23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸುಲ್ಕೇರಿಮೊಗ್ರು ವರ್ಪಾಳೆ ಕಿಂಡಿ ಅಣೆಕಟ್ಟು ಸ್ವಚ್ಛತಾ ಕಾರ್ಯ

ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಕೆಲ ದಿನಗಳಿಂದ ಸುರಿದ ಭಾರೀ ಮಳೆಗೆ ಅಳದಂಗಡಿ ವಲಯ ಸುಲ್ಕೇರಿಮೊಗ್ರು ವ್ಯಾಪ್ತಿಯಲ್ಲಿರುವ ವರ್ಪಾಳೆ ಎಂಬಲ್ಲಿ ಫಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಕಿಂಡಿ ಅಣೆಕಟ್ಟಿನಲ್ಲಿ ಪ್ರವಾಹಕ್ಕೆ ತೇಲಿ ಬಂದ ಮರಗಳು ಹಾಗೂ ಇತರ ಕಸ ಕಡ್ಡಿಗಳು ಸೇರಿಕೊಂಡು ನೀರಿನ ಸರಾಗವಾಗಿ ಹರಿಯುವಿಕೆಗೆ ತೊಂದರೆಯಾಗಿದ್ದು ಪ್ರವಾಹ ಹೆಚ್ಚಾದಲ್ಲಿ ನದಿಯ ನೀರು ತೋಟಗಳಿಗೆ ನುಗ್ಗಿ ಹಾನಿಯಾಗುವ ಸಂಭವ ಇತ್ತು. ವಲಯ ಮೇಲ್ವಿಚಾರಕಿ ಶ್ರೀಮತಿ ಸುಮಂಗಲ ಅವರ ಗಮನಕ್ಕೆ ತಂದು ನದಿಯ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಯಿತು.


ಸ್ವಯಂಸೇವಕರಾದ ಪ್ರಕಾಶ್ ಕೊಲ್ಲಂಗೆ, ಘಟಕ ಪ್ರತಿನಿಧಿ ರಾಜೇಶ್ ಕುದುರು, ಪ್ರವೀಣ್ ನಿನಿಗಲ್, ರವಿಚಂದ್ರ ಹಾಗೂ ಶ್ರೀಕಾಂತ್ ರವರು ಸ್ವಚ್ಛತಾ ಕಾರ್ಯದಲ್ಲಿ ತೊಡಗಿಕೊಂಡರು.


ಸ್ವಯಂ ಪ್ರೇರಣೆಯಿಂದ ಸ್ಥಳೀಯರಾದ ಸುರೇಶ್ ಹಾಗೂ ವಿನೋದ್ ರವರು ಸೇವಾ ಕಾರ್ಯದಲ್ಲಿ ಕೈಜೋಡಿಸಿದರು. ಪ್ರಗತಿಪರ ಕೃಷಿಕರಾದ ಗಂಗಾಧರ ಮಿತ್ತಮಾರ್ ಸ್ಥಳಕ್ಕೆ ಆಗಮಿಸಿ ಸೂಕ್ತ ಮಾರ್ಗದರ್ಶನವನ್ನು ನೀಡಿದರು. ಸ್ವಯಂ ಸೇವಕರ ಕಾರ್ಯಕ್ಕೆ ಮೆಚ್ಚಿ ವಿನೋದ್ ರವರು ಸ್ವ ಇಚ್ಛೆಯಿಂದ ಸ್ವಯಂ ಸೇವಕರಿಗೆ ಉಪಹಾರದ ವ್ಯವಸ್ಥೆಯನ್ನು ಮಾಡಿದರು.

Related posts

ವಿ. ಹರೀಶ್ ನೆರಿಯ ರವರಿಗೆ ದ್ವಾರಕಾ ಮಯಿ ಮಠ ದಿಂದ “ಭಜಕ ವಿಠಲ ಪ್ರಿಯ” ಗೌರವ ಪುರಸ್ಕಾರ ಪ್ರಧಾನ ಮಾಡಿ ಆಶೀರ್ವದಿಸಿದ ಯತಿ ವರೇಣ್ಯರು

Suddi Udaya

ಹೊಂಬೆಳಕು ಕಾರ್ಯಕ್ರಮದಲ್ಲಿ ಉಜಿರೆ ಪಂ.ಅ.ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ರವರಿಗೆ ಸನ್ಮಾನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಕಡಿರ ನಾಗಬನದಲ್ಲಿ ನಾಗದೇವರಿಗೆ ತಂಬಿಲ ಸೇವೆ

Suddi Udaya

ಧರ್ಮಸ್ಥಳ: ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ಹದಿಹರೆಯದ ವಿದ್ಯಾರ್ಥಿನಿಯರಿಗೆ ಮಾಹಿತಿ

Suddi Udaya

ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಮರ ಬಿದ್ದು ಕಟ್ಟಡಕ್ಕೆ ಹಾನಿ: ತಪ್ಪಿದ ದೊಡ್ಡ ದುರಂತ

Suddi Udaya

ಚಾರ್ಮಾಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಉದ್ಯೋಗ ಖಾತರಿ ವಿಶೇಷ ಗ್ರಾಮ ಸಭೆ, ಜಾಥಾ

Suddi Udaya
error: Content is protected !!