ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅ.ಪ್ರೌ. ಶಾಲೆ ಮತ್ತು ಪ. ಪೂ. ಕಾಲೇಜಿನಲ್ಲಿ ಹಣ್ಣಿನ ಗಿಡಗಳ ನಾಟಿ

ಮುಂಡಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ, ಪದವಿಪೂರ್ವ ಶಿಕ್ಷಣ ಇಲಾಖೆ ರಾಷ್ಟ್ರೀಯ ಸೇವಾ ಯೋಜನೆ, ಮುಂಡಾಜೆ ಪದವಿಪೂರ್ವ ವಿದ್ಯಾಲಯ ಮುಂಡಾಜೆ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಮುಂಡಾಜೆ ಶಿಕ್ಷಣ ಸಂಸ್ಥೆಗಳು ಮುಂಡಾಜೆ, ಗ್ರಾಮ ವಿಕಾಸ ಸಮಿತಿ, ಮುಂಡಾಜೆ ವಲಯದ ಮುಂಡಾಜೆ ಕಾರ್ಯಕ್ಷೇತ್ರದ ಒಕ್ಕೂಟದ ಹಾಗೂ ಸಾಮಾಜಿಕ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಹಣ್ಣಿನ ಗಿಡಗಳ ನಾಟಿ ಮಾಡಲಾಯಿತು.

ಈ ಸಂದರ್ಭ ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿಗಳಾದ ಸುರೇಂದ್ರ ರವರು ಪರಿಸರ ರಕ್ಷಣೆಯ ಬಗ್ಗೆ ಮಾಹಿತಿಯನ್ನು ನೀಡಿದರು. ತಾಲೂಕು ಭಜನಾ ಪರಿಷತ್ತಿನ ಅಧ್ಯಕ್ಷರಾದ ವೆಂಕಟೇಶ್ ಭಟ್ ಕಜೆ ಇವರು ಈ ಸಂದರ್ಭದಲ್ಲಿ ಮಾಹಿತಿಯನ್ನು ನೀಡಿ 20 ಗಿಡಗಳ ರಕ್ಷಣೆಗೆ ಬೇಲಿ ಮಾಡಲು ಹಳೆ ವಿದ್ಯಾರ್ಥಿ ಸಂಘದ ಮೂಲಕ ಸಹಕಾರ ನೀಡುವುದಾಗಿ ತಿಳಿಸಿದರು.

ಮುಂಡಾಜೆಯ ಕಾರ್ಗಿಲ್ ವನದ ಮುಖ್ಯಸ್ಥರಾದ ಸಚಿನ್ ಬಿಢೆ ಮುಂಡಾಜೆ, ಗ್ರಾಮ ಪಂಚಾಯತ್ ಸದಸ್ಯರಾದ ಜಗದೀಶ್ ನಾಯ್ಕ್, ಶಾಲಾ ಮುಖ್ಯೋಪಾಧ್ಯಾಯರಾದ ಜಯಂತಿ ಮತ್ತು ಚಂದ್ರಾವತಿ ,ಗ್ರಾಮ ವಿಕಾಸ ಸಮಿತಿಯ ಪ್ರಮುಖ್ ಸುಭಾಷ್ ಚಂದ್ರ ಜೈನ್, ರಾಷ್ಟ್ರೀಯ ಸೇವಾ ಸಂಘದ ನಮಿತಾ ಕೆ ಮತ್ತು ವಿದ್ಯಾರ್ಥಿಗಳು, ವಲಯದ ಮೇಲ್ವಿಚಾರಕರಾದ ಜನಾರ್ದನ್, ಸೇವಾ-ಪ್ರತಿನಿಧಿ ಶ್ರೀಮತಿ ಲೀಲಾವತಿ, ತಾಲೂಕಿನ ಕೃಷಿ ಅಧಿಕಾರಿಯದ ರಾಮ್ ಕುಮಾರ್ ,ಒಕ್ಕೂಟದ ಉಪಾಧ್ಯಕ್ಷರು ಮತ್ತು ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದು ಹಣ್ಣಿನ ಗಿಡಗಳ ನಾಟಿ ಮಾಡಲಾಯಿತು.

Related posts

ಪಿಯುಸಿ ಫಲಿತಾಂಶ: ಸಂತ ತೆರೇಸಾ ಪ.ಪೂ. ಕಾಲೇಜಿನ ನಿಶಾ ನಜ್ನಿನ್ ಗೆ 574 ಅಂಕ

Suddi Udaya

ವೇಣೂರು ಸರಕಾರಿ ಪ.ಪೂ. ಕಾಲೇಜು ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಪಟ್ರಮೆ: ಅನಾರು ನಿವಾಸಿ ಭಾಸ್ಕರ ರಾವ್ ನಿಧನ

Suddi Udaya

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕೆ.ಪಿ.ಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ

Suddi Udaya

ಮೇ 9 ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ

Suddi Udaya

ಉಜಿರೆ: ಎಸ್ ಡಿಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!