25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸುಲ್ಕೇರಿಮೊಗ್ರು ವರ್ಪಾಳೆ ಕಿಂಡಿ ಅಣೆಕಟ್ಟು ಸ್ವಚ್ಛತಾ ಕಾರ್ಯ

ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಕೆಲ ದಿನಗಳಿಂದ ಸುರಿದ ಭಾರೀ ಮಳೆಗೆ ಅಳದಂಗಡಿ ವಲಯ ಸುಲ್ಕೇರಿಮೊಗ್ರು ವ್ಯಾಪ್ತಿಯಲ್ಲಿರುವ ವರ್ಪಾಳೆ ಎಂಬಲ್ಲಿ ಫಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಕಿಂಡಿ ಅಣೆಕಟ್ಟಿನಲ್ಲಿ ಪ್ರವಾಹಕ್ಕೆ ತೇಲಿ ಬಂದ ಮರಗಳು ಹಾಗೂ ಇತರ ಕಸ ಕಡ್ಡಿಗಳು ಸೇರಿಕೊಂಡು ನೀರಿನ ಸರಾಗವಾಗಿ ಹರಿಯುವಿಕೆಗೆ ತೊಂದರೆಯಾಗಿದ್ದು ಪ್ರವಾಹ ಹೆಚ್ಚಾದಲ್ಲಿ ನದಿಯ ನೀರು ತೋಟಗಳಿಗೆ ನುಗ್ಗಿ ಹಾನಿಯಾಗುವ ಸಂಭವ ಇತ್ತು. ವಲಯ ಮೇಲ್ವಿಚಾರಕಿ ಶ್ರೀಮತಿ ಸುಮಂಗಲ ಅವರ ಗಮನಕ್ಕೆ ತಂದು ನದಿಯ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಯಿತು.


ಸ್ವಯಂಸೇವಕರಾದ ಪ್ರಕಾಶ್ ಕೊಲ್ಲಂಗೆ, ಘಟಕ ಪ್ರತಿನಿಧಿ ರಾಜೇಶ್ ಕುದುರು, ಪ್ರವೀಣ್ ನಿನಿಗಲ್, ರವಿಚಂದ್ರ ಹಾಗೂ ಶ್ರೀಕಾಂತ್ ರವರು ಸ್ವಚ್ಛತಾ ಕಾರ್ಯದಲ್ಲಿ ತೊಡಗಿಕೊಂಡರು.


ಸ್ವಯಂ ಪ್ರೇರಣೆಯಿಂದ ಸ್ಥಳೀಯರಾದ ಸುರೇಶ್ ಹಾಗೂ ವಿನೋದ್ ರವರು ಸೇವಾ ಕಾರ್ಯದಲ್ಲಿ ಕೈಜೋಡಿಸಿದರು. ಪ್ರಗತಿಪರ ಕೃಷಿಕರಾದ ಗಂಗಾಧರ ಮಿತ್ತಮಾರ್ ಸ್ಥಳಕ್ಕೆ ಆಗಮಿಸಿ ಸೂಕ್ತ ಮಾರ್ಗದರ್ಶನವನ್ನು ನೀಡಿದರು. ಸ್ವಯಂ ಸೇವಕರ ಕಾರ್ಯಕ್ಕೆ ಮೆಚ್ಚಿ ವಿನೋದ್ ರವರು ಸ್ವ ಇಚ್ಛೆಯಿಂದ ಸ್ವಯಂ ಸೇವಕರಿಗೆ ಉಪಹಾರದ ವ್ಯವಸ್ಥೆಯನ್ನು ಮಾಡಿದರು.

Related posts

ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಕರಾಟೆ ಪಂದ್ಯಾಟ: ಬಂದಾರು ಬೈಪಾಡಿಯ ಸುಮುಖ ಪಿ ಹೊಳ್ಳ ಹಾಗೂ ಸೃಷ್ಟಿ ಪಿ ಹೊಳ್ಳ ರಿಗೆ ಬೆಳ್ಳಿ ಪದಕ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ

Suddi Udaya

ಯಕ್ಷ ಭಾರತಿ ಕನ್ಯಾಡಿ ವತಿಯಿಂದ ಮುಖವರ್ಣಿಕೆಯ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

Suddi Udaya
error: Content is protected !!