July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ: ಮಿತ್ತಬಾಗಿಲು ನಿವಾಸಿ ಕಬೀರ್ ಬಂಧನ

ಬೆಳ್ತಂಗಡಿ: ಮಂಗಳೂರಿನಿಂದ ಚಿಕ್ಕಮಗಳೂರಿಗೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಕುಳಿತಿದ್ದ ವಿದ್ಯಾರ್ಥಿನಿಯೋರ್ವರ ಜೊತೆ ಅಸಭ್ಯವಾಗಿ ವರ್ತಿಸಿದ ಮಿತ್ತಬಾಗಿಲು ನಿವಾಸಿ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಜು.29ರಂದು ವರದಿಯಾಗಿದೆ.

ಮಿತ್ತಬಾಗಿಲು ನಿವಾಸಿ ಗ್ರಾ.ಪಂ ಸದಸ್ಯರ ಕಬೀರ್ ಬಂಧಿತ ಆರೋಪಿಯಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇಂದು ಮಂಗಳೂರಿನಿಂದ ಚಿಕ್ಕಮಗಳೂರಿಗೆ ಪ್ರಯಾಣಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಕೊಟ್ಟಿಗೆಹಾರ ಕಡೆಯ ವಿದ್ಯಾರ್ಥಿನಿಯೋರ್ವರು ಊರಿಗೆ ಹೋಗುವ ಸಲುವಾಗಿ ಬಸ್ಸಿನಲ್ಲಿ ಕುಳಿತ್ತಿದ್ದರು. ಅದೇ ಬಸ್ಸಿಗೆ ಮಂಗಳೂರಿನ ಜ್ಯೋತಿ ಬಳಿ ಹತ್ತಿದ ಆರೋಪಿ ವಿದ್ಯಾರ್ಥಿನಿ ಕುಳಿತುಕೊಂಡಿದ್ದ ಸೀಟ್‌ನಲ್ಲಿ ಕುಳಿತುಕೊಂಡಿದ್ದು, ಮಡಂತ್ಯಾರು ತಲುಪುತ್ತಿದ್ದಂತೆ ಆಕೆಯ ಜೊತೆ ಅಸಭ್ಯವಾಗಿ ವರ್ತಿಸಿದನೆಂದು ಆರೋಪಿಸಲಾಗಿದೆ.

ಈ ಸಂದರ್ಭ ವಿದ್ಯಾರ್ಥಿನಿ ಪ್ರತಿರೋಧ ವ್ಯಕ್ತಪಡಿಸಿ, ಈ ವಿಷಯವನ್ನು ತನ್ನ ಪರಿಚಯದವರಿಗೆ ಹಾಗೂ ಮನೆಯವರಿಗೆ ಪೋನ್ ಮೂಲಕ ತಿಳಿಸಿದ್ದು, ಬಸ್ಸು ಉಜಿರೆಗೆ ಬರುತ್ತಿದ್ದಂತೆ ಚಾಲಕ ಹಾಗೂ ನಿರ್ವಾಹಕರ ಸಹಕಾರದಲ್ಲಿ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಆರೋಪಿಯ ಮೇಲೆ ಬೆಳ್ತಂಗಡಿ ಪೊಲೀಸರು ಅಸಭ್ಯವಾಗಿ ವರ್ತಿಸಿದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಮಹಾಸಭೆ

Suddi Udaya

ಡಿ.16: ಮರೋಡಿ ಶಾರದಾಂಬ ಪ್ಲೇಯರ್ಸ್ ಆಶ್ರಯದಲ್ಲಿ ಪುರುಷರ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ, “ಸ್ಪಂದನಾ ಟ್ರೋಫಿ-2023”

Suddi Udaya

ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಭೇಟಿ

Suddi Udaya
error: Content is protected !!