25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಲ್ಪಾ ಆಚಾರ್ಯ ಮನೆಗೆ ಭೇಟಿ ನೀಡಿದ ಡಿವೈಎಫ್ಐ ನಿಯೋಗ

ಬೆಳ್ತಂಗಡಿ: ಇತೀಚೆಗೆ ಎ.ಜೆ ಆಸ್ಪತ್ರೆಗೆ ಹೆರಿಗೆಗಾಗಿ ದಾಖಲಾಗಿ ವೈದ್ಯರ ನಿರ್ಲಕ್ಷ್ಯದ ಆರೋಪಕ್ಕೆ ಜೀವವನ್ನೇ ಕಳೆದುಕೊಂಡ ವೇಣೂರಿನ ಶಿಲ್ಪಾ ಆಚಾರ್ಯ ಮನೆಗೆ ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ನಿಯೋಗ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನವನ್ನು ವ್ಯಕ್ತಪಡಿಸಿದೆ.

ಶಿಲ್ಪಾ ಆಚಾರ್ಯಳ ಹೆರಿಗೆಗಾಗಿ ನಡೆದ ಶಸ್ತ್ರಚಿಕಿತ್ಸೆಯ ವೇಳೆ ಎಡವಟ್ಟಾಗಿ ಗರ್ಭಕೋಶವನ್ನು ಕಳೆದುಕೊಂಡಿದ್ದಲ್ಲದೆ ಮೆದುಳು ನಿಷ್ಕ್ರಿಯಗೊಂಡು ಕೋಮಕ್ಕೆ ತೆರಳಿ ಪ್ರಾಣವನ್ನು ಕಳೆದುಕೊಳ್ಳುವಂತಹ ಸ್ಥಿತಿಗೆ ಕಾರಣರಾದ ವೈದ್ಯರ ಹಾಗೂ ಎಜೆ ಆಸ್ಪತ್ರೆಯ ವಿರುದ್ಧ ಜಿಲ್ಲಾಡಳಿತ ಕಠಿಣ ಕಾನೂನು ಕ್ರಮಕೈಗೊಳ್ಳಲು ಹಾಗೂ ಸಾವಿಗೆ ನ್ಯಾಯಯುತ ಪರಿಹಾರವನ್ನು ಒದಗಿಸಿಕೊಡುವವರೆಗೂ ಕುಟುಂಬ ನಡೆಸುವ ಹೋರಾಟದ ಜೊತೆ ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಸಂಪೂರ್ಣವಾಗಿ ಬೆಂಬಲ ವ್ಯಕ್ತಪಡಿಸಲು ನಿರ್ಧರಿಸಿದೆ ಹಾಗೂ ಹೋರಾಟವನ್ನು ಇನ್ನಷ್ಟು ತೀವೃಗೊಳಿಸಲು ಎಲ್ಲಾ ಸಹಕಾರವನ್ನು ನೀಡಲಿದೆ ಎಂದು ನಿಯೋಗದಲ್ಲಿ ಇದ್ದವರು ‌ಹೇಳಿದರು.

ನಿಯೋಗದಲ್ಲಿ ಡಿವೈಎಫ್ಐ ದ.ಕ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್, ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ , ಡಿವೈಎಫ್ಐ ಜಿಲ್ಲಾ ಮುಖಂಡರಾದ ಯುವ ವಕೀಲ ಮನೋಜ್ ವಾಮಂಜೂರು, ಶ್ರೀನಾಥ್ ಕಾಟಿಪಳ್ಳ, ಮಿಥುನ್ ಕುತ್ತಾರ್, ಸಿಪಿಐಎಂ ಗುರುಪುರ ವಲಯ ಸಮಿತಿ ಕಾರ್ಯದರ್ಶಿ ಸದಾಶಿವದಾಸ್ , ಸಿಪಿಐಎಂ ಜಿಲ್ಲಾ ಮುಖಂಡರಾದ ವಸಂತಿ ಕುಪ್ಪೆಪದವು, ಕುಸುಮ ಆಚಾರಿ, ನೋಣಯ್ಯ ಗೌಡ, ಸಾಮಾಜಿಕ ಕಾರ್ಯಕರ್ತರಾದ ಬಾವಾ ಪದರಂಗಿ ಮುಂತಾದವರು ಉಪಸ್ಥಿತರಿದ್ದರು.

Related posts

ಮಲ್‌ಜ‌ಅ ರಂಝಾನ್ ಪ್ರಾರ್ಥನಾ ಸಮ್ಮೇಳನ ; ಸಮಾಲೋಚನಾ ಸಭೆ; ರಾಜ್ಯ ಮಟ್ಟದ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ನಿರ್ಧಾರ: ಸ್ವಾಗತ ಸಮಿತಿ ರಚನೆ

Suddi Udaya

ನ.3: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ “ಬಂಟೆರೆ ತುಡರ್ ಪರ್ಬ”

Suddi Udaya

ನೆರಿಯ: ಹಿರಿಯ ದೈವ ನರ್ತಕ ತನಿಯಪ್ಪ ನಲಿಕೆ ನಿಧನ

Suddi Udaya

ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ: ರೂ. 50 ಲಕ್ಷ ನಗದಿನೊಂದಿಗೆ ಕಾರಿನಲ್ಲಿ ಹೋಗಿದ್ದ ಮೂವರು: ನಕಲಿ ಚಿನ್ನದ ಆಸೆಗೆ ಮೂವರ ಬಲಿಯಾಯಿತೆ ಎಂಬ ಶಂಕೆ: ಸಮಗ್ರ ತನಿಖೆ ಬಳಿಕವಷ್ಟೇ ದೊರೆಯಲಿದೆ ಸ್ವಷ್ಟ ಮಾಹಿತಿ

Suddi Udaya

ಶುಭಾವಿವಾಹ ಧನಂಜಯಮತ್ತುಶೋಭಾ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ

Suddi Udaya
error: Content is protected !!