ , ಡಿವೈಎಫ್ಐ ಜಿಲ್ಲಾ ಮುಖಂಡರಾದ ಯುವ ವಕೀಲ ಮನೋಜ್ ವಾಮಂಜೂರು, ಶ್ರೀನಾಥ್ ಕಾಟಿಪಳ್ಳ, ಮಿಥುನ್ ಕುತ್ತಾರ್, ಸಿಪಿಐಎಂ ಗುರುಪುರ ವಲಯ ಸಮಿತಿ ಕಾರ್ಯದರ್ಶಿ ಸದಾಶಿವದಾಸ್ , ಸಿಪಿಐಎಂ ಜಿಲ್ಲಾ ಮುಖಂಡರಾದ ವಸಂತಿ ಕುಪ್ಪೆಪದವು, ಕುಸುಮ ಆಚಾರಿ, ನೋಣಯ್ಯ ಗೌಡ, ಸಾಮಾಜಿಕ ಕಾರ್ಯಕರ್ತರಾದ ಬಾವಾ ಪದರಂಗಿ ಮುಂತಾದವರು ಉಪಸ್ಥಿತರಿದ್ದರು.

Related posts

ಪುದುವೆಟ್ಟು: ಅಕ್ರಮವಾಗಿ ಮರ ಕಡಿದು ಸಾಗಟ: ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲು: ರೂ.6.30 ಲಕ್ಷ ಮೌಲ್ಯದ ಸೊತ್ತು ವಶ

Suddi Udaya

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ವಿರುದ್ಧ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಆಧಾರ ರಹಿತ ಸುದ್ದಿ ಪ್ರಸಾರಕ್ಕೆ ನ್ಯಾಯಾಲಯ ತಡೆಯಾಜ್ಞೆ

Suddi Udaya

ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ: ಬೆಳ್ತಂಗಡಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಮೆರವಣಿಗೆ- ರಾಷ್ಟ್ರಪತಿಗೆ ಮನವಿ ಸಲ್ಲಿಕೆ

Suddi Udaya

ಶೇಖರ ಬಂಗೇರರಿಗೆ ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ ನುಡಿ ನಮನ

Suddi Udaya

ಕನ್ಯಾಡಿ ಶ್ರೀ ಹರಿದ್ವಾರ ಶಾಖಾ ಮಠದಲ್ಲಿ 7ನೇ ವರ್ಷದ ವಾರ್ಷಿಕೋತ್ಸವ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಚ್ಚ ಭಾರತ ಅಭಿಯಾನದ ಕುರಿತು ವಿಶೇಷ ಉಪನ್ಯಾಸ

Suddi Udaya
error: Content is protected !!