25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸುಲ್ಕೇರಿಮೊಗ್ರು ವರ್ಪಾಳೆ ಕಿಂಡಿ ಅಣೆಕಟ್ಟು ಸ್ವಚ್ಛತಾ ಕಾರ್ಯ

ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಕೆಲ ದಿನಗಳಿಂದ ಸುರಿದ ಭಾರೀ ಮಳೆಗೆ ಅಳದಂಗಡಿ ವಲಯ ಸುಲ್ಕೇರಿಮೊಗ್ರು ವ್ಯಾಪ್ತಿಯಲ್ಲಿರುವ ವರ್ಪಾಳೆ ಎಂಬಲ್ಲಿ ಫಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಕಿಂಡಿ ಅಣೆಕಟ್ಟಿನಲ್ಲಿ ಪ್ರವಾಹಕ್ಕೆ ತೇಲಿ ಬಂದ ಮರಗಳು ಹಾಗೂ ಇತರ ಕಸ ಕಡ್ಡಿಗಳು ಸೇರಿಕೊಂಡು ನೀರಿನ ಸರಾಗವಾಗಿ ಹರಿಯುವಿಕೆಗೆ ತೊಂದರೆಯಾಗಿದ್ದು ಪ್ರವಾಹ ಹೆಚ್ಚಾದಲ್ಲಿ ನದಿಯ ನೀರು ತೋಟಗಳಿಗೆ ನುಗ್ಗಿ ಹಾನಿಯಾಗುವ ಸಂಭವ ಇತ್ತು. ವಲಯ ಮೇಲ್ವಿಚಾರಕಿ ಶ್ರೀಮತಿ ಸುಮಂಗಲ ಅವರ ಗಮನಕ್ಕೆ ತಂದು ನದಿಯ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಯಿತು.


ಸ್ವಯಂಸೇವಕರಾದ ಪ್ರಕಾಶ್ ಕೊಲ್ಲಂಗೆ, ಘಟಕ ಪ್ರತಿನಿಧಿ ರಾಜೇಶ್ ಕುದುರು, ಪ್ರವೀಣ್ ನಿನಿಗಲ್, ರವಿಚಂದ್ರ ಹಾಗೂ ಶ್ರೀಕಾಂತ್ ರವರು ಸ್ವಚ್ಛತಾ ಕಾರ್ಯದಲ್ಲಿ ತೊಡಗಿಕೊಂಡರು.


ಸ್ವಯಂ ಪ್ರೇರಣೆಯಿಂದ ಸ್ಥಳೀಯರಾದ ಸುರೇಶ್ ಹಾಗೂ ವಿನೋದ್ ರವರು ಸೇವಾ ಕಾರ್ಯದಲ್ಲಿ ಕೈಜೋಡಿಸಿದರು. ಪ್ರಗತಿಪರ ಕೃಷಿಕರಾದ ಗಂಗಾಧರ ಮಿತ್ತಮಾರ್ ಸ್ಥಳಕ್ಕೆ ಆಗಮಿಸಿ ಸೂಕ್ತ ಮಾರ್ಗದರ್ಶನವನ್ನು ನೀಡಿದರು. ಸ್ವಯಂ ಸೇವಕರ ಕಾರ್ಯಕ್ಕೆ ಮೆಚ್ಚಿ ವಿನೋದ್ ರವರು ಸ್ವ ಇಚ್ಛೆಯಿಂದ ಸ್ವಯಂ ಸೇವಕರಿಗೆ ಉಪಹಾರದ ವ್ಯವಸ್ಥೆಯನ್ನು ಮಾಡಿದರು.

Related posts

ಮಡವು ಸ್ವರ್ಣ ಸಂಜೀವಿನಿ ಟ್ರಸ್ಟ್ ವತಿಯಿಂದ ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ ಗೋಪೂಜೆ ಮತ್ತು ಗೊಗ್ರಾಸಕ್ಕೆ ನಗದು ಹಸ್ತಾಂತರ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಲ್ಲಿ ಭಜನಾ ವಾರ್ಷಿಕೋತ್ಸವ ಮತ್ತು ಮಹಾಶಿವರಾತ್ರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಾನರ್ಪ ಪುರುಷರ ಬಳಗದ ಪುರುಷರ ರಾಶಿ ಪೂಜೆ

Suddi Udaya

ಜ.3 -4: ನಲಿಕೆ ಸಮಾಜ ಬಾಂಧವರ 5 ಓವರ್‌ಗಳ 7 ಜನರ ಹೊನಲು ಬೆಳಕಿನ ಸೂಪರ್ ಸಿಕ್ಸ್ ಅಂಡರ್ ಆರ್ಮ್ ಕ್ರಿಕೆಟ್‌ ಪಂದ್ಯಾಟ : ಮಾರಿಗುಡಿ ಫ್ರೆಂಡ್ಸ್ ಟ್ರೋಫಿ – 2026

Suddi Udaya

ನಾಲ್ಕೂರು ಗ್ರಾಮದ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಯ ಹಿಂಭಾಗ ಗುಡ್ಡ ಕುಸಿದು ಮನೆಗೆ ಹಾನಿಯಾಗಿದ್ದು ಇಂದು ಬಿಜೆಪಿ ಮಂಡಲದಿಂದ ಭೇಟಿ

Suddi Udaya
error: Content is protected !!