23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಡ ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರಕ್ಕೆ ಚಯರ್ ಕೊಡುಗೆ

ನಡ: ನಡ ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರದ ಸೇವಕಿ ಲೀನಾ ಹಾಗೂ ಆರೋಗ್ಯ ಸಹಾಯಕಿ ಸಾವಿತ್ರಿ ಇವರು ತಮ್ಮ ಸೇವಾ ಕೇಂದ್ರಕ್ಕೆ, ಆಗಮಿಸುವ ಜನರಿಗೆ ಕುಳಿತು ಕೊಳ್ಳಲು ಆಸನದ (ಕುರ್ಚಿ ) ಬೇಡಿಕೆಯನ್ನು ನಡ ಗ್ರಾಮ ಪಂಚಾಯತ್ ಗೆ ನೀಡಿದಾಗ, ಪಂಚಾಯತ್ ವತಿಯಿಂದ, ಸ್ನೇಹ ಸೇವಾ ಟ್ರಸ್ಟ್ ಉಜಿರೆ ಸುರೇಶ್ ಹೆಬ್ಬಾರ್ ಹಾಗೂ ಗಜಾನನ ಗೋಗಟೆ, ಇವರಲ್ಲಿ ಸಹಾಯಹಸ್ತ ಕೇಳಿದಾಗ ಕೂಡಲೇ ಸ್ಪಂದಿಸಿದ ಅವರು ಕುರ್ಚಿಯನ್ನು ದೇಣಿಗೆ ನೀಡಿರುತ್ತಾರೆ.

ಈ ಮೊದಲು ನಮ್ಮ ನಡ ಕನ್ಯಾಡಿ ಗ್ರಾಮದ 8 ಅಂಗನವಾಡಿ ಶಾಲೆಗಳಿಗೆ ಫಿಲ್ಟರ್ ನೀಡಿರುತ್ತಾರೆ. ಅದಲ್ಲದೆ ನಡ ಕನ್ಯಾಡಿ ಗ್ರಾಮಗಳ 5 ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಪುಸ್ತಕ ವಿತರಣೆ ಒದಗಿಸಿರುತ್ತಾರೆ.

ಈ ಸಂದರ್ಭದಲ್ಲಿ ನಡ ಗ್ರಾ.ಪಂ. ಅಧ್ಯಕ್ಷ ವಿಜಯ ಗೌಡ, ಉಜಿರೆ ಸ್ನೇಹ ಸೇವಾ ಟ್ರಸ್ಟ್ ನ ಸುರೇಶ್ ಹೆಬ್ಬಾರ್ ಹಾಗೂ ಗಜಾನನ ಗೋಗಟೆ, ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರದ ಲೀನಾ, ಸಾವಿತ್ರಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದಲ್ಲಿ ಸೇವೆ ಸಲ್ಲಿಸಿದವರಿಗೆ ಅಭಿನಂದನಾ ಸಭೆ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಜಾತಿ ನಿಂದನೆ, ಹಲ್ಲೆ ಪ್ರಕರಣ : ಆರೋಪಿ ಕರುಣಾಕರ ಗೌಡನಿಗೆ ನ್ಯಾಯಾಂಗ ಬಂಧನ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ್ ಮಚ್ಚಗುರಿ

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಗುರುವಾಯನಕೆರೆ ಸುಪ್ರೀಂ ಎಲೆಕ್ಟ್ರಾನಿಕ್ ಸಂಸ್ಥೆಯಲ್ಲಿ ಮೆಗಾ ಡಿಸ್ಕೌಂಟ್ ಸೇಲ್

Suddi Udaya

ಸಾವ್ಯ: ನೂಜಿಲೋಡಿಯಲ್ಲಿ ಮನೆಗೆ ನುಗ್ಗಿದ್ದ ಕಳ್ಳರು: ರೂ.2.15ಲಕ್ಷ ಮೌಲ್ಯದ ಸೊತ್ತುಗಳ ಕಳವು

Suddi Udaya

ವೇಣೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5 MVA ಶಕ್ತಿ ಪರಿವರ್ತಕವನ್ನು 12.5 MVA ಸಾಮರ್ಥ್ಯಕ್ಕೆ ಬದಲಾವಣೆ: ಸಾರ್ವಜನಿಕರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya
error: Content is protected !!