24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಹಳೇಪೇಟೆ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ಅಧ್ಯಕ್ಷರಾಗಿ ಸೂರಪ್ಪ ಗಾಂಧಿನಗರ ಅವಿರೋಧವಾಗಿ ಆಯ್ಕೆ

ಉಜಿರೆ: ಉಜಿರೆ ಹಳೇಪೇಟೆ (ಯು.ಹೆಚ್.) ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆಯು. ಜು.26 ರಂದು ಉಜಿರೆ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಈ ಸಂದರ್ಭ ನೂತನ ಸಮಿತಿ ರಚಿಸಲಾಯಿತು. ಅಧ್ಯಕ್ಷರಾಗಿ ಸೂರಪ್ಪ ಗಾಂಧಿನಗರ, ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಉಮೇಶ್ ಅತ್ತಾಜೆ, ಉಪಾಧ್ಯಕ್ಷರಾಗಿ ರಫೀಕ್ ಪಾಲ, ಕಾರ್ಯದರ್ಶಿಯಾಗಿ ಗುರುನಂದ, ಜೊತೆ ಕಾರ್ಯದರ್ಶಿಯಾಗಿ ಸುಧಾಕರ್, ಕೋಶಾಧಿಕಾರಿ ಹಂಝ ಎಂ.ಹೆಚ್., ಇವರನ್ನೊಳಗೊಂಡಂತೆ ಒಟ್ಟು 36 ಸದಸ್ಯರ ಸಮಿತಿಯನ್ನು ರಚಿಸಲಾಯಿತು.


ಗೌರವಾಧ್ಯಕ್ಷರಾದ ಉಮೇಶ್ ಅತ್ತಾಜೆ ಮಾತನಾಡಿ ಚಾಲಕರು ಕಾನೂನಿಗೆ ತಲೆಬಾಗಿ ಚಾಲನಾ ಪರವಾನಿಗೆ ಹಾಗೂ ಇತರ ಎಲ್ಲಾ ದಾಖಲೆಗಳು ಸರಿಯಾದ ರೀತಿಯಲ್ಲಿ ಇಟ್ಟುಕೊಳ್ಳಬೇಕು ಎಂದು ಹೇಳಿದರು.


ಕೋಶಾಧಿಕಾರಿ ಹಂಝ ಎಂ.ಹೆಚ್. ಮಾತನಾಡಿ ರಸ್ತೆಗಳ ಕಾಮಗಾರಿ ನಡೆಯುತ್ತಿರುವುದರಿಂದ ರಿಕ್ಷಾ ಪಾರ್ಕಿಂಗ್‌ಗೆ ಸಮಸ್ಯೆಯಾಗುತ್ತಿದೆ. ಮುಂದೆ ಸರಕಾರವು ಉಜಿರೆಯಲ್ಲಿ ಒಂದು ಉತ್ತಮವಾದ ರಿಕ್ಷಾ ಪಾರ್ಕಿಂಗ್ ವ್ಯವಸ್ಥೆ ಮಾಡಿಕೊಡಬೇಕಾಗಿ ಮನವಿ ಮಾಡಿದರು.
ಸಭೆಯಲ್ಲಿ ಬಿ.ಎಂ.ಎಸ್. ಬೆಳ್ತಂಗಡಿ ತಾಲೂಕು ಉಪಾಧ್ಯಕ್ಷರಾದ ರಮೇಶ್ ಬೊಳ್ಳಿ ಉಪಸ್ಥಿತರಿದ್ದರು.

Related posts

ಶ್ರೀ ಧ. ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಕರಕುಶಲ ಕಲೆಗಳ ಬಗ್ಗೆ ಕಾರ್ಯಾಗಾರ

Suddi Udaya

ನಾವೂರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಗುರುವಾಯನಕೆರೆ ಶ್ರೀ ವರದ ಪಾಂಡುರಂಗ ವಿಠ್ಠಲ ಮಂದಿರಕ್ಕೆ ಲೋಕೋಪಯೋಗಿ ಸಚಿವರ ಭೇಟಿ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಫೆಬ್ರವರಿ ತಿಂಗಳಲ್ಲಿ ತಾ.ಪಂ – ಜಿ.ಪಂ ಚುನಾವಣೆ: ಮೀಸಲಾತಿ ಪ್ರಕಟಣೆಯ ನಿರೀಕ್ಷೆ: ಆಯೋಗದ ಸಿದ್ಧತೆ

Suddi Udaya

ಸೌತಡ್ಕ ಬಯಲು ಗಣಪನಿಗೆ ವಾರ್ಷಿಕ ಮೂಡಪ್ಪ ಸೇವೆಯ ಸಂಭ್ರಮ   

Suddi Udaya
error: Content is protected !!