ಮಡಂತ್ಯಾರು ವಲಯದ ಮಚ್ಚಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ರೂಪಾಯಿ 2,50,000 ಡಿ.ಡಿ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ದುಗ್ಗೆ ಗೌಡ ರವರು ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.
ಗ್ರಾಮದ ಮೂಲ ಬೂತ ಸೌಕಾರ್ಯ ಅಭಿವೃದ್ಧಿಗೆ ಪೂರಕವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅನುದಾನಗಳನ್ನು ಒದಗಿಸಲಾಗುತ್ತಿದೆ ಇದರ ಸದ್ಬಳಕೆ ಮಾಡಿಕೊಂಡು ಕಾಮಗಾರಿಯನ್ನು ಪೂರ್ಣಗೊಳಿಸುವ ಕುರಿತು ಮಾರ್ಗದರ್ಶನ ನೀಡಿದರು.
ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಕಾಂತ್, ಸಮಿತಿಯ ಗೌರಾಧ್ಯಕ್ಷರಾದ ಮಾದವ ಶೆಟ್ಟಿ, ನಾರಾಯಣ ಭಟ್,ತಾಲೂಕು ಪಂಚಾಯತ್ ಮಾಜಿ ಸದಸ್ಯರುರಾದ ಶ್ರೀಮತಿ ವಸಂತಿ ,ತಾಲ್ಲೂಕಿನ ಯೋಜನಾಧಿಕಾರಿ ದಯಾನಂದ ಪೂಜಾರಿ, ವಲಯ ಮೇಲ್ವಿಚಾರಕ ವಸಂತಕುಮಾರ್, ಸೇವಾಪ್ರತಿನಿಧಿ ಪರಮೇಶ್ವರ್, ಶ್ರೀಮತಿ ಮಂಜುಳ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿ ಶಂಕರ್, ಕಾರ್ಯದರ್ಶಿ ಸಂಜೀವ, ಸಮಿತಿ ಸದಸ್ಯರು, ಸಂಘದ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.