September 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸುಲ್ಕೇರಿಮೊಗ್ರು ವರ್ಪಾಳೆ ಕಿಂಡಿ ಅಣೆಕಟ್ಟು ಸ್ವಚ್ಛತಾ ಕಾರ್ಯ

ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಕೆಲ ದಿನಗಳಿಂದ ಸುರಿದ ಭಾರೀ ಮಳೆಗೆ ಅಳದಂಗಡಿ ವಲಯ ಸುಲ್ಕೇರಿಮೊಗ್ರು ವ್ಯಾಪ್ತಿಯಲ್ಲಿರುವ ವರ್ಪಾಳೆ ಎಂಬಲ್ಲಿ ಫಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಕಿಂಡಿ ಅಣೆಕಟ್ಟಿನಲ್ಲಿ ಪ್ರವಾಹಕ್ಕೆ ತೇಲಿ ಬಂದ ಮರಗಳು ಹಾಗೂ ಇತರ ಕಸ ಕಡ್ಡಿಗಳು ಸೇರಿಕೊಂಡು ನೀರಿನ ಸರಾಗವಾಗಿ ಹರಿಯುವಿಕೆಗೆ ತೊಂದರೆಯಾಗಿದ್ದು ಪ್ರವಾಹ ಹೆಚ್ಚಾದಲ್ಲಿ ನದಿಯ ನೀರು ತೋಟಗಳಿಗೆ ನುಗ್ಗಿ ಹಾನಿಯಾಗುವ ಸಂಭವ ಇತ್ತು. ವಲಯ ಮೇಲ್ವಿಚಾರಕಿ ಶ್ರೀಮತಿ ಸುಮಂಗಲ ಅವರ ಗಮನಕ್ಕೆ ತಂದು ನದಿಯ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಯಿತು.


ಸ್ವಯಂಸೇವಕರಾದ ಪ್ರಕಾಶ್ ಕೊಲ್ಲಂಗೆ, ಘಟಕ ಪ್ರತಿನಿಧಿ ರಾಜೇಶ್ ಕುದುರು, ಪ್ರವೀಣ್ ನಿನಿಗಲ್, ರವಿಚಂದ್ರ ಹಾಗೂ ಶ್ರೀಕಾಂತ್ ರವರು ಸ್ವಚ್ಛತಾ ಕಾರ್ಯದಲ್ಲಿ ತೊಡಗಿಕೊಂಡರು.


ಸ್ವಯಂ ಪ್ರೇರಣೆಯಿಂದ ಸ್ಥಳೀಯರಾದ ಸುರೇಶ್ ಹಾಗೂ ವಿನೋದ್ ರವರು ಸೇವಾ ಕಾರ್ಯದಲ್ಲಿ ಕೈಜೋಡಿಸಿದರು. ಪ್ರಗತಿಪರ ಕೃಷಿಕರಾದ ಗಂಗಾಧರ ಮಿತ್ತಮಾರ್ ಸ್ಥಳಕ್ಕೆ ಆಗಮಿಸಿ ಸೂಕ್ತ ಮಾರ್ಗದರ್ಶನವನ್ನು ನೀಡಿದರು. ಸ್ವಯಂ ಸೇವಕರ ಕಾರ್ಯಕ್ಕೆ ಮೆಚ್ಚಿ ವಿನೋದ್ ರವರು ಸ್ವ ಇಚ್ಛೆಯಿಂದ ಸ್ವಯಂ ಸೇವಕರಿಗೆ ಉಪಹಾರದ ವ್ಯವಸ್ಥೆಯನ್ನು ಮಾಡಿದರು.

Related posts

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯ ವತಿಯಿಂದ ನಗರ ಸಂಕೀರ್ತಣೆ ಹಾಗೂ ರಾಮ ತಾರಕ ಮಂತ್ರ ಹೋಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಬಿವೋಕ್‌ ವಿದ್ಯಾರ್ಥಿಗಳಿಗೆ ವರ್ಡ್‌ಪ್ರೆಸ್‌ ಕಾರ್ಯಾಗಾರ

Suddi Udaya

ಚಾರ್ಮಾಡಿ : ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಶಿವಮೊಗ್ಗದಲ್ಲಿ ನಡೆದ ಭಗವದ್ಗೀತಾ ಕಂಠಪಾಠ ಸ್ಪರ್ಧೆ: ಕು. ಅದ್ವಿತಿ ರಾವ್ ದ್ವಿತೀಯ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ 3 ರ್‍ಯಾಂಕ್‌ಗಳು

Suddi Udaya

ಹಾವು ಕಡಿತದಿಂದ ಶಿಶಿಲ ಕಾರೆಗುಡ್ಡೆ ನಿವಾಸಿ ಚೋಮ ನಿಧನ

Suddi Udaya
error: Content is protected !!