25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ: ಮಿತ್ತಬಾಗಿಲು ನಿವಾಸಿ ಕಬೀರ್ ಬಂಧನ

ಬೆಳ್ತಂಗಡಿ: ಮಂಗಳೂರಿನಿಂದ ಚಿಕ್ಕಮಗಳೂರಿಗೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಕುಳಿತಿದ್ದ ವಿದ್ಯಾರ್ಥಿನಿಯೋರ್ವರ ಜೊತೆ ಅಸಭ್ಯವಾಗಿ ವರ್ತಿಸಿದ ಮಿತ್ತಬಾಗಿಲು ನಿವಾಸಿ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಜು.29ರಂದು ವರದಿಯಾಗಿದೆ.

ಮಿತ್ತಬಾಗಿಲು ನಿವಾಸಿ ಗ್ರಾ.ಪಂ ಸದಸ್ಯರ ಕಬೀರ್ ಬಂಧಿತ ಆರೋಪಿಯಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇಂದು ಮಂಗಳೂರಿನಿಂದ ಚಿಕ್ಕಮಗಳೂರಿಗೆ ಪ್ರಯಾಣಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಕೊಟ್ಟಿಗೆಹಾರ ಕಡೆಯ ವಿದ್ಯಾರ್ಥಿನಿಯೋರ್ವರು ಊರಿಗೆ ಹೋಗುವ ಸಲುವಾಗಿ ಬಸ್ಸಿನಲ್ಲಿ ಕುಳಿತ್ತಿದ್ದರು. ಅದೇ ಬಸ್ಸಿಗೆ ಮಂಗಳೂರಿನ ಜ್ಯೋತಿ ಬಳಿ ಹತ್ತಿದ ಆರೋಪಿ ವಿದ್ಯಾರ್ಥಿನಿ ಕುಳಿತುಕೊಂಡಿದ್ದ ಸೀಟ್‌ನಲ್ಲಿ ಕುಳಿತುಕೊಂಡಿದ್ದು, ಮಡಂತ್ಯಾರು ತಲುಪುತ್ತಿದ್ದಂತೆ ಆಕೆಯ ಜೊತೆ ಅಸಭ್ಯವಾಗಿ ವರ್ತಿಸಿದನೆಂದು ಆರೋಪಿಸಲಾಗಿದೆ.

ಈ ಸಂದರ್ಭ ವಿದ್ಯಾರ್ಥಿನಿ ಪ್ರತಿರೋಧ ವ್ಯಕ್ತಪಡಿಸಿ, ಈ ವಿಷಯವನ್ನು ತನ್ನ ಪರಿಚಯದವರಿಗೆ ಹಾಗೂ ಮನೆಯವರಿಗೆ ಪೋನ್ ಮೂಲಕ ತಿಳಿಸಿದ್ದು, ಬಸ್ಸು ಉಜಿರೆಗೆ ಬರುತ್ತಿದ್ದಂತೆ ಚಾಲಕ ಹಾಗೂ ನಿರ್ವಾಹಕರ ಸಹಕಾರದಲ್ಲಿ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಆರೋಪಿಯ ಮೇಲೆ ಬೆಳ್ತಂಗಡಿ ಪೊಲೀಸರು ಅಸಭ್ಯವಾಗಿ ವರ್ತಿಸಿದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸಂಸ್ಕೃತೋತ್ಸವ’, ‘ಸಂಸ್ಕೃತ ಸಂಧ್ಯಾ’

Suddi Udaya

ಬೆಳ್ತಂಗಡಿ ಅಬಕಾರಿ ನಿರೀಕ್ಷಕರಾಗಿ ಲಕ್ಷ್ಮಣ ಉಪ್ಪಾರ ಕರ್ತವ್ಯಕ್ಕೆ ಹಾಜರು

Suddi Udaya

ಬಳಂಜ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಪ್ಲೇಟ್ ಇಡುವ ಸ್ಟ್ಯಾಂಡ್ ಕೊಡುಗೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷರಾಗಿ ವಾಮನ ತಾಮ್ಹ ನ್ ಕರ್ ಆಯ್ಕೆ

Suddi Udaya

ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿದ ಶಿಕ್ಷಕನ ವಿರುದ್ದ ದೂರು ದಾಖಲು

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಂಗ್ರಹ ಪತ್ತೆ: ಪ್ರಕರಣ ದಾಖಲು

Suddi Udaya
error: Content is protected !!