July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಅಹ್ವಾನ

ಬೆಳ್ತಂಗಡಿ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜೈನ ಧರ್ಮೀಯ ವಿದ್ಯಾರ್ಥಿಗಳಿಗೆ ಕೆಲ್ಲಗುತ್ತು ಸಬ್ರಬೈಲು ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಮೆಮೋರಿಯಲ್ ಟ್ರಸ್ಟ್ ಬೆಳ್ತಂಗಡಿ ಹಾಗೂ ಶ್ರಾವಕ ಬಂಧುಗಳ ಸಹಕಾರದಿಂದ ವಿದ್ಯಾರ್ಥಿ ಪ್ರೋತ್ಸಾಹ ಧನವನ್ನು ಕಳೆದ ಹಲವಾರು ವರ್ಷಗಳಿಂದ ನೀಡುತ್ತಾ ಬರಲಾಗುತ್ತಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನವನ್ನು ನೀಡಲಾಗುತ್ತಿದೆ.
ಅಂತೆಯೇ 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಜೈನ ಧರ್ಮೀಯ ವಿದ್ಯಾರ್ಥಿಗಳನ್ನು 2023ರ ಸೆಪ್ಟೆಂಬರ್ 21ರಂದು ಶ್ರೀ ಕ್ಷೇತ್ರ ಹೊಂಬುಜದ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಶ್ರೀ ಮದ್ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ವರ್ಯ ಮಹಾಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ವಿದ್ಯಾರ್ಥಿ ಪ್ರೋತ್ಸಾಹ ಧನವನ್ನು ನೀಡಿ ಪ್ರೋತ್ಸಾಹಿಸಲಾಗುವುದು.

 ಪ್ರಸ್ತುತ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಗಿಂತ ಮೇಲ್ಪಟ್ಟು ಪಿಯುಸಿ, ಪದವಿ, ಐಟಿಐ, ಪಾಲಿಟೆಕ್ನಿಕ್, ಬಿಬಿಎಂ, ಇಂಜಿನಿಯರಿಂಗ್, ವೈದ್ಯಕೀಯ ಇನ್ನಿತರ ವ್ಯಾಸಂಗವನ್ನು ಮುಂದುವರಿಸುತ್ತಿರುವ ವಿದ್ಯಾರ್ಥಿಗಳು ಮಾತ್ರ ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿಯನ್ನು ಶ್ರೀ ರತ್ನತ್ರಯ ಜೈನ ತೀರ್ಥ ಕ್ಷೇತ್ರದ ಕಚೇರಿಯಲ್ಲಿ ಪಡೆದುಕೊಳ್ಳುವುದು. ಮತ್ತು ಅರ್ಜಿಯೊಂದಿಗೆ ಪ್ರಸ್ತುತ ಕಲಿಯುತ್ತಿರುವ ಸಂಸ್ಥೆಯಿಂದ ವ್ಯಾಸಂಗ ಪ್ರಮಾಣ ಪತ್ರ, ಕಳೆದ ವರ್ಷ ಕಲಿತು ಉತ್ತೀರ್ಣರಾಗ ಬಗ್ಗೆ ಅಂಕಪಟ್ಟಿಯ ಯಥಾಪ್ರತಿ, ವಿದ್ಯಾರ್ಥಿಯ ಮನೆ ವಿಳಾಸ, ವಿದ್ಯಾರ್ಥಿಯ ಆಧಾರ್ ಪ್ರತಿ, ಸಂಪರ್ಕ ಸಂಖ್ಯೆ, ತಂದೆ ಮತ್ತು ತಾಯಿಯ ಹೆಸರು ನಮೂದಿಸಿ ಇವರಿಬ್ಬರಲ್ಲಿ ಒಬ್ಬರ ಸಹಿಯೊಂದಿಗೆ ಆಗಸ್ಟ್ 31ರ ಒಳಗೆ ಕೆ. ಜಯವರ್ಮರಾಜ ಬಳ್ಳಾಲ್, ಮ್ಯಾನೇಜಿಂಗ್ ಟ್ರಸ್ಟಿ, ಕೆಲ್ಲಗುತ್ತು ಸಬ್ರಬೈಲು ದಿ. ಕಿನ್ಯಮ್ಮ ಯಾನೆ ಗುಣಮತಿ ಅಮ್ಮ ಮೆಮೋರಿಯಲ್ ಟ್ರಸ್ಟ್ ( ರಿ) , ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ, ಜೈನ್ ಪೇಟೆ, ಬೆಳ್ತಂಗಡಿ- 524214, ದ.ಕ.
ಈ ವಿಳಾಸಕ್ಕೆ ತಲುಪುವಂತೆ ಕಳುಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ 08256-233577 ಅಥವಾ 9448180439 ಸಂಖ್ಯೆಯ ದೂರವಾಣಿಯನ್ನು ಸಂಪರ್ಕಿಸಬಹುದೆಂದು ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಕೆ. ಜಯವರ್ಮರಾಜ ಬಳ್ಳಾಲ್ ರ ವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.

Related posts

ಕೃಷಿಕರ ವಿರೋಧಿ, ಪರಿಶಿಷ್ಟ ವರ್ಗ ಕಡೆಗಣಿಸಿದ ಬಜೆಟ್ – ಜಿಲ್ಲಾ ಕೆ ಡಿ ಪಿ ಸದಸ್ಯ ನ್ಯಾಯವಾದಿ ಸಂತೋಷ್ ಕುಮಾರ್

Suddi Udaya

ನೀಟ್ ಫಲಿತಾಂಶ ಪ್ರಕಟ: ರಾಷ್ಟ್ರಮಟ್ಟದಲ್ಲಿ ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಉಜಿರೆಯಲ್ಲಿ ಬ್ಯೂಟಿ ಬ್ಲಂಡ್ ಸಲೂನ್ ಶುಭಾರಂಭ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಮದ್ದಡ್ಕ: ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಪಲ್ಟಿ

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿ ಕೆಲಸ ಕಾರ್ಯಗಳಿಗೊಳಿದ ಪ್ರತಿಷ್ಠಿತ `ಗಾಂಧಿ ಗ್ರಾಮ’ ಪುರಸ್ಕಾರ

Suddi Udaya
error: Content is protected !!