25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಶ್ರೀ ಧ. ಮಂ. ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಸಹಯೋಗದಲ್ಲಿ ವೃತ್ತಿ ಜೀವನದ ಪ್ರಯಾಣ ಎನ್ನುವ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.


ಕಾಲೇಜಿನ ಹಿರಿಯ ವಿದ್ಯಾರ್ಥಿನಿ , ಮಂಗಳೂರಿನ ಯೂನಿವರ್ಸಿಟಿ ಕನೆಕ್ಷನ್ ಸಂಸ್ಥೆಯ ಆಪ್ತ ಸಮಾಲೋಚಕಿ , ರಾಷ್ಟ್ರೀಯ ಮಟ್ಟದ ವೈಟ್ ಲಿಫ್ಟರ್ ಶ್ರದ್ಧಾ ಎಸ್ ನಾಯ್ಕ್ ಅವರು ವೃತ್ತಿ ಮಾರ್ಗದರ್ಶನ ನಡೆಸಿದರು.
ವಿವಿಧ ಕೋರ್ಸ್ ಗಳ ಮಾಹಿತಿ ಹಾಗೂ ವೃತ್ತಿಗಳ ಆಯ್ಕೆ ಬಗ್ಗೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಗ್ರಂಥಪಾಲಕ ಮನೋಹರ್ ಶೆಟ್ಟಿ ಅವರು ಶ್ರದ್ಧಾರವನ್ನು ಸನ್ಮಾನಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಅಭಿನಂದನಾ ನುಡಿಗಳನ್ನಾಡಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಸ್ಮರಣಿಕೆ ನೀಡಿ ಗೌರವಿಸಿದರು. ರಾ. ಸೇ ಯೋಜನೆಯ ನಾಯಕ ಸುದರ್ಶನ ನಾಯಕ್ ಉಪಸ್ಥಿತರಿದ್ದರು.

ಸರಣ್ಯಾ ಸ್ವಾಗತಿಸಿ , ಪಲ್ಲವಿ ಪರಿಚಯಿಸಿದರು. ಪ್ರಥಮ್ ಜೈನ್ ನಿರೂಪಿಸಿ , ಚಾರಿತ್ರ್ಯ ವಂದಿಸಿದರು.

Related posts

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya

ಕನ್ಯಾಡಿ ಸೇವಾಭಾರತಿ ಇದರ 20ನೇ ವರ್ಷದ ಸಂಭ್ರಮ: ನೂತನ ಕಟ್ಟಡಕ್ಕೆ ಭೂಮಿ ಪೂಜೆ ಮತ್ತು ಶಿಲಾನ್ಯಾಸ

Suddi Udaya

ಎಸ್‌ಡಿಪಿಐ ಸಂಸ್ಥಾಪನಾ ದಿನ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ

Suddi Udaya

ನ.16-17: ಉಜಿರೆಯಲ್ಲಿ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya

ಕಲ್ಮಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಯೋಗಾಸನದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಪ್ರಕೃತಿಯ ವಿಸ್ಮಯ: ನಾಳದಲ್ಲಿ ಮಾನವನಂತೆ ಹೋಲುವ ಸೋನೆ(ಣೆ) ಗೆಣಸು

Suddi Udaya
error: Content is protected !!